ಕೊರೋನಾ ಸೋಂಕು ಪತ್ತೆಯಾದರೆ ಕಚೇರಿ ಸೀಲ್‌ ಮಾಡಲ್ಲ

Suvarna News   | Asianet News
Published : Apr 29, 2020, 09:42 AM IST
ಕೊರೋನಾ ಸೋಂಕು ಪತ್ತೆಯಾದರೆ ಕಚೇರಿ ಸೀಲ್‌ ಮಾಡಲ್ಲ

ಸಾರಾಂಶ

ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಣದ ಜೊತೆ ಜೊತೆಗೆ ಆರ್ಥಿಕತೆಯನ್ನು ಪುನಾರಂಭಿಸಲು ಒತ್ತು ನೀಡುತ್ತಿದೆ. ಹೀಗಾಗಿ ಒಂದು ವೇಳೆ ಕಚೇರಿಯಲ್ಲಿ ಕೊರೋನಾ ಸೋಂಕು ಪತ್ತೆಯಾದರೂ ಕಚೇರಿ ಸೀಲ್ ಮಾಡದಿರುವ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಏ.29): ಲಾಕ್‌ಡೌನ್‌ ಅವಧಿ ಮುಗಿದ ಬಳಿಕ ಪುನಾರಂಭಗೊಳ್ಳುವ ಕಚೇರಿಗಳಲ್ಲಿ ಒಂದು ವೇಳೆ ಯಾವುದಾದರೂ ಸಿಬ್ಬಂದಿಗೆ ಕೊರೋನಾ ವೈರಸ್‌ ಇರುವುದು ಪತ್ತೆಯಾದರೆ ಇಡೀ ಕಚೇರಿಯ ಸ್ಥಳವನ್ನು ಸೀಲ್‌ ಮಾಡುವುದು ಅಥವಾ ಆ ಸ್ಥಳವನ್ನು ಕಂಟೈನ್‌ಮೆಂಟ್‌ ವಲಯವೆಂದು ಘೋಷಿಸುವುದಿಲ್ಲ. ಏಕೆಂದರೆ, ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಣದ ಜೊತೆ ಜೊತೆಗೆ ಆರ್ಥಿಕತೆಯನ್ನು ಪುನಾರಂಭಿಸಲು ಒತ್ತು ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವೇಳೆ ಕಚೇರಿಗಳಲ್ಲಿ ಸಿಬ್ಬಂದಿಗೆ ಕೊರೋನಾ ವೈರಸ್‌ ಕಂಡು ಬಂದರೆ, ಅಂಥವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಬಳಿಕ ಸ್ಥಳೀಯ ಅಧಿಕಾರಿಗಳ ಸೂಚನೆಯಂತೆ ಕಚೇರಿಯ ಸ್ಥಳವನ್ನು ಸೋಂಕು ನಾಶಕಗಳಿಂದ ಸ್ವಚ್ಛಗೊಳಿಸಲಾಗುತ್ತದೆ. ಆರೋಗ್ಯ ತಜ್ಞರ ಸಲಹೆಯಂತೆ ಜಿಲ್ಲಾ ಮ್ಯಾಜಿಸ್ಪ್ರೇಟ್‌ಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಆದರೆ, ಇಡೀ ಕಚೇರಿಯನ್ನು ಸಂಪೂರ್ಣ ಸೀಲ್‌ ಮಾಡುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಐಟಿ,ಬಿಟಿ ನೌಕರರಿಗೆ ಜುಲೈ 31ರವರೆಗೆ ವರ್ಕ್ ಫ್ರಮ್ ಹೋಮ್

ಈ ಮುನ್ನ ಆರೋಗ್ಯ ಸಚಿವಾಲಯ ಕೈಗಾರಿಕೆ ಮತ್ತು ವಾಣಿಜ್ಯಿಕ ಕೇಂದ್ರಗಳಲ್ಲಿ ಯಾರಿಗಾದರೂ ಕೊರೋನಾ ವೈರಸ್‌ ಪತ್ತೆ ಆದರೆ, ಅವುಗಳನ್ನು ಸೀಲ್‌ಡೌನ್‌ ಮಾಡುವುದಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟನೆ ನೀಡಿತ್ತು. ಕೊರೋನಾ ವೈರಸ್‌ ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಕೊರೋನಾ ಹಾಟ್‌ಸ್ಪಾಟ್‌ಗಳನ್ನು ಈಗಾಗಗಲೇ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದ್ದು, ಅಂತರ್ಜಿಲ್ಲೆ ಹಾಗೂ ಅಂತಾರಾಜ್ಯಗಳ ಓಡಾಟವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಈಗಾಗಲೇ ಹಲವಾರು ಐಟಿ-ಬಿಟಿ ಕಂಪನಿಗಳು ಮನೆಯಿಂದ ಕೆಲಸ ಮಾಡುವ ಅವಕಾಶ ಮಾಡಿಕೊಟ್ಟಿದೆ. ಜುಲೈ 31ರವರೆಗೂ ವರ್ಕ್ ಫ್ರಮ್ ಹೋಮ್ ಕೆಲಸ ಮಾಡಲು ಅನುಮತಿ ನೀಡಲಾಗಿದೆ.  
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ