ಜನಮೆಚ್ಚಿದ ಸಿಎಂ ಜಗನ್‌ ದೇಗುಲ ನಿರ್ಮಾಣಕ್ಕೆ ಸಿದ್ಧತೆ!

Published : Aug 06, 2020, 04:04 PM ISTUpdated : Aug 06, 2020, 04:35 PM IST
ಜನಮೆಚ್ಚಿದ ಸಿಎಂ ಜಗನ್‌ ದೇಗುಲ ನಿರ್ಮಾಣಕ್ಕೆ ಸಿದ್ಧತೆ!

ಸಾರಾಂಶ

ಜಗನ್ ಮೋಹನ್ ರೆಡ್ಡಿ ಹೆಸರಲ್ಲಿ ದೇಗುಲ ನಿರ್ಮಾಣ| ನೆಚ್ಚಿನ ಮುಖ್ಯಮಂತ್ರಿಗಾಗಿ ದೇಗುಲ ನಿರ್ಮಾಣ ಮಾಡಲು ಸಜ್ಜಾದ ಅಭಿಮಾನಿಗಳು| ದೇಗುಲ ನಿರ್ಮಾಣಕ್ಕೆ ಸ್ಥಳ ಗುರುತು

ಅಮರಾವತಿ(ಆ.06):  ವೈಎಸ್‌ಆರ್‌ ಜಗನ್‌ ಮೋಹನ್ ರೆಡ್ಡಿ , ಹೈದರಾಬಾದ್ ಸಿಎಂ ಆಗಿರುವ ಇವರು ಜನರ ಪ್ರೀತಿಯ ನಾಯಕ. ಜನ ಪರ ಯೋಜನೆಗಳಿಂದಲೇ ಗುರುತಿಸಿಕೊಂಡಿರುವ ಜಗನ್, ಜನರ ಭಾವನೆಗಳಿಗೆ ಸ್ಪಂದಿಸಿ ಅವರ ಕಷ್ಟಕ್ಕೆ ಮಿಡಿಯುತ್ತಾರೆ. ಸದ್ಯ ಜಗನ್‌ರವರ ಕಾರ್ಯ ವೈಖರಿಯನ್ನು ಮೆಚ್ಷಿಕೊಂಡಿರುವ ಜನ ಅವರ ಹೆಸರಲ್ಲಿ ದೇಗುಲವೊಂದನ್ನು ನಿರ್ಮಿಸಲು ಸಜ್ಜಾಗಿದ್ದಾರೆ. 

ಜಗನ್ ಮಾಸ್ಟರ್ ಪ್ಲಾನ್‌ಗೆ ಒಪ್ಪಿಗೆ, ಆಂಧ್ರಕ್ಕಿನ್ನು ಮೂರು ಮೂರು ರಾಜಧಾನಿ

ಹೌದು ಪಿಎಂ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ಅಭಿಮಾನಿಗಳು ಅವರಿಗೊಂದು ದೇಗುಲ ನಿರ್ಮಿಸಿ ನಿತ್ಯವೂ ಪೂಜೆ ಸಲ್ಲಿಸುತ್ತಿರುವ ವಿಚಾರ ಕೆಲ ತಿಂಗಳ ಹಿಂದಷ್ಟೇ ಸದ್ದು ಮಾಡಿತ್ತು. ಆದರೀಗ ಹೈದರಾಬಾದ್‌ನ ಪಶ್ಚಿಮ ಗೋದಾವರಿ ಜಿಲ್ಲೆಯ ಸಿಎಂ ಜಗನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗಾಗಿ ದೇಗುಲವೊಂದನ್ನು ಸ್ಥಾಪಿಸಲು ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಇಲ್ಲಿನ ಗೋಪಾಲಪುರಂ ಮಂಡಲದ ರಾಜಂಪಾಳೆನಲ್ಲಿ ದೇಗುಲ ನಿರ್ಮಿಸಲು ಜಾಗ ಗುರುತಿಸಿದ್ದಾರೆ. 

1088 ಆ್ಯಂಬುಲೆನ್ಸ್‌ಗಳಿಗೆ ಒಂದೇ ದಿನ ಜಗನ್‌ ಚಾಲನೆ

ಇನ್ನು ಭೂಮಿ ಪೂಜೆ ನಡೆದ ಬೆನ್ನಲೇ ದೇಗುಲ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸ್ಥಳೀಯ ವೈಸಿಪಿ ನಾಯಕ ಕುರುಕುರಿ ನಾಗೇಶ್ವರ ರಾವ್ ತಿಳಿಸಿದ್ದಾರೆ. ಮುಂದಿನ ತಿಂಗಳು ಸಪ್ಟೆಂರ್‌ನಲ್ಲಿ ಗೋಪಾಲಪುರಂನ ಶಾಸಕ ತಲಾರಿ ವೆಂಕಟರಾವ್‌ ಇಲ್ಲಿನ ಭೂಮಿ ಪೂಜೆ ನಡೆಸಲಿದ್ದಾರೆ. ಇನ್ನು ದೇಗುಲ ನಿರ್ಮಾಣದ ಬಳಿಕ ಸಿಎಂ ಜಗನ್ ಮೂರ್ತಿಯನ್ನು ಇಲ್ಲಿ ಪ್ರತಿಷ್ಟಾಪಿಸಲು ನಿರ್ಧರಿಸಲಾಗಿದೆ. ಇನ್ನು ಜಗನ್ ಮೋಹನ್ ರೆಡ್ಡಿ ಕ್ರಿಶ್ಚಿಯನ್ ಆಗಿದ್ದರೂ ಇಲ್ಲಿನ ಪೂಜಾ  ವಿಧಿ ವಿಧಾನಗಳೆಲ್ಲವೂ ಹಿಂದೂ ಸಂಪ್ರದಾಯದಂತೆ ನಡೆಯಲಿವೆ ಎನ್ನಲಾಗಿದೆ. 

ಈ ಹಿಂದೆ ವಿಶಾಖಪಟ್ಟಣಂನ ರಾಜಗೋಪಾಲಪುರಂನಲ್ಲೂ ದಿವಂಗತ ವೈಎಸ್‌ಆರ್‌ಗಾಗಿ ದೇಗುಲವೊಂದನ್ನು ನಿರ್ಮಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!