ನೆಹರು ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ದ್ವೇಷ? ಕೇಂದ್ರಕ್ಕೆ ಶಿವಸೇನಾ ನಾಯಕ ರಾವತ್ ಪ್ರಶ್ನೆ!

Published : Sep 05, 2021, 05:43 PM IST
ನೆಹರು ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ದ್ವೇಷ? ಕೇಂದ್ರಕ್ಕೆ ಶಿವಸೇನಾ ನಾಯಕ ರಾವತ್ ಪ್ರಶ್ನೆ!

ಸಾರಾಂಶ

75ನೇ ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಬಿಡುಗಡೆ ಮಾಡಿದ ಫೋಟದಲ್ಲಿ ನೆಹರು ಕಾಣೆ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ, ಇದೀಗ ಮೈತ್ರಿ ಪಕ್ಷ ಶಿವಸೇನೆ ನಾಯಕನ ಪ್ರಶ್ನೆ ಮಾಜಿ ಪ್ರಧಾನಿ ನೆಹರು ದ್ವೇಷಿಸುತ್ತಿರುವುದು ಯಾಕೆ? ಬಿಜೆಪಿಗೆ ಸಂಜಯ್ ರಾವತ್ ಪ್ರಶ್ನೆ

ಮುಂಬೈ(ಸೆ.05) ಮಾಜಿ ಪ್ರಧಾನಿ ನೆಹರು ಫೋಟೋ ವಿವಾದ ಭಾರಿ ಸದ್ದು ಮಾಡುತ್ತಿದೆ. ಭಾರತೀಯ ಕೌನ್ಸಿಲ್ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಬಿಡುಗಡೆ ಮಾಡಿದ ಫೋಟೋದಲ್ಲಿ ಎಲ್ಲಾ ಪ್ರಧಾನಿಗಳ ಭಾವಚಿತ್ರ ಹಾಕಲಾಗಿದೆ. ಆದರೆ ನೆಹರು ಫೋಟೋ ಮಾಯವಾಗಿತ್ತು. ಈ ಕುರಿತು ಕಾಂಗ್ರೆಸ್ ತೀವ್ರ ಆಕ್ಷೇಪ ಸಲ್ಲಿಸಿತ್ತು. ಇದೀಗ ಮೈತ್ರಿ ಪಕ್ಷ ಶಿವಸೇನಾ ನಾಯಕ ಸಂಜಯ್ ರಾವತ್ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ನೆಹರೂ ದ್ವೇಷಿಸುತ್ತಿರುವುದೇಕೆ ಎಂದು ರಾವತ್ ಕೇಳಿದ್ದಾರೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ: ನೆಹರೂ ಫೋಟೋ ಮಾಯ, ಕಾಂಗ್ರೆಸ್‌ ಕಿಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದವರು ಇತಿಹಾಸ ಉಲ್ಲೇಖಿಸಿದರೆ ಇದಕ್ಕಿಂತ ಭಿನ್ನವಾಗಿ ನಿರೀಕ್ಷಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ವೀರನನ್ನು ಹೊರಗಿಟ್ಟು ಪೋಸ್ಟರ್ ಹಾಕಿರುವ ಬಿಜೆಪಿ, ನೆಹರುವನ್ನು ದ್ವೇಷಿಸಲು ಕಾರಣವೇನು ಎಂದು ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

ನೆಹರೂ ಈ ದೇಶದಲ್ಲಿ ಹಲವು ವಿದ್ಯಾಸಂಸ್ಥೆಗಳನ್ನು ಕಟ್ಟಿದ್ದಾರೆ. ನೆಹರೂ ಸಿದ್ಧಾಂತಕ್ಕೆ, ನಿರ್ಧಾರಗಳಿಗೆ ವಿರೋಧವಿರಬಹುದು. ಆದರೆ ಅವರ ಕೊಡುಗೆಯನ್ನು ಕಡೆಗಣಿಸಲು ಸಾಧ್ಯವೇ ಎಂದು ರಾವತ್ ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ. ಕೇಂದ್ರ ಸರ್ಕಾರ
ಯೋಜನೆಗಳು ನೆಹರು ದೂರದೃಷ್ಟಿಯ ಯೋಜನೆಗಳಾಗಿವೆ. ಯೋಜನೆ ಆರಂಭದಲ್ಲಿ ನೆಹರೂ ದೂರದೃಷ್ಟಿ ಎಂದು ಬಿಂಬಿಸುವ ಬಿಜೆಪಿ ನೆಹರೂ ಫೋಟೋವನ್ನೇ ಮಾಯಮಾಡಿದ್ದು ಯಾಕೆ ಎಂದಿದ್ದಾರೆ.

ನೆಹರೂ ಫೋಟೋವನ್ನು ಪೋಸ್ಟರ್‌ನಿಂದ ತೆಗೆದ ಕಾರಣವನ್ನು ದೇಶದ ಜನತೆ ಮುಂದೆ ಬಹಿರಂಗ ಪಡಿಸಬೇಕು. ಬಿಜೆಪಿ ನಿಲುವುಗಳು, ಅಸಲಿ ಮುಖ ಜನರಿಗೆ ತಿಳಿಯಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!