ಶಬರಿಮಲೆಗೆ ಪ್ರವೇಶ ಯತ್ನ, ಪೊಲೀಸ್ ಕಮಿಷನರ್ ಕಚೇರಿ ಎದುರೇ ಮಹಿಳೆ ಕಣ್ಣಿಗೆ ಪೆಪ್ಪರ್ ಸ್ಪ್ರೇ!

Published : Nov 26, 2019, 12:09 PM ISTUpdated : Nov 26, 2019, 05:11 PM IST
ಶಬರಿಮಲೆಗೆ ಪ್ರವೇಶ ಯತ್ನ, ಪೊಲೀಸ್ ಕಮಿಷನರ್ ಕಚೇರಿ ಎದುರೇ ಮಹಿಳೆ ಕಣ್ಣಿಗೆ ಪೆಪ್ಪರ್ ಸ್ಪ್ರೇ!

ಸಾರಾಂಶ

ಶಬರಿಮಲೆ ದೇಗುಲಕ್ಕೆ ಮಹಿಳೆಯ ಪ್ರವೇಶ ವಿವಾದ| ದೇಗುಲ ಪ್ರವೇಶಿಸಲು ಯತ್ನಿಸುತ್ತಿದ್ದ ಮಹಿಳೆಯ ಮೇಲೆ ಪೆಪ್ಪರ್ ಸ್ಪ್ರೇ ದಾಳಿ| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಕೊಚ್ಚಿ[ನ.26]: ಶಬರಿಮಲೆ ಮಂದಿರಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಮಹಿಳಾ ಕಾರ್ಯಕರ್ತೆಯ ಮೇಲೆ ವ್ಯಕ್ತೊಯೊಬ್ಬ ದಾಳೀ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. 

ಮಹಿಳಾ ಕಾರ್ಯಕರ್ತೆ ಬಿಂದು ಅಮ್ಮಿನಿ ಎಂಬಾಕೆ ಶಬರಿಮಲೆ ಅಯ್ಯಪ್ಪ ಮಂದಿರಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದರು. ಈ ವೆಳೆ ಪೊಲೀಸ್ ಕಮಿಷನರ್ ಕಚೇರಿ ಎದುರು ಬಿಂದು ಮೇಲೆ ಅನಾಮಿಕ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾರೆ. ಅವರ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದು ಆತ ಪರಾರಿಯಾಗಿದ್ದಾನೆ. 

ಈ ಘಟನೆಯನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದ್ದು, ಬಿಂದು ತನ್ನ ಮುಖ ಮುಚ್ಚಿ ಓಡಿ ಹೋಗುತ್ತಿರುವುದನ್ನು ನೋಡಬಬಹುದಾಗಿದೆ. ಸದ್ಯ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಕೂಡಾ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳವಾರದಂದು ಕೇರಳಕ್ಕೆ ಆಗಮಿಸಿದ್ದಾರೆ. ದೇಸಾಯಿ ಹಾಗೂ ಅನ್ಯ ಮಹಿಳಾ ಕಾರ್ಯಕರ್ತರು ಮಂಗಳವಾರದಂದು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅಲ್ಲಿಂದ ಅವರನ್ನು ಕೊಚ್ಚಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕರೆದೊಯ್ಯಲಾಗಿದೆ. ಸಂವಿಧಾನ ದಿನದಂದು ತಾವು ಶಬರಿಮಲೆ ದೇಗುಲದಲ್ಲಿ ಪೂಜೆ ಮಾಡುವುದಾಗಿ ತಿಳಿಸಿದ್ದಾರೆ.

ನವೆಂಬರ್ 26ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು