
ನವದೆಹಲಿ(ಆ.25): ನಾಗಾಲೋಟದಿಂದ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಸೋಮವಾರ ಕೊಂಚ ಇಳಿಕೆ ಆಗಿದೆ. ಅಲ್ಲದೇ ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾದವರ ಸಂಖ್ಯೆ ಹೆಚ್ಚಳಗೊಂಡಿದೆ.
ಗುಡ್ ನ್ಯೂಸ್ : ರಾಜ್ಯದಲ್ಲಿ ಕೊರೋನಾ ಹರಡುವ ವೇಗ ಇಳಿಕೆ
ಸೋಮವಾರ 53,669 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 31.53ಲಕ್ಷಕ್ಕೆ ಏರಿದೆ. ಇನ್ನು ನಿನ್ನೆ ಕೊರೋನಾಕ್ಕೆ 722 ಮಂದಿ ಬಲಿ ಆಗಿದ್ದು, ಸಾವಿನ ಸಂಖ್ಯೆ 58,335ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಇದೇ ಗತಿಯಲ್ಲಿ ಸಾಗಿದರೆ ಕೊರೋನಾ ಸಾವಿನ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿರುವ ಮೆಕ್ಸಿಕೋ (60,480)ವನ್ನು ಕೂಡ ಭಾರತ ಸದ್ಯದಲ್ಲೇ ಹಿಂದಿಕ್ಕಲಿದೆ. ಅಮೆರಿಕ (180,724), ಬ್ರೆಜಿಲ್ (114,772) ಸಾವಿನೊಂದಿಗೆ ಮೊದಲ ಎರಡು ಸ್ಥಾನದಲ್ಲಿವೆ.
ಉಸೇನ್ ಬೋಲ್ಟ್ಗೂ ವಕ್ಕರಿಸಿದ ಕೊರೋನಾ; ಕ್ರಿಸ್ ಗೇಲ್ಗೂ ಶುರುವಾಯ್ತು ಭೀತಿ..!
ಈ ಮಧ್ಯೆ ಕೊರೋನಾದಿಂದ ಸೋಮವಾರ ಒಂದೇ ದಿನ 62,467 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 23.90ಲಕ್ಷಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಶೇ.75.27ಕ್ಕೆ ಏರಿಕೆ ಕಂಡಿರುವುದು ಆಶಾವಾದ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ