ಅನಿವಾಸಿ ಕನ್ನಡಿಗರ ಬಗ್ಗೆ ಸಚಿವರ ಕಾಳಜಿ

Published : May 08, 2020, 06:41 PM IST
ಅನಿವಾಸಿ ಕನ್ನಡಿಗರ ಬಗ್ಗೆ ಸಚಿವರ ಕಾಳಜಿ

ಸಾರಾಂಶ

ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದ ಭಾರತೀಯರನ್ನು ವಾಪಸ್‌ ಕರೆದುಕೊಂಡು ಬರುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ. ಬೆಂಗಳೂರಲ್ಲಿ ಇಳಿದ ಮೇಲೆ 14 ದಿನ ಕಡ್ಡಾಯ ಕ್ವಾರಂಟೈನ್‌ನಲ್ಲಿದ್ದು ತಮ್ಮ ಊರಿಗೆ ಮರಳಬೇಕು. ಎಲ್ಲರಿಗೂ ಸರ್ಕಾರದಿಂದಲೇ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡುವುದಾಗಿ ರಾಜ್ಯದಿಂದ ಕೇಂದ್ರಕ್ಕೆ ಒಪ್ಪಿಗೆ ಪತ್ರ ಕೊಡಲಾಗಿದೆ.

ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದ ಭಾರತೀಯರನ್ನು ವಾಪಸ್‌ ಕರೆದುಕೊಂಡು ಬರುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ. ಆದರೂ ದುಬೈನಲ್ಲಿರುವ 1900 ಕನ್ನಡಿಗರಿಗೆ ಬೆಂಗಳೂರು ಅಥವಾ ಮಂಗಳೂರಿಗೆ ಬರಲು ವಿಮಾನ ನಿಗದಿ ಆಗಿರಲಿಲ್ಲ.

ಆದರೆ ಕೇಂದ್ರ ಸಚಿವ ಸದಾನಂದಗೌಡರು ಎರಡು ದಿನ ಪ್ರಧಾನಿ ಕಾರ್ಯಾಲಯ ಮತ್ತು ವಿದೇಶಾಂಗ ಸಚಿವ ಜೈಶಂಕರ್‌ ಬಳಿ ಓಡಾಡಿ ಮುಂದಿನ ವಾರದಿಂದ ದುಬೈ-ಮಂಗಳೂರು, ದುಬೈ-ಬೆಂಗಳೂರು ವಿಮಾನ ಹಾರುವ ವ್ಯವಸ್ಥೆ ಮಾಡಿಸಿದ್ದಾರೆ. ಅಷ್ಟೇ ಅಲ್ಲ, ದಿಲ್ಲಿ ಆಸುಪಾಸು ಸಿಕ್ಕಿ ಹಾಕಿಕೊಂಡಿರುವ 700 ಕನ್ನಡಿಗರಿಗೆ ದಿಲ್ಲಿ- ಬೆಂಗಳೂರು ಟ್ರೈನ್‌ ಶುರುಮಾಡಲು ಕನ್ನಡದ 3 ಕೇಂದ್ರ ಸಚಿವರು ಪೀಯೂಷ್‌ ಗೋಯಲ್‌ಗೆ ಬೆನ್ನು ಹತ್ತಿದ್ದರಿಂದ ಇನ್ನು ನಾಲ್ಕು ದಿನದಲ್ಲಿ ದಿಲ್ಲಿಯಿಂದ ನೇರ ಟ್ರೈನ್‌ ಬೆಂಗಳೂರಿಗೆ ಬರಲಿದೆ.

ಲಾಕ್‌ಡೌನ್‌ನಿಂದ ಕೂಲಿ ಕಾರ್ಮಿಕರ ವಲಸೆ; ಕೃಷಿಗೆ ಸಿಕ್ತಾರೆ ಜನ...!

ಆದರೆ ಸಮಸ್ಯೆ ಎಂದರೆ ಟ್ರೈನ್‌ ಮಧ್ಯೆ ಎಲ್ಲಿಯೂ ನಿಲ್ಲೋದಿಲ್ಲ. ಬೆಂಗಳೂರಲ್ಲಿ ಇಳಿದ ಮೇಲೆ 14 ದಿನ ಕಡ್ಡಾಯ ಕ್ವಾರಂಟೈನ್‌ನಲ್ಲಿದ್ದು ತಮ್ಮ ಊರಿಗೆ ಮರಳಬೇಕು. ಎಲ್ಲರಿಗೂ ಸರ್ಕಾರದಿಂದಲೇ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡುವುದಾಗಿ ರಾಜ್ಯದಿಂದ ಕೇಂದ್ರಕ್ಕೆ ಒಪ್ಪಿಗೆ ಪತ್ರ ಕೊಡಲಾಗಿದೆ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ