ದಕ್ಷಿಣ ಭಾರತದ ಜಲಾಶಯಗಳಲ್ಲಿ 17% ಮಾತ್ರವೇ ನೀರು ಸಂಗ್ರಹ..!

Published : Apr 27, 2024, 06:16 AM IST
ದಕ್ಷಿಣ ಭಾರತದ ಜಲಾಶಯಗಳಲ್ಲಿ 17% ಮಾತ್ರವೇ ನೀರು ಸಂಗ್ರಹ..!

ಸಾರಾಂಶ

ದಕ್ಷಿಣ ಭಾರತದ ಒಟ್ಟು ಜಲಾಶಯಗಳ ನೀರಿನ ಸಂಗ್ರಹ ಸಾಮರ್ಥ್ಯಕ್ಕೆ ಹೋಲಿಸಿದರೆ ಸದ್ಯ ಶೇ.17ರಷ್ಟು ಮಾತ್ರ ನೀರಿನ ಸಂಗ್ರಹವಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ 42 ಜಲಾಶಯಗಳನ್ನು ಇಲ್ಲಿ ಪರಿಗಣಿಸಲಾಗಿದೆ.

ನವದೆಹಲಿ(ಏ.27):  ಕರ್ನಾಟಕದಲ್ಲಿ ಬರಗಾಲ ವಿಕೋಪಕ್ಕೆ ಹೋಗಿರುವಾಗಲೇ ಇಡೀ ದಕ್ಷಿಣ ಭಾರತದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಅಪಾಯಕಾರಿ ಮಟ್ಟಕ್ಕೆ ಕುಸಿದಿರುವ ವರದಿಯೊಂದು ಬಿಡುಗಡೆಯಾಗಿದೆ.

ಕೇಂದ್ರ ಜಲ ಆಯೋಗ ಈ ವರದಿ ಬಿಡುಗಡೆ ಮಾಡಿದ್ದು, ದಕ್ಷಿಣ ಭಾರತದ ಒಟ್ಟು ಜಲಾಶಯಗಳ ನೀರಿನ ಸಂಗ್ರಹ ಸಾಮರ್ಥ್ಯಕ್ಕೆ ಹೋಲಿಸಿದರೆ ಸದ್ಯ ಶೇ.17ರಷ್ಟು ಮಾತ್ರ ನೀರಿನ ಸಂಗ್ರಹವಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ 42 ಜಲಾಶಯಗಳನ್ನು ಇಲ್ಲಿ ಪರಿಗಣಿಸಲಾಗಿದೆ.

ಆಲಮಟ್ಟಿ ಡ್ಯಾಂ: ಜುಲೈನಲ್ಲೂ ಮಳೆಯಾಗದಿದ್ರೂ ನೀರಿನ ಸಮಸ್ಯೆ ಇಲ್ಲ..!

ದಕ್ಷಿಣ ಭಾರತದ ಈ 42 ಡ್ಯಾಮ್‌ಗಳಲ್ಲಿ ಒಟ್ಟು 53.334 ಬಿಲಿಯನ್‌ ಕ್ಯೂಬಿಕ್‌ ಮೀಟರ್‌ (ಬಿಸಿಎಂ) ನೀರು ಸಂಗ್ರಹಿಸಬಹುದಾಗಿದೆ. ಆದರೆ ಸದ್ಯ ಒಟ್ಟು 8.865 ಬಿಸಿಎಂ ಮಾತ್ರ ನೀರಿನ ಸಂಗ್ರಹವಿದೆ. ಇದು ಒಟ್ಟು ಸಾಮರ್ಥ್ಯದ ಶೇ.17ರಷ್ಟಾಗುತ್ತದೆ. ಕಳೆದ ವರ್ಷ ಇದೇ ಸಮಯದಲ್ಲಿ ಶೇ.29ರಷ್ಟು ನೀರಿತ್ತು. ಕಳೆದ ಹತ್ತು ವರ್ಷಗಳ ಸರಾಸರಿ ಪರಿಗಣಿಸಿದರೆ ಈ ಸಮಯದಲ್ಲಿ ಶೇ.23ರಷ್ಟು ನೀರಿರುತ್ತಿತ್ತು. ಹೀಗಾಗಿ ಈ ವರ್ಷದ ನೀರಿನ ಸಂಗ್ರಹ ಐತಿಹಾಸಿಕ ಕನಿಷ್ಠ ಎಂದು ಹೇಳಲಾಗಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತದಿಂದ ನೀರಾವರಿ, ಕುಡಿಯುವ ನೀರು ಪೂರೈಕೆ, ಜಲವಿದ್ಯುತ್‌ ಉತ್ಪಾದನೆಗೆ ಸಮಸ್ಯೆಯಾಗಲಿದೆ.

ದೇಶದ ಬೇರೆ ಭಾಗಗಳಲ್ಲಿ ಹೇಗಿದೆ?:

ದಕ್ಷಿಣಕ್ಕೆ ಹೋಲಿಸಿದರೆ ಪೂರ್ವ ಭಾಗದ ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂನಂತಹ ರಾಜ್ಯಗಳಲ್ಲಿ ನೀರಿನ ಸಂಗ್ರಹ ಕಳೆದ 10 ವರ್ಷಗಳ ಸರಾಸರಿಗಿಂತ ಸುಧಾರಣೆಯಾಗಿದ್ದು, ಜಲಾಶಯಗಳಲ್ಲಿ ಶೇ.34ರಷ್ಟು ನೀರಿದೆ. ಆದರೆ ಗುಜರಾತ್‌ ಹಾಗೂ ಮಹಾರಾಷ್ಟ್ರ ರಾಜ್ಯಗಳು ಬರುವ ಪಶ್ಚಿಮ ವಲಯದ ಡ್ಯಾಮ್‌ಗಳಲ್ಲಿ ಶೇ.31.7ರಷ್ಟು ನೀರಿದೆ. ಇದು ಕಳೆದ 10 ವರ್ಷದ ಸರಾಸರಿಗಿಂತ ಕೊಂಚ ಕಡಿಮೆ. ಹಾಗೆಯೇ ಉತ್ತರ ಹಾಗೂ ಮಧ್ಯ ವಲಯದ ರಾಜ್ಯಗಳ ಡ್ಯಾಮ್‌ಗಳಲ್ಲೂ ನೀರಿನ ಸಂಗ್ರಹ ಕುಸಿಯುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬ್ರಹ್ಮಪುತ್ರಾ, ನರ್ಮದಾ ಹಾಗೂ ತಾಪಿ ನದಿಯ ಡ್ಯಾಮ್‌ಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ನೀರಿನ ಸಂಗ್ರಹವಿದ್ದರೆ, ಕಾವೇರಿ ಹಾಗೂ ಪೂರ್ವಕ್ಕೆ ಹರಿಯುವ ಮಹಾನದಿ ಮತ್ತು ಪೆನ್ನಾರ್‌ನ ಡ್ಯಾಮ್‌ಗಳಲ್ಲಿ ಅತ್ಯಂತ ಕಡಿಮೆ ನೀರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
India Latest News Live: ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?