
ತಿರುವನಂತಪುರಂ: ಮನರೇಗಾದ ಬದಲು ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ‘ಜಿ ರಾಮ್ ಜಿ’ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ.
ಇದರೊಂದಿಗೆ ಇಂಥ ನಿರ್ಣಯ ಅಂಗೀಕರಿಸಿದ 4ನೇ ರಾಜ್ಯವಾಗಿ ಹೊರಹೊಮ್ಮಿದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ತಮಿಳುನಾಡಿನಲ್ಲಿ ಇಂತಹ ನಿರ್ಣಯ ಅಂಗೀಕಾರವಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ಗುರುವಾರ ವಿಧಾನಸಭೆಯಲ್ಲಿ ಈ ಕುರಿತ ನಿರ್ಣಯ ಮಂಡಿಸಿದರು. ವಿಪಕ್ಷಗಳ ವಿರೋಧದ ನಡುವೆ ಅವರ ನಿರ್ಣಯವನ್ನು ಅಂಗೀಕರಿಸಲಾಯಿತು.
‘ಹೊಸ ಕಾಯ್ದೆ ಅಡಿಯಲ್ಲಿ ಶೇ.40ರಷ್ಟು ಖರ್ಚನ್ನು ರಾಜ್ಯಸರ್ಕಾರ ಭರಿಸಬೇಕಾಗಿರುವುದರಿಂದ ಇದು ಹೊರೆಯಾಗಲಿದೆ. ಇವು ಹಿಂದಿನ ಕಾನೂನಿನಲ್ಲಿದ್ದ ಹಕ್ಕನ್ನು ಕಸಿಯುತ್ತದೆ. ಕೇರಳದ ಹಲವು ಗ್ರಾಮಗಳು ಈ ಯೋಜನೆಯಿಂದ ಹೊರಗುಳಿಯಬಹುದು’ ಎಂದು ಅವರು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ