ಪ್ರಾಣ ಪ್ರತಿಷ್ಠಾಪನೆ ನೇರಪ್ರಸಾರದ ವೇಳೆ ಟಿವಿಗೆ ಕೈಮುಗಿದು ರಾಮನಿಗೆ ನಮಸ್ಕರಿಸಿದ ಒಡಿಶಾ ಸಿಎಂ!

Published : Jan 22, 2024, 02:30 PM IST
ಪ್ರಾಣ ಪ್ರತಿಷ್ಠಾಪನೆ ನೇರಪ್ರಸಾರದ ವೇಳೆ ಟಿವಿಗೆ ಕೈಮುಗಿದು ರಾಮನಿಗೆ ನಮಸ್ಕರಿಸಿದ ಒಡಿಶಾ ಸಿಎಂ!

ಸಾರಾಂಶ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಅಯೋಧ್ಯೆಗೆ ಹೋಗಲು ಸಾಧ್ಯವಾಗದ ಹಲವರು ನೇರಪ್ರಸಾರದಲ್ಲಿಯೇ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವೀಕ್ಷಿಸಿದರು.  

ಭುವನೇಶ್ವರ (ಜ.22):ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೋಮವಾರ ವರ್ಚುವಲ್‌ ಆಗಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಬಿಳಿ ಕುರ್ತಾ ಪೈಜಾಮಾ  ಧರಿಸಿದ್ದ ಅವರು ಇಡೀ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮುಗಿಯುವವರೆಗೂ ಶ್ರೀರಾಮನಿಗೆ ಕೈಮುಗಿದುಕೊಂಡೇ ಕುಳಿತಿದ್ದರು. ಅವರ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅವರೊಂದಿಗೆ 5ಟಿ ಅಧ್ಯಕ್ಷ ವಿಕೆ ಪಾಂಡಿಯನ್ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದರು. ಅವರ ಭಕ್ತಿಗೆ ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 2.7 ಎಕರೆ ಭೂಮಿಯಲ್ಲಿ ನಿಂತಿರುವ ರಾಮ ಮಂದಿರುವ ವಾಸ್ತುಶಿಲ್ಪದ ಪರಮ ವೈಭವವಾಗಿದೆ. 161 ಅಡಿ ಎತ್ತರದ ಮಂದಿರ, 235 ಅಡಿ ವ್ಯಾಪಿಸಿದೆ. ಒಟಟು 360 ಅಡಿ ಉದ್ದವನ್ನು ಹೊಂದಿದೆ.  ಪ್ರಾಚೀನ ಭಾರತದ ಎರಡು ದೇವಾಲಯ-ಕಟ್ಟಡ ಶೈಲಿಗಳಲ್ಲಿ ಒಂದಾದ ವಿಶಿಷ್ಟವಾದ ನಾಗರ ಶೈಲಿಯಲ್ಲಿ ನಿರ್ಮಿಸಲಾದ ರಾಮ ಮಂದಿರವು ಎಲ್ಲಾ ವೈದಿಕ ಆಚರಣೆಗಳನ್ನು ಅನುಸರಿಸುತ್ತದೆ ಮತ್ತು ಆಧುನಿಕ ತಂತ್ರಜ್ಞಾನವನ್ನು  ಸಂಯೋಜಿಸಿದೆ. ನಿರ್ಮಿಸಲಾದ ಪ್ರದೇಶವು ಸುಮಾರು 57,000 ಚದರ ಅಡಿಗಳನ್ನು ಒಳಗೊಂಡಿದೆ, ಇದು ಮೂರು-ಅಂತಸ್ತಿನ ರಚನೆಯನ್ನು ಹೊಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ