ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ: ನಿತ್ಯ ಇಷ್ಟು ಭಕ್ತರಿಗಷ್ಟೇ ಅಯ್ಯಪ್ಪ ದರ್ಶನ

Published : Oct 06, 2024, 05:59 AM IST
ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ: ನಿತ್ಯ ಇಷ್ಟು ಭಕ್ತರಿಗಷ್ಟೇ ಅಯ್ಯಪ್ಪ ದರ್ಶನ

ಸಾರಾಂಶ

ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. 

ತಿರುವನಂತಪುರ (ಅ.06): ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿ ಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿತ್ತು. 

ಭಕ್ತರು ದಿನಗಟ್ಟಲೆ ಮೆಟ್ಟಿಲು ಮೇಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕರ್ನಾ ಟಕ ಸೇರಿದಂತೆ ವಿವಿಧ ರಾಜ್ಯ ಗಳ ಭಕ್ತರು ದೇವರ ದರ್ಶನ ಮಾಡದೇ ವಂತಾಗಿತ್ತು.ಈ ಹಿನ್ನೆಲೆಯಲ್ಲಿ ಈ ವರ್ಷ ಭಕ್ತರ ನಿರ್ವಹಣೆ ಸಮರ್ಪಕವಾಗಿ ಮರಳು ಮಾಡುವ ನಿಟ್ಟಿನಲ್ಲಿ ಆನ್ ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ಮಾಡಿಕೊ ಡಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ನಿತ್ಯ ಗರಿಷ್ಠ 80000 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು. 

ಜಾತಿ ಗಣತಿ ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ವರ್ಚ್‌ಯುವಲ್ ಕ್ಯು ಬುಕ್ಕಿಂಗ್ ಸಮಯದಲ್ಲೇ ತಾವು ಆಗಮಿಸುವ ಮಾರ್ಗವನ್ನೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಭಕ್ತರಿಗೆ ಸಿಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೈಗೊಂಡ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ ಸಾಂಪ್ರ ದಾಯಿಕ ಅರಣ್ಯ ಮಾರ್ಗದಲ್ಲಿ ಬರುವ ಭಕ್ತರಿಗೆ ಎಲ್ಲಾ ರೀತಿಯ ಸವಲತ್ತು ಕಲ್ಪಿಸಲಾಗುವುದು. ಅಗತ್ಯ ಬಿದ್ದರೆ ನೀಲಕ್ಕಲ್ ಮತ್ತು ಪಂಬಾದಲ್ಲಿ ಈ ವರ್ಷ ವಾಹನ ನಿಲುಗಡೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಲಾಗುವುದು. ಶಬರಿಮಲೆಗೆ ಆಗಮಿಸುವ ಎಲ್ಲಾ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: T20 World Cup 2026 - ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದಕ್ಷಿಣ ಆಫ್ರಿಕಾ ಹೈವೋಲ್ಟೇಜ್ ಮ್ಯಾಚ್
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ