
ಬೆಂಗಳೂರು(ಜೂ.04): ಕೇರಳದಲ್ಲಿ ಗರ್ಭಿಣಿ ಆನೆಯೊಂದು ಸ್ಫೋಟಕ ತುಂಬಿದ ಅನಾನಸು ತಿಂದು ಸಾವನ್ನಪ್ಪಿತ್ತು. ನದಿಯಲ್ಲಿ ನಿಂತು ನರಳಾಡುತ್ತಾ ಅದು ಪ್ರಾಣ ಬಿಟ್ಟಿತ್ತು. ಈ ಘಟನೆ ಅನೇಕರ ನಿದ್ದೆಗೆಡಿಸಿತ್ತು. ಅಲ್ಲದೇ ಈ ಹಣ್ಣು ತಿನ್ನಿಸಿದವರನ್ನು ಹುಡುಕಿ ಕಠಿಣ ಶಿಕ್ಷೆ ವಿಧಿಸುವ ಒತ್ತಾಯವೂ ಕೇಳಿ ಬಂದಿದೆ. ಗಣ್ಯರಿಂದ ಜನ ಸಾಮಾನ್ಯರವರೆಗೆ ಎಲ್ಲರನ್ನೂ ಆ ತಾಯಾನೆ ನೋವು ಕಂಗೆಡಿಸಿತ್ತು. ಹೀಗಿರುವಾಗ ಸೋಶಿಯಲ್ ಮೀಡಿಯಾದಲ್ಲಿ ಆನೆಯ ಹಳೆ ವಿಡಿಯೋ ಒಂದು ಭಾರೀ ವೈರಲ್ ಆಗಿದೆ.
ಕೇರಳದಲ್ಲಿ ನಡೆದ ಅಮಾನವೀಯ ಘಟನೆ ಬಳಿಕ ಈ ವಿಡಿಯೋ ಭಾರೀ ವೈರಲ್ ಆಗಿದೆ. ಈ ಮೂಲಕ ಆನೆ ಮಾನವರನ್ನು ಅತಿ ಹೆಚ್ಚು ಪ್ರೀತಿಸುತ್ತದೆ. ಆದರೆ ನಾವು ಮಾನವರು ಅದರ ಪ್ರೀತಿ ಪಡೆಯಲು ಅರ್ಹರಲ್ಲ ಎಂಬ ಸಂದೇಶದೊಂದಿಗೆ ಈ ವಿಡಿಯೋ ಶೇರ್ ಮಾಡಲಾಗುತ್ತಿದೆ.
ಹೌದು ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ನೋಡಿದ ಆನೆ ನೀರಿಗಿಳಿದು ಆತನನ್ನು ಕಾಪಾಡುವ ವಿಡಿಯೋ ಇದು. ಪ್ರಾಣ ರಕ್ಷಿಸಿದ ಆನೆಗೆ ಆ ವ್ಯಕ್ತಿ ಧನ್ಯವಾದ ತಿಳಿಸುವ ಧ್ವನಿಯೂ ಈ ವಿಡಿಯೋದಲ್ಲಿ ಕೇಳಿ ಬಂದಿದೆ.
ನೇಚರ್ ಆಂಡ್ ಎನಿಮಲ್ ಹೆಸರಿನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದೆ. ಕ್ಯಾಪ್ಶನ್ನಲ್ಲಿ ಮರಿಯಾನೆ ಮನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಕಾಪಾಡಲು ನೀರಿಗಿಳಿದಿದೆ. ಆದರೆ ವಾಸ್ತವವಾಗಿ ನಾವು ಅದರ ಪ್ರೀತಿಗೆ ಅರ್ಹರಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ