
ನವದೆಹಲಿ[ಮಾ.17]: ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಮವಾರ ಮತ್ತೆ 13 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 123ಕ್ಕೇರಿದೆ.
ಈವರೆಗೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದ ಮುಂಬೈನಲ್ಲಿ ಹೊಸದಾಗಿ 6 ಮಂದಿಗೆ ಸೋಂಕು ತಗುಲಿದೆ. ಒಡಿಶಾದಲ್ಲಿ ಇದೇ ಮೊದಲ ಬಾರಿ ಇಟಲಿಯಿಂದ ಮರಳಿದ ಒಬ್ಬನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಬೆಂಗಳೂರು, ಲಡಾಖ್, ಜಮ್ಮು-ಕಾಶ್ಮೀರ ಹಾಗೂ ಕೇರಳದಲ್ಲಿ ತಲಾ 3 ಕೊರೋನಾ ಕೇಸುಗಳು ಖಚಿತಪಟ್ಟಿವೆ.
ಈ 123 ಪ್ರಕರಣಗಳಲ್ಲಿ ಇಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ಸಮಾಧಾನದ ವಿಚಾರದಲ್ಲಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ಅತಿ ಹೆಚ್ಚು ಪ್ರಕರಣಗಳು (39) ಮಹಾರಾಷ್ಟ್ರದಲ್ಲಿ ದಾಖಲಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ