
ನವದೆಹಲಿ(ಏ.21): ದೇಶಾದ್ಯಂತ ಮರಣಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ಇದೀಗ ರಾಷ್ಟ್ರಪತಿ ಭವನದಲ್ಲೂ ಆತಂಕ ಹುಟ್ಟುಹಾಕಿದೆ. ರಾಷ್ಟ್ರಪತಿ ಭವನದ ಸ್ವಚ್ಛತಾ ಸಿಬ್ಬಂದಿಯೊಬ್ಬರ ಸಂಬಂಧಿಯೊಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ಆವರಣದಲ್ಲಿರುವ 125 ಕುಟುಂಬಗಳನ್ನು ಹೋಮ್ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
"
ಹಾಲಿ ಸೋಂಕು ಪತ್ತೆಯಾಗಿರುವ ವ್ಯಕ್ತಿಯ ತಾಯಿ ಮೂರು ದಿನಗಳ ಹಿಂದಷ್ಟೇ ಕೊರೋನಾದಿಂದ ಸಾವನ್ನಪ್ಪಿದ್ದರು. ಆ ಮಹಿಳೆಯ ಅಂತ್ಯಸಂಸ್ಕಾರ ಮತ್ತು ಅದಕ್ಕೂ ಮುನ್ನ ಆಸ್ಪತ್ರೆಯಲ್ಲಿ ಆಕೆಯನ್ನು ಭೇಟಿ ಮಾಡಲು ಹೋಗಿಬಂದಿದ್ದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಸ್ಚಚ್ಛತಾ ಸಿಬ್ಬಂದಿಯ ಕುಟುಂಬವನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು.
ಕೊರೋನಾ ಗೂಂಡಾಗಳಿಗೆ 2 ವರ್ಷ ಜೈಲು, ದಂಡ?: ಸುಗ್ರೀವಾಜ್ಞೆ ಜಾರಿಗೆ ನಿರ್ಧಾರ!
ಇದೀಗ ಆ ಮಹಿಳೆಯ ಪುತ್ರನಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ವ್ಯಾಪ್ತಿಯಲ್ಲೇ ಇರುವ 125 ಕುಟುಂಬಗಳ 500ಕ್ಕೂ ಹೆಚ್ಚು ಜನರನ್ನು ಐಸೋಲೇಷನ್ನಲ್ಲಿ ಇಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುಟುಂಬಗಳ ಯಾವುದೇ ಸದಸ್ಯರು ತಾವಿರುವ ಸ್ಥಳದಿಂದ ಹೊರಬಾರದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ