
ಶ್ರೀನಗರ[ಫೆ.10]: ಅವಿಭಜಿತ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹ ಬಂಧನ ವಿಸ್ತರಣೆಗೆ ಸರ್ಕಾರ ಕಾರಣ ಕೊಟ್ಟಿರುವ ಕಾರಣಗಳು ಬಹಿರಂಗವಾಗಿದೆ.
ಜನರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಇರುವುದರಿಂದ ಓಮರ್ ಅಬ್ದುಲ್ಲಾ ಹಾಗೂ ಪ್ರತ್ಯೇಕತಾವಾದಿಗಳ ಜತೆ ಸಂಪರ್ಕ ಇರುವುದರಿಂದ ಮೆಹಬೂಬ ಮುಫ್ತಿ ಅವರ ಗೃಹ ಬಂಧನ ವಿಸ್ತರಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಗಡ್ಡಧಾರಿ ಒಮರ್: ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾಗಿದ್ದು, ರೇಜರ್ ಅಲ್ಲ ಅಂದ್ರು ಸಿಂಗ್!
2009-14ರ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಓಮರ್ ಅಬ್ದುಲ್ಲಾ, ವಿಶೇಷಾಧಿಕಾರ ರದ್ದಿನ ವಿರುದ್ದ ಜನರನ್ನು ಪ್ರಚೋದನೆಗೆ ಒಳಗಾಗುವಂತೆ ಮಾಡಿದ್ದರು. ಇದು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿತ್ತು ಎಂದು ಹೇಳಲಾಗಿದೆ. 370ನೇ ವಿಧಿ ರದ್ದು ಮಾಡುವ ಮೂಲಕ ಕಾಶ್ಮೀರದ ಮೇಲೆ ಅಕ್ರಮಣ ಮಾಡಲಾಗಿದೆ ಎಂದು ಮೆಹಬೂಬ ಮುಫ್ತಿ ಹೇಳಿದ್ದರು. ಅಲ್ಲದೇ ಅವರು ಬೆಂಬಲ ನೀಡುವ ಇಮಾತ್-ಎ-ಇಸ್ಲಾಮಿಯ ಸಂಘಟನೆಯನ್ನು ಅಕ್ರಮ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.
2009 ಆ.6 ರಿಂದ ಈ ಇಬ್ಬರು ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಫೆ.6 ರಂದು ಆರು ತಿಂಗಳು ತುಂಬಿದ ಹಿನ್ನೆಲೆ ನಿಯಮಾನುಸಾರ ಬಂಧನವನ್ನು ಮತ್ತೆ ಆರು ತಿಂಗಳು ವಿಸ್ತರಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ