
ಇಂಫಾಲ್(ಸೆ.11): ಜನಾಂಗೀಯ ಸಂಘರ್ಷ ಪೀಡಿತ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಮಂಗಳವಾರ ನಡೆದ ‘ರಾಜಭವನ ಚಲೋ’ ಹಿಂಸೆಗೆ ತಿರುಗಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಆಗ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಮಣಿಪುರದ 3 ಜಿಲ್ಲೆಗಳಾದ ಇಂಫಾಲ್ ಪೂರ್ವ ಮತ್ತು ಪಶ್ಚಿಮ ಹಾಗೂ ಥೌಬಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಮತ್ತೊಂದು ಕಡೆ ಸೆ.15ರವರೆಗೆ ರಾಜ್ಯದ 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಶಾಂತಿ ಸ್ಥಾಪನೆಗೆ 2000 ಮಂದಿಯ 2 ಸಿಆರ್ಪಿಎಫ್ ಬೆಟಾಲಿಯನ್ ನಿಯೋಜಿಸಲು ಆದೇಶಿಸಲಾಗಿದೆ.
ಭಾರತದ ಕಾಶ್ಮೀರ & ಮಣಿಪುರಕ್ಕೆ ಭೇಟಿ ನೀಡದಿರಿ: ತನ್ನ ನಾಗರಿಕರಿಗೆ ಅಮೆರಿಕಾ ಸೂಚನೆ
ಮಹಿಳೆ ಸಾವು:
ಈ ನಡುವೆ, ಅದೇ ರೀತಿ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ 2 ಸಶಸ್ತ್ರ ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ರಾಕೆಟ್ ಪತ್ತೆ:
ಈ ನಡುವೆ ಇತ್ತೀಚೆಗೆ ಕುಕಿ ಉಗ್ರರು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯ ಮನೆ ಬಳಿ ರಾಕೆಟ್ ದಾಳಿ ನಡೆಸಿದ ಕಾರಣ ಪೊಲೀಸರು ಶೋಧ ನಡೆಸಿದ್ದು, ಹಲವು ರಾಕೆಟ್ಗಳು ಪತ್ತೆ ಆಗಿವೆ. ಡ್ರೋನ್ ದಾಳಿ ಕೂಡ ಕಳೆದ ವಾರ ನಡೆದಿದ್ದವು. ಹೀಗಾಗಿ ಇಂಥ ವಸ್ತುಗಳು ಕುಕಿ ಉಗ್ರರ ಕೈಗೆ ಸಿಗಬೇಕೆಂದರೆ ಈಗ ಪುನಾರಂಭ ಅಗಿರುವ ಹಿಂಸಾಚಾರದ ಹಿಂದೆ ವಿದೇಶಿ ಕೈವಾಡದ ಸಂದೇಹ ಸೃಷ್ಟಿಯಾಗಿದೆ.
ಕಳೆದ 1 ವರ್ಷದಿಂದ ರಾಜ್ಯದಲ್ಲಿ ಮೀಸಲಾತಿ ಸಂಬಂಧ ಕುಕಿ ಹಾಗೂ ಮೈತೇಯಿ ಸಮುದಾಯದ ನಡುವೆ ನಡೆಯುತ್ತಿರುವ ಹಿಂಸೆಯಲ್ಲಿ 200ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ