
ನವದೆಹಲಿ (ಫೆ.9): ಹಿಂದುಗಳಿದ ಸಮುದಾಯಗಳಲ್ಲಿರುವ, ಈಗಾಗಲೇ ಉತ್ತಮ ಸಾಧನೆ ಮಾಡಿರುವ ಕೆಲ ಶ್ರೀಮಮಂತ ಜಾತಿಗಳನ್ನು ಮೀಸಲಾತಿ ಪಟ್ಟಿಯಿಂದ ಏಕೆ ಹೊರಗಿಡಬಾರದು? ಅವರು ಕೂಡ ಸಾಮಾನ್ಯ ವರ್ಗದ ಜನರೊಂದಿಗೆ ಸ್ಪರ್ಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ಸದಸ್ಯರ ಸಾಂವಿಧಾನಿಕ ಪೀಠವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮೀಸಲು ಉಪವರ್ಗೀಕರಣಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಫೆ.14ಕ್ಕೆ ಇಷ್ಟಲಿಂಗ ಪೂಜೆ: ಕೂಡಲ ಶ್ರೀ
‘ಸದ್ಯ ಉತ್ತಮ ಸಾಧನೆಯೊಂದಿಗೆ ಮುನ್ನೆಲೆಗೆ ಬಂದಿರುವ ಕೆಲ ಸಮುದಾಯಗಳನ್ನು ಮೀಸಲಾತಿ ಪಟ್ಟಿಯಿಂದ ಹೊರಗಿಡಬಾರದೇಕೆ? ಅವರು ಏಕೆ ಮೀಸಲಾತಿಯಲ್ಲಿರಬೇಕು? ಸಾಮಾನ್ಯ ವರ್ಗಗಳೊಂದಿಗೆ ಸ್ಪರ್ಧಿಸಬೇಕು. ಮೀಸಲು ಪಟ್ಟಿಯಲ್ಲೇ ಏಕೆ ಅವರು ಇರಬೇಕು?’ ಎಂದು ಪ್ರಶ್ನಿಸಿದೆ.
ಎಲ್ಲಾ ರೀತಿಯ ಮೀಸಲಾತಿಯನ್ನು ವಿರೋಧಿಸಿದ್ದರು ನೆಹರು: ಮುಖ್ಯಮಂತ್ರಿಗಳಿಗೆ ಬರೆದ ಪತ್ರ ನೆನಪಿಸಿದ ಮೋದಿ!
ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಒಳಮೀಸಲಾತಿ ನೀಡುವ ಹಕ್ಕು
ರಾಜ್ಯ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಎಸ್ಟಿ ಎಸ್ಸಿ ಸಮುದಾಯಗಳಲ್ಲಿ ಯಾವುದೇ ಒಳ ಮೀಸಲಾತಿ ನೀಡುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗುತ್ತದೆ. ಎಸ್ಟಿ ಮತ್ತು ಎಸ್ಸಿ ಸಮುದಾಯ ಗಳನ್ನು ಮತ್ತಷ್ಟು ವರ್ಗೀಕರಿಸಲು ಹಾಗೂ ಮತ್ತೆ ಅವುಗಳಿಗೆ ಮೀಸಲಾತಿಯಲ್ಲೇ ವಿಶೇಷ ಮೀಸಲಾತಿ ನೀಡಲು ಸಾಧ್ಯವಿಲ್ಲ ಹಾಗೂ ಈ ಬಗ್ಗೆ ರಾಜ್ಯಗಳಿಗೆ ಯಾವುದೇ ಅಧಿಕಾರವಿಲ್ಲ ಎಂದು 2004ರ ಇ.ವಿ. ಚಿನ್ನಯ್ಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅದರ ಮರುಪರಿಶೀಲನೆ ಹಾಗೂ ರಾಜ್ಯಗಳ ಅಧಿಕಾರದ ಕುರಿತ ಅರ್ಜಿ ವಿಚಾರಣೆ ಇದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ