ಕೇರಳದಲ್ಲಿ ಯುಡಿಎಫ್‌ ಬಡವರಿಗೆ ವರ್ಷಕ್ಕೆ 72 ಸಾವಿರ ರು.: ರಾಹುಲ್‌ ಭರವಸೆ!

Published : Mar 24, 2021, 11:17 AM ISTUpdated : Mar 24, 2021, 11:18 AM IST
ಕೇರಳದಲ್ಲಿ ಯುಡಿಎಫ್‌ ಬಡವರಿಗೆ ವರ್ಷಕ್ಕೆ 72 ಸಾವಿರ ರು.: ರಾಹುಲ್‌ ಭರವಸೆ!

ಸಾರಾಂಶ

ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತ್ರಿ ಒದಗಿಸುವ ‘ನ್ಯಾಯ್‌’ ಯೋಜನೆ| ಕೇರಳದಲ್ಲಿ ಯುಡಿಎಫ್‌ ಬಡವರಿಗೆ ವರ್ಷಕ್ಕೆ 72 ಸಾವಿರ ರು.: ರಾಹುಲ್‌ ಭರವಸೆ!

 

ಕೊಟ್ಟಾಯಂ(ಮಾ.24): ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತ್ರಿ ಒದಗಿಸುವ ‘ನ್ಯಾಯ್‌’ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಮನ್ನಾರ್‌ಕಾಡ್‌ನಲ್ಲಿ ಆಯೋಜಿಸಿದ್ದ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ‘ನ್ಯಾಯ್‌ ಯೋಜನೆಯ ಯಶಸ್ಸಿನ ಬಗ್ಗೆ ನನಗೆ ವಿಶ್ವಾಸವಿದೆ. ಇದರನ್ವಯ ಬಡ ಕುಟುಂಬಸ್ಥರ ಬ್ಯಾಂಕ್‌ ಖಾತೆಗೆ ವಾರ್ಷಿಕ 72,000 ನೇರವಾಗಿ ತಲುಪಲಿದೆ.

ಆಮೇಲೇನಾಗುತ್ತದೆ ಎಂದು ನಮಗೆಲ್ಲ ಗೊತ್ತಿದೆ. ಇದನ್ನು ಕೇರಳದಲ್ಲಿ ಪ್ರಯೋಗಾತ್ಮಕವಾಗಿ ಜಾರಿಗೆ ತರಲಾಗುತ್ತದೆ. ಇಲ್ಲಿ ಅದು ಸಫಲವಾದರೆ ಕಾಂಗ್ರೆಸ್‌ ಆಡಳಿತದ ಎಲ್ಲಾ ರಾಜ್ಯಗಳಿಗೂ ವಿಸ್ತರಿಸುವ ಉದ್ದೇಶವಿದೆ’ ಎಂದು ಹೇಳಿದರು.

ಈ ವೇಳೆ ಎಐಸಿಸಿ ಪ್ರಧಾನ ಕಾರ‍್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಮಾಜಿ ಮುಖ್ಯಮಂತ್ರಿ ಒಮೆನ್‌ ಚಾಂಡಿ ಸೇರಿದಂತೆ ನೂರಾರು ಕಾರ‍್ಯಕರ್ತರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!
ನಾವ್ಯಾರಿಗೂ ಕಮ್ಮಿ ಇಲ್ಲ ಬ್ರೋ... ಆಹಾ ಭಾರತೀಯ ನಾರಿ ಕುಡಿದು ರಾಪಿಡೋ ಏರಿ ಬಿದ್ದಳು ಕೆಳಗೆ ಜಾರಿ: ವೀಡಿಯೋ