500 ರು. ಪಿಂಚಣಿಗಾಗಿ 100ರ ತಾಯಿಯ ಮಂಚದ ಸಮೇತ ಬ್ಯಾಂಕಿಗೆ ಕರೆತಂದಳು!

Published : Jun 15, 2020, 08:41 AM IST
500 ರು. ಪಿಂಚಣಿಗಾಗಿ 100ರ ತಾಯಿಯ ಮಂಚದ ಸಮೇತ ಬ್ಯಾಂಕಿಗೆ ಕರೆತಂದಳು!

ಸಾರಾಂಶ

500 ರು. ಪಿಂಚಣಿಗಾಗಿ 100ರ ತಾಯಿಯ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಹಿಳೆ!| ಒಡಿಶಾದಲ್ಲೊಂದು ಮನಕಲುಕುವ ಘಟನೆ, ವಿಡಿಯೋ ವೈರಲ್‌

ಭುವನೇಶ್ವರ(ಜೂ.15): ಪಿಂಚಣಿ ಹಣ ಪಡೆಯಲು, ಆಕೆ ಬದುಕಿರುವುದನ್ನು ಖಾತರಿಪಡಿಸುವ ಸಲುವಾಗಿ ಮಹಿಳೆಯೊಬ್ಬಳು 100 ವರ್ಷ ತುಂಬಿದ ತನ್ನ ತಾಯಿಯನ್ನು ಮಂಚದ ಸಮೇತ ಬ್ಯಾಂಕಿಗೆ ಎಳೆದೊಯ್ದು, ಹಣ ಪಡೆದುಕೊಂಡ ದಾರುಣ ಘಟನೆ ಒಡಿಶಾದ ನೌಪಾರಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಡ ಮಹಿಳೆಯರ ಜನಧನ್‌ ಬ್ಯಾಂಕ್‌ ಖಾತೆಗೆ ಏಪ್ರಿಲ್‌ನಿಂದ ಜೂನ್‌ ತಿಂಗಳವರೆಗೆ 500 ರು. ನರವು ನೀಡುವುದಾಗಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ 3 ತಿಂಗಳ ಅವಧಿಯ 1500 ರು. ಪಡೆಯುವ ಸಲುವಾಗಿ 60 ವರ್ಷದ ಪುಂಜಿಮತಿ ದೇವಿ ಎಂಬಾಕೆ ಉತ್ಕಲ್‌ ಗ್ರಾಮೀಣ ಬ್ಯಾಂಕಿನ ಸ್ಥಳೀಯ ಶಾಖೆಯೊಂದಕ್ಕೆ ತೆರಳಿದ್ದರು. ಆದರೆ, ಹಣ ನೀಡಲು ನಿರಾಕರಿಸಿದ್ದ ಬ್ಯಾಂಕ್‌ ಮ್ಯಾನೇಜರ್‌ ತಾಯಿಯನ್ನು ಖುದ್ದಾಗಿ ಬ್ಯಾಂಕಿಗೆ ಕರೆತರುವಂತೆ ಸೂಚಿಸಿದ್ದರು. ತನ್ನ ತಾಯಿ ಹಾಸಿಗೆ ಹಿಡಿದಿದ್ದು ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರೂ ಬ್ಯಾಂಕ್‌ ಮ್ಯಾನೇಜರ್‌ ಹಣ ನೀಡಲು ಒಪ್ಪಿರಲಿಲ್ಲ. ಹೀಗಾಗಿ ಪುಂಜಿಮತಿ ದೇವಿ ತನ್ನ ತಾಯಿಯನ್ನು ಮಂಚದ ಸಮೇತ ಬ್ಯಾಂಕಿಗೆ ಕರೆದೊಯ್ದು ಹಣ ಪಡೆದುಕೊಂಡಿದ್ದಾಳೆ.

ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ನೌಪಾರಾ ಜಿಲ್ಲಾಧಿಕಾರಿ ಮಧುಸ್ಮಿತಾ, ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಒಬ್ಬರೇ ಇದ್ದ ಕಾರಣ ಅದೇ ದಿನ ಮಹಿಳೆಯ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಮರುದಿನ ಮನೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಮ್ಯಾನೇಜರ್‌ ಭರವಸೆ ನೀಡಿದ್ದರು. ಆದರೆ, ಅಷ್ಟರೊಳಗಾಗಿಯೇ ಮಹಿಳೆ ತನ್ನ ತಾಯಿಯನ್ನು ಬ್ಯಾಂಕಿಗೆ ಕರೆತಂದಿದ್ದಾರೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸೋನಂ ವಾಂಗ್‌ಚುಕ್ ಕಡೆಗಣಿಸಿದ ಅಭಿಜಿತ್ ದೀಪ್ಕೆ; ಮೊದಲ ಗೆಲುವಲ್ಲೇ ಕಾಕ್ರೋಚ್ ಬುದ್ಧಿ ಬಯಲಾಯ್ತು!
E20 Petrol: ಸಿಜೆಪಿ ಬೆನ್ನಲ್ಲೇ E20 Janata Party ಹೆಸರಲ್ಲಿ ಹೊಸದೊಂದು ಅಭಿಯಾನ ಶುರು! ಇದರ ಬೇಡಿಕೆ ಏನು?