Breaking: ಲಡಾಖ್‌ನಲ್ಲಿ ನದಿಗೆ ಬಿದ್ದ ಟ್ರಕ್‌: 9 ಸೈನಿಕರ ದುರ್ಮರಣ; ರಾಜನಾಥ್‌ ಸಿಂಗ್ ಸಂತಾಪ

Published : Aug 19, 2023, 10:08 PM ISTUpdated : Aug 20, 2023, 12:07 PM IST
Breaking: ಲಡಾಖ್‌ನಲ್ಲಿ ನದಿಗೆ ಬಿದ್ದ ಟ್ರಕ್‌: 9 ಸೈನಿಕರ ದುರ್ಮರಣ; ರಾಜನಾಥ್‌ ಸಿಂಗ್ ಸಂತಾಪ

ಸಾರಾಂಶ

ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ ಈ ಅಪಘಾತ ನಡೆದಿದೆ. ಮೃತರ ಪೈಕಿ ಒಬ್ಬರು ಜೂನಿಯರ್ ಕಮಿಷನ್ಡ್ ಆಫೀಸರ್ ಹಾಗೂ 8 ಜವಾನರು ಮೃತಪಟ್ಟಿದ್ದಾರೆ ಎಂದೂ ಸೇನೆ ತಿಳಿಸಿದೆ.  

ನವದೆಹಲಿ (ಅಗಸ್ಟ್‌ 19, 2023): ಲಡಾಖ್‌ನಲ್ಲಿ ಸೈನಿಕರು ಪ್ರಯಾಣಿಸ್ತಿದ್ದ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದಿದ್ದು, 9 ಸೈನಿಕರು ದುರ್ಮರಣಕ್ಕೀಡಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಬಗ್ಗೆ ಸ್ವತ: ಭಾರತೀಯ ಸೇನೆ ಮಾಹಿತಿ ನೀಡಿದೆ. 

ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಟ್ರಕ್‌ನಲ್ಲಿ 10 ಯೋಧರು ಪ್ರಯಾಣಿಸುತ್ತಿದ್ದರು ಮತ್ತು ಬೆಂಗಾವಲು ಪಡೆಯಲ್ಲಿ ಐದು ವಾಹನಗಳಿದ್ದವು ಎಂದೂ ತಿಳಿದುಬಂದಿದೆ.

ಇದನ್ನು ಓದಿ: ಕಾಶ್ಮೀರದಲ್ಲಿ ನಾಪತ್ತೆಯಾದ 25 ವರ್ಷದ ಯೋಧ: ಕಾರಿನಲ್ಲಿ ರಕ್ತದ ಕಲೆ ಪತ್ತೆ; ಉಗ್ರರಿಂದ ಕಿಡ್ನ್ಯಾಪ್‌?

ಮೃತರ ಪೈಕಿ ಒಬ್ಬರು ಜೂನಿಯರ್ ಕಮಿಷನ್ಡ್ ಆಫೀಸರ್ ಹಾಗೂ 8 ಜವಾನರು ಮೃತಪಟ್ಟಿದ್ದಾರೆ ಎಂದೂ ಸೇನೆ ತಿಳಿಸಿದೆ.  
 


"ಫಿರಂಗಿ ಘಟಕಕ್ಕೆ ಸೇರಿದ ಪಡೆಗಳು ಕರು ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದವು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ" ಎಂದು ರಕ್ಷಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದೂ ಸೇನೆ ಮಾಹಿತಿ ನೀಡಿದೆ. ಸಂಜೆ 6.30ರ ಸುಮಾರಿಗೆ ಸಂಭವಿಸಿದ ಘಟನೆಯಲ್ಲಿ ಒಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದೂ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Kargil Vijay Diwas: ವೀರ ಸೈನಿಕರ ಜತೆಗೆ ಮಿರೇಜ್ 2000 ಮತ್ತು ಬೋಫೋರ್ಸ್ ಗನ್ ಸಹ ಈ ಯುದ್ಧದ ಹೀರೋಗಳು!

ಆರಂಭದಲ್ಲಿ 7 ಜವಾನರು ಮೃತಪಟ್ಟಿದ್ದಾರೆ  ಎಂದು ತಿಳಿದುಬಂದಿತಾದರೂ, ನಂತರ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇನ್ನು, ಸೈನಿಕರ ದುರ್ಮರಣದ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಲಡಾಖ್‌ನ ಲೇಹ್ ಬಳಿ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡ ಸಿಬ್ಬಂದಿಯನ್ನು ಫೀಲ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್‌ ಪೋಸ್ಟ್‌ ಮಾಡಿದ್ದಾರೆ. 

ಇದನ್ನೂ ಓದಿ: PUBG ಲವರ್ ಸೀಮಾ ಹೈದರ್‌ ಸೋದರ, ಅಂಕಲ್‌ ಪಾಕ್‌ ಸೇನೆಯಲ್ಲಿ ಕೆಲಸ: ಪಾಕ್‌ ಮಹಿಳೆ ಬಗ್ಗೆ ಮತ್ತಷ್ಟು ಅನುಮಾನ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!
ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?