ಕರ್ತವ್ಯ ನಿಷ್ಠೆ ಪ್ರಶ್ನಿಸಿದ ಕಾಂಗ್ರೆಸ್‌ ಸಂಸದನಿಗೆ ಸ್ಪೀಕರ್‌ ಬಿರ್ಲಾ ಎಚ್ಚರಿಕೆ!

Published : Nov 22, 2019, 10:38 AM ISTUpdated : Nov 22, 2019, 10:41 AM IST
ಕರ್ತವ್ಯ ನಿಷ್ಠೆ ಪ್ರಶ್ನಿಸಿದ ಕಾಂಗ್ರೆಸ್‌ ಸಂಸದನಿಗೆ ಸ್ಪೀಕರ್‌ ಬಿರ್ಲಾ ಎಚ್ಚರಿಕೆ!

ಸಾರಾಂಶ

ಕರ್ತವ್ಯ ನಿಷ್ಠೆ ಪ್ರಶ್ನಿಸಿದ ಕಾಂಗ್ರೆಸ್‌ ಸಂಸದನಿಗೆ ಸ್ಪೀಕರ್‌ ಬಿರ್ಲಾ ಎಚ್ಚರಿಕೆ|  ಪಂಜಾಬ್‌ ಮೂಲದ ಕಾಂಗ್ರೆಸ್‌ ಸಂಸದ ರವನೀತ್‌ ಸಿಂಗ್‌ಗೆ ಎಚ್ಚರಿಕೆ 

ನವದೆಹಲಿ[ನ.22]: ಲೋಕಸಭಾ ಸ್ಪೀಕರ್‌ ಹುದ್ದೆಯ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆ ಮಾಡಿದ ಕಾಂಗ್ರೆಸ್‌ ಸದಸ್ಯರೊಬ್ಬರಿಗೆ ಸ್ಪೀಕರ್‌ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿದ ಘಟನೆ ಶುಕ್ರವಾರದ ಸಂಸತ್ತಿನ ಕಲಾಪದ ವೇಳೆ ನಡೆದಿದೆ.

ಶುಕ್ರವಾರದ ಲೋಕಸಭಾ ಕಲಾಪದ ಶೂನ್ಯ ವೇಳೆ ಪಂಜಾಬ್‌ ಮೂಲದ ಕಾಂಗ್ರೆಸ್‌ ಸಂಸದ ರವನೀತ್‌ ಸಿಂಗ್‌ ಬಿಟ್ಟು ಅವರು, ಗಾಂಧಿ ಕುಟುಂಬದ ಎಸ್‌ಪಿಜಿ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಪ್ರಸ್ತಾಪಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್‌ ಓಂ ಬಿರ್ಲಾ ಅವರು, ಪ್ರತಿಯೊಬ್ಬ ಸದಸ್ಯರು ಶೂನ್ಯ ಅವಧಿಯಲ್ಲಿ ಸಂಕ್ಷಿಪ್ತವಾಗಿ ಮಾತನಾಡಬೇಕು. ಅಲ್ಲದೆ, ಗಾಂಧಿ ಕುಟುಂಬಕ್ಕೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆ ವಾಪಸ್‌ ಪಡೆದಿರುವ ಬಗ್ಗೆ ಈಗಾಗಲೇ ಹಲವು ಬಾರಿ ಪ್ರಸ್ತಾಪಿಸಲಾಗಿದೆ. ಹೀಗಾಗಿ, ಮತ್ತೋರ್ವ ಸಂಸದನಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟರು.

ಹೊಸ ಸಂಸತ್ತು, ಹೊಸ ರಾಜಪಥ: ಮೋದಿ ಸರ್ಕಾರದ ಪ್ಲಾನ್‌ ಏನು? ಈಗ ಹೇಗಿದೆ?

ಆಗ ಕ್ರೋಧಗೊಂಡ ಕಾಂಗ್ರೆಸ್‌ ಸಂಸದ ಬಿಟ್ಟು ಅವರು, ನೀವು ಸಹ ಅವರ(ಬಿಜೆಪಿ ಸರ್ಕಾರದ) ಜೊತೆ ಕೈಜೋಡಿಸಿದ್ದೀರಿ ಎಂದು ಏರುಧ್ವನಿಯಲ್ಲಿ ಹೇಳಿದ್ದಾರೆ. ಆಗ, ಸ್ಪೀಕರ್‌ ಸ್ಥಾನದ ಕುರಿತಾಗಿ ಈ ರೀತಿ ಹಗುರವಾಗಿ ಮಾತನಾಡಬೇಡಿ. ನೀವು ಮಾತನಾಡಲು ಮತ್ತೊಮ್ಮೆ ಅವಕಾಶ ಪಡೆಯಲಿದ್ದೀರಿ ಎಂದು ಕೈ ಸಂಸದ ಬಿಟ್ಟುಗೆ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು