ಮೋದಿ ರಹಸ್ಯ ಭೇಟಿ ಸೂತ್ರದಾರ ದೋವಲ್‌!

Published : Jul 04, 2020, 07:29 AM ISTUpdated : Jul 04, 2020, 10:12 AM IST
ಮೋದಿ ರಹಸ್ಯ ಭೇಟಿ ಸೂತ್ರದಾರ ದೋವಲ್‌!

ಸಾರಾಂಶ

ಮೋದಿ ರಹಸ್ಯ ಭೇಟಿ ಸೂತ್ರದಾರ ದೋವಲ್‌!| ವ್ಯೂಹಾತ್ಮಕ ಕಾರ್ಯತಂತ್ರದ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್| ಮೋದಿ ಅವರೇ ಭೇಟಿ ನೀಡಲಿದ್ದಾರೆ ಎಂಬ ವಿಚಾರ ಎಲ್ಲಿಯೂ ಲೀಕ್‌ ಆಗದಂತೆಯೇ ಹೆಚ್ಚು ಮುತುವರ್ಜಿ ವಹಿಸಿದ ದೋವಲ್‌,

ನವದೆಹಲಿ(ಜು.04): ಲಡಾಖ್‌ನ ಲೇಹ್‌ಗೆ ದಿಢೀರ್‌ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವ್ಯೂಹಾತ್ಮಕ ಕಾರ್ಯತಂತ್ರದ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಚಾಣಾಕ್ಷತನ ಕೆಲಸ ಮಾಡಿದೆ ಎಂದು ಮೂಲಗಳು ತಿಳಿಸಿವೆ.

11 ಸಾವಿರ ಅಡಿ ಎತ್ತರದಲ್ಲಿರುವ ನೀಮು: ಕಾರ್ಗಿಲ್‌ ಯುದ್ಧ ವೇಳೆ ಪ್ರಮುಖ ಪಾತ್ರ ವಹಿಸಿದ್ದ ತಾಣ!

ಪೂರ್ವ ಲಡಾಖ್‌ನ ಗಲ್ವಾನ್‌ ಹಾಗೂ ಪಾಂಗ್ಯಾಂಗ್‌ ಸರೋವರ ತನ್ನದೆಂದು ಭಾರತದ ವಿರುದ್ಧ ಗಡಿ ಬಿಕ್ಕಟ್ಟು ಸೃಷ್ಟಿಸಿದ ನೆರೆಯ ಚೀನಾಕ್ಕೆ ಕಠಿಣ ಸಂದೇಶ ರವಾನಿಸಲು ಭೂಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಮುಕುಂದ್‌ ನರವಣೆ ಅವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭೇಟಿ ನೀಡಲಿದ್ದಾರೆ ಎಂಬ ಸುದ್ದಿ ಬುಧವಾರವಷ್ಟೇ ಹೊರಬಿದ್ದಿತ್ತು. ಆದರೆ, ಉಭಯ ರಾಷ್ಟ್ರಗಳ ವಾಸ್ತವ ಗಡಿರೇಖೆಯಲ್ಲಿ ಬೀಡುಬಿಟ್ಟಿರುವ ಚೀನಾ ಮತ್ತು ಭಾರತದ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುವ ಸಂಬಂಧ ಕಮಾಂಡರ್‌ ಹಂತದ ಮಾತುಕತೆ ನಡೆದಿತ್ತು. ಹೀಗಾಗಿ, ಚೀನಾದ ನಡೆ ಏನು ಎಂಬುದನ್ನು ಕಾದು ನೋಡುವ ತಂತ್ರವಾಗಿ ರಾಜನಾಥ್‌ ಸಿಂಗ್‌ ಅವರ ಲಡಾಖ್‌ ಭೇಟಿ ರದ್ದಾಗಿದೆ ಎನ್ನಲಾಗಿತ್ತು.

"

ನರೇಂದ್ರ ಮೋದಿ ಲಡಾಖ್ ಭೇಟಿ ಹಿಂದಿನ ಅಸಲಿ ರಹಸ್ಯ

ಈ ನಡುವೆ ಲಡಾಖ್‌ಗೆ ಖುದ್ದು ಭೇಟಿ ನೀಡುವುದರಿಂದ ವ್ಯೂಹಾತ್ಮಕವಾಗಿ ಭಾರತಕ್ಕೆ ಲಾಭವಾಗಲಿದೆ ಎಂಬುದನ್ನು ಅರಿತ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು, ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸದ್ದಿಲ್ಲದೆ ಪೂರ್ಣಗೊಳಿಸಿದರು. ಮೋದಿ ಅವರೇ ಭೇಟಿ ನೀಡಲಿದ್ದಾರೆ ಎಂಬ ವಿಚಾರ ಎಲ್ಲಿಯೂ ಲೀಕ್‌ ಆಗದಂತೆಯೇ ಹೆಚ್ಚು ಮುತುವರ್ಜಿ ವಹಿಸಿದ ದೋವಲ್‌, ಮೋದಿ ಲೇಹ್‌ನಲ್ಲಿ ಯಾವೆಲ್ಲಾ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂಬುದರ ಸಂಪೂರ್ಣ ಯೋಜನೆಯನ್ನು ರೂಪಿಸಿದ್ದರು. ಅಲ್ಲದೆ, ಅದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!