
ನವದೆಹಲಿ (ಸೆ.25): ಸತತ 6ನೇ ದಿನವಾದ ಗುರುವಾರ ಕೂಡಾ ದೇಶದಲ್ಲಿ ಹೊಸ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಪ್ರಮಾಣವೇ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಬುಧವಾರ ಬೆಳಗ್ಗೆಯಿಂದ ಗುರುವಾರದ ಬೆಳಗ್ಗೆವರೆಗಿನ 24 ಗಂಟೆಯಲ್ಲಿ ದೇಶಾದ್ಯಂತ 86,508 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಆದರೆ, ಇದೇ ವೇಲೆ 87,374 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಪೈಕಿ 46.7 ಲಕ್ಷಕ್ಕಿಂತ ಹೆಚ್ಚು ಮಂದಿ ಕೊರೋನಾದಿಂದ ಗುಣವಾಗಿದ್ದಾರೆ. ಹೀಗಾಗಿ, 56 ಲಕ್ಷಕ್ಕಿಂತ ಹೆಚ್ಚು ಸೋಂಕಿಗೆ ತುತ್ತಾದವರ ಪೈಕಿ ಕೇವಲ 9.66 ಲಕ್ಷ ಮಂದಿ ಮಾತ್ರವೇ ಸಕ್ರಿಯ ಸೋಂಕಿತರಾಗಿದ್ದಾರೆ ಎಂದು ತಿಳಿಸಿದೆ.
ಕೊರೋನಾ ಕಳವಳ: ಜನರಿಗೆ ಸಲಹೆಗಳನ್ನ ಕೊಟ್ಟ ಪ್ರಧಾನಿ ಮೋದಿ ...
ಇದೇ ವೇಳೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ಹೊಸದಾಗಿ ಶೇ.74ರಷ್ಟುಪ್ರಮಾಣದಷ್ಟುಸೋಂಕಿತರು ಕೊರೋನಾವನ್ನು ಜಯಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಈಗಾಗಲೇ ಲಕ್ಷ ಲಕ್ಷ ಸಂಖ್ಯೆಯಲ್ಲಿ ದೇಶದಲ್ಲಿ ಜನರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಸಾವಿರಾರು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ