
ನವದೆಹಲಿ (ನ. 07): ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದರೂ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈರುಳ್ಳಿ ದರ ಒಂದೇ ವಾರದಲ್ಲಿ ಡಬ್ಬಲ್ ಆಗಿದೆ. ವಾರದ ಹಿಂದೆ ಕೇಜಿಗೆ 45-50ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ 80ರು. ಗೆ ತಲುಪಿದೆ.
ಮಕ್ಕಳನ್ನು ಶಾಲೆಗೆ ಸೇರಿಸೋ ವಿಚಾರದಲ್ಲಿ ಸರ್ಕಾರದ ನಿರಾಸಕ್ತಿ: ಕೋರ್ಟ್ ತರಾಟೆ
ದೆಹಲಿಗೆ ಅತೀ ಹೆಚ್ಚು ಈರುಳ್ಳಿ ಸರಬರಾಜು ಮಾಡುವ ಮಹಾರಾಷ್ಟ್ರ, ಕರ್ನಾಟಕ ಸೇರಿ ದಕ್ಷಿಣ ಹಾಗೂ ಮಧ್ಯ ಭಾರತದಲ್ಲಿ ಅನಿರೀಕ್ಷಿತ ಮಳೆ ಉಂಟಾಗಿದ್ದರಿಂದ ಸಾಗಣೆಯಲ್ಲಿ ಏರುಪೇರು ಉಂಟಾಗಿ ಬೆಲೆ ಹೆಚ್ಚಾಗಿದೆ. ಹೊಸ ಇಳುವರಿ ಬಂದ ಬಳಿಕ ದರ ಸ್ಥಿರವಾಗಲಿದೆ ಎಂದು ಗ್ರಾಹಕ ವ್ಯವಹಾರ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರಿ ಗೋದಾಮುಗಳಲ್ಲಿ ಕೂಡ ದಾಸ್ತಾನುಗಳ ಕೊರತೆಯುಂಟಾಗಿದ್ದು, ಅಷ್ಘಾನಿಸ್ತಾನ, ಈಜಿಪ್ಟ್, ಟರ್ಕಿ ಹಾಗೂ ಇರಾನ್ನಿಂದ ಈರುಳ್ಳಿ ಆಮದಿಗೆ ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೇ ಆಮದು ನೀತಿಗಳ ಸಡಿಲಿಕೆಗೂ ಸರ್ಕಾರ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ