
ಹೈದರಾಬಾದ್ : ‘ಕರ್ನಾಟಕದಂತೆಯೇ ತೆಲಂಗಾಣದಲ್ಲಿಯೂ ದ್ವೇಷ ಭಾಷಣವನ್ನು ನಿಷೇಧಿಸುವ ಕಾನೂನನ್ನು ಶೀಘ್ರದಲ್ಲಿಯೇ ತರಲಿದ್ದೇವೆ’ ಎಂದು ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೇಳಿದ್ದಾರೆ. ಈ ಮೂಲಕ ಇಂಥ ಕಾನೂನು ತರಲು ಹೊರಟಿರುವ ದೇಶದ 2ನೇ ರಾಜ್ಯವಾಗಿ ತೆಲಂಗಾಣ ಹೊರಹೊಮ್ಮುವ ಸಾಧ್ಯತೆ ಇದೆ.
ಶನಿವಾರ ರಾಜ್ಯ ಸರ್ಕಾರ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆ ವೇಳೆ ಮಾತನಾಡಿದ ರೆಡ್ಡಿ, ‘ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಇತ್ತೀಚೆಗೆ ದ್ವೇಷ ಭಾಷಣವನ್ನು ನಿಷೇಧಿಸುವ ಉದ್ದೇಶದ ಮಸೂದೆ ಮಂಡಿಸಿದ್ದು, ಅಲ್ಲಿನ ವಿಧಾನಮಂಡಲ ಅಂಗೀಕರಿಸಿದೆ. ನಾವು ಶೀಘ್ರದಲ್ಲಿ ದ್ವೇಷ ಭಾಷಣ ನಿಷೇಧಕ್ಕೋಸ್ಕರವಾಗಿಯೇ ಮಸೂದೆಯೊಂದನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದೇವೆ’ ಎಂದರು.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧನ) ಕಾಯ್ದೆ-2025ರ ಪ್ರಕಾರ, ಜಾತಿ, ಧರ್ಮ, ಲಿಂಗ ಸೇರಿ ಯಾವುದೇ ವರ್ಗದ ವಿರುದ್ಧ ದ್ವೇಷ ಹರಡಿದರೆ, ಅಂಥ ವ್ಯಕ್ತಿಗಳಿಗೆ 1-7 ವರ್ಷ ಜೈಲು ಶಿಕ್ಷೆ ಆಗುತ್ತದೆ. ಜತೆಗೆ 50,000 ರು. ದಂಡ ವಿಧಿಸಿ ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ