
ಮಹಾರಾಷ್ಟ್ರ(ಡಿ.06): ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟಬನೆ ಹನ್ನೊಂದನೇ ದಿನಕ್ಕೆ ತಲುಪಿದೆ. ಅಲ್ಲದೇ ಡಿಸೆಂಬರ್ 8 ರಂದು ಭಾರತ್ ಬಂದ್ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ರೈತರ ಈ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳೂ ಬೆಂಬಲ ಸೂಚಿಸಿವೆ. ಹೀಗಿರುವಾಗಲೇ ಎನ್ಸಿಪಿ ನಾಯಕ ಶರದ್ ಪವಾರ್ ಕೂಡಾ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಶೀಘ್ರವೇ ಈ ಸಮಸ್ಯೆ ಬಗೆಹರಿಯದಿದ್ದರೆ ದೇಶಾದ್ಯಂತ ಇರುವ ರೈತರು ಪಂಜಾಬ್ ಹಾಗೂ ಹರ್ಯಾಣದ ರೈತರೊಂದಿಗೆ ಸೇರಿ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ ಎಂದಿದ್ದಾರೆ.
"
'ಇಂದಿರಾ ಗಾಂಧಿಗೆ ಪಾಠ ಕಲಿಸಿದಂತೆ 2024ರಲ್ಲಿ ಮೋದಿಗೆ ಜನರು ತಕ್ಕಪಾಠ ಕಲಿಸ್ತಾರೆ'
ಈ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್ 'ಪಂಜಾಬ್ ಹಾಗೂ ಹರ್ಯಾಣದ ರೈತರು ಗೋಧಿ ಹಾಗೂ ಧಾನ್ಯಗಳ ಬಹುದೊಡ್ಡ ಉತ್ಪಾದಕರಾಗಿದ್ದಾರೆ. ಅವರೇ ಪ್ರತಿಭಟಿಸುತ್ತಿದ್ದಾರೆ. ಹೀಗಿರುವಾಗ ಈ ಸಮಸ್ಯೆ ಬಗೆಹರಿಯದಿದ್ದರೆ ಶೀಘ್ರದಲ್ಲೇ ದೇಶಾದ್ಯಂತ ಇರುವ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಸೂದೆ ಪಾಸ್ ಮಾಡುವಾಗಲೂ ನಾವು ಸರ್ಕಾರದ ಬಳಿ ಈ ವಿಚಾರದಲ್ಲಿ ಅವಸರ ಮಾಡಬೇಡಿ ಎಂದು ಮನವಿ ಮಾಡಿದ್ದೆವು' ಎಂದಿದ್ದಾರೆ.
ಪ್ರತಿಭಟಿಸುತ್ತಿರುವವರು ನಿಜವಾದ ರೈತರಲ್ಲ: ಕೇಂದ್ರ ಸಚಿವರ ಹೇಳಿಕೆ!
ಬಿಲ್ ವಿಚಾರದಲ್ಲಿ ಚರ್ಚೆ ನಡೆಯುವುದು ಸಗತ್ಯವಾಗಿತ್ತು. ಆದರೆ ಹೀಗಾಗಲಿಲ್ಲ. ಆದರೀಗ ಸರ್ಕಾರಕ್ಕೆ ಈ ಅವಸರ ಈಗ ಕುತ್ತು ತಂದಿದೆ ಎಂದಿದ್ದಾರೆ ಎಂದಿದ್ದಾರೆ. ಇದಕ್ಕೂ ಮುನ್ನ ತೆಲಂಗಾಣದ ಸಿಎಂ ಹಾಗೂ ಟಿಆರ್ಎಸ್ ಚೀಫ್ ಕೆಸಿಆರ್ ಕೂಡಾ ರೈತರ ಪ್ರತಿಭಟನೆ ಬೆಂಬಲಿಸಿದ್ದರು ಹಾಗೂ ಈ ಬಿಲ್ ರೈತ ವಿರೋಧಿಯಾಗಿದೆ ಎಂದಿದ್ದರು. ಈ ಹೊಸ ಕಾನೂನು ರದ್ದುಗೊಳಿಸುವವರೆಗೂ ರೈತರು ಪ್ರತಿಭಟನೆ ಮುಂದುವರೆಸಬೇಕೆಂದೂ ಕೆಸಿಆರ್ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ