ಇನ್ಮುಂದೆ ನಡೆಯಲ್ಲ ನಕಲಿ ದಾಖಲೆ ಆಟ! ಐಟಿ ಇಲಾಖೆಗೆ ಸಿಕ್ಕಿದೆ ಬ್ರಹ್ಮಾಸ್ತ್ರ!

Published : Jul 23, 2023, 01:44 PM ISTUpdated : Jul 23, 2023, 02:02 PM IST
ಇನ್ಮುಂದೆ ನಡೆಯಲ್ಲ ನಕಲಿ ದಾಖಲೆ ಆಟ!  ಐಟಿ ಇಲಾಖೆಗೆ ಸಿಕ್ಕಿದೆ ಬ್ರಹ್ಮಾಸ್ತ್ರ!

ಸಾರಾಂಶ

ಆದಾಯ ತೆರಿಗೆ ಮಾಹಿತಿ ಸಲ್ಲಿಕೆ ವೇಳೆ ನಕಲಿ ದಾಖಲೆಗಳನ್ನು ಸಲ್ಲಿಸಿ, ಹೆಚ್ಚಿನ ವಿನಾಯ್ತಿ ಪಡೆಯುತ್ತಿರುವವರನ್ನು ಪತ್ತೆ ಹಚ್ಚುತ್ತಿರುವ ಆದಾಯ ತೆರಿಗೆ ಇಲಾಖೆ ಅವರಿಗೆಲ್ಲಾ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ.

ನವದೆಹಲಿ: ಆದಾಯ ತೆರಿಗೆ ಮಾಹಿತಿ ಸಲ್ಲಿಕೆ ವೇಳೆ ನಕಲಿ ದಾಖಲೆಗಳನ್ನು ಸಲ್ಲಿಸಿ, ಹೆಚ್ಚಿನ ವಿನಾಯ್ತಿ ಪಡೆಯುತ್ತಿರುವವರನ್ನು ಪತ್ತೆ ಹಚ್ಚುತ್ತಿರುವ ಆದಾಯ ತೆರಿಗೆ ಇಲಾಖೆ ಅವರಿಗೆಲ್ಲಾ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ. ವೇತನ ವರ್ಗದ ಆದಾಯ ತೆರಿಗೆ ಪಾವತಿದಾರರು ಈ ಹಿಂದೆ ಆದಾಯ ತೆರಿಗೆ ಇಲಾಖೆಯನ್ನು ಸುಲಭವಾಗಿ ವಂಚಿಸಬಹುದಿತ್ತು. ಆದರೆ ತೆರಿಗೆ ಇಲಾಖೆ ಇದೀಗ ಸುಧಾರಿತ ತಂತ್ರಜ್ಞಾನ ಬಳಕೆ ಮಾಡುತ್ತಿರುವ ಕಾರಣ, ತೆರಿಗೆ ವಂಚಕರನ್ನು ಸುಲಭವಾಗಿ ಪತ್ತೆ ಮಾಡಿ ಅಂಥವರಿಗೆ ನೋಟಿಸ್‌ ರವಾನಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ತೆರಿಗೆ ತಜ್ಞರ ಹೆಚ್ಚಿನ ರೀಫಂಡ್‌ ಭರವಸೆ ಹಿನ್ನೆಲೆಯಲ್ಲಿ ವೇತನ ವರ್ಗದ ತೆರಿಗೆದಾರರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಲ್ಲಿಕೆ ಮಾಡುತ್ತಿದ್ದರು. ಉದಾಹರಣೆಗೆ ಗೃಹ ಸಾಲ, ಬಂಧುಗಳಿಂದ ನಕಲಿ ಪಾವತಿ ರಸೀದಿ, ನಕಲಿ ದೇಣಿಗೆ ದಾಖಲೆಗಳನ್ನು ಸಲ್ಲಿಸುತ್ತಿದ್ದರು.

ITR Filing:ಜು. 31ರೊಳಗೆ ಐಟಿಆರ್ ಸಲ್ಲಿಕೆ ಮಾಡದಿದ್ರೆ ಬೀಳುತ್ತೆ 5 ಸಾವಿರ ರೂ. ದಂಡ; ತೆರಿಗೆ ರೀಫಂಡ್ ಕೂಡ ಇಲ್ಲ!

ಪತ್ತೆ ಹೇಗೆ?:

ಆದರೆ ಹೊಸ ಹೊಸ ತಂತ್ರಜ್ಞಾನಗಳ ಬಳಕೆ ಕಾರಣ, ಕಳೆದ 10 ವರ್ಷದಲ್ಲಿ 50 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಎಲ್ಲಾ ದಾಖಲೆಗಳನ್ನು ಸುಲಭವಾಗಿ ತಾಳೆ ಹಾಕುವುದು ಆದಾಯ ತೆರಿಗೆ ಇಲಾಖೆಗೆ ಸಾಧ್ಯ. ಅದೇ ರೀತಿ 50 ಲಕ್ಷಕ್ಕಿಂತ ಕಡಿಮೆ ವೇತನದವರ ಹಿಂದಿನ 8 ವರ್ಷಗಳ ದಾಖಲೆ ತಾಳೆ ಕೂಡಾ ಸುಲಭ. ಇದಲ್ಲದೇ, ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆ ಮಾಹಿತಿ ಕೂಡಾ ಆದಾಯ ತೆರಿಗೆ ಇಲಾಖೆಗೆ ಲಭ್ಯವಿರುವ ಕಾರಣ, ಯಾವುದೇ ಸಣ್ಣ ಸುಳ್ಳು ಮಾಹಿತಿ ಕೂಡಾ ಅವರನ್ನು ಸಿಕ್ಕಿಹಾಕಿಸಬಲ್ಲದು. ಈ ಕಾರಣಕ್ಕಾಗಿಯೇ ಈ ವರ್ಷ ಸಾಕಷ್ಟು ಪ್ರಮಾಣದ ವೇತನ ವರ್ಗದ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆಯು, ಸೂಕ್ತ ದಾಖಲೆಗಳನ್ನು ಕೇಳಿ ನೋಟಿಸ್‌ ಜಾರಿ ಮಾಡಿದೆ ಎಂದು ವರದಿಗಳು ತಿಳಿಸಿವೆ.

Youtube Channel ನಲ್ಲಿ ಹಣ ಗಳಿಸಲು ಈ ರೂಲ್ಸ್ ಫಾಲೋ ಮಾಡಿ : ಟ್ಯಾಕ್ಸ್ ಕಟ್ಟೋಕೆ ಮರೀಬೇಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!