ಭಾರತದಲ್ಲಿ ಕೊರೋನಾ ಓಡ್ಸೋಕೆ ನಾನೇ ಸಾಕು: ನಿತ್ಯಾನ ಹೊಸ ವಿಡಿಯೋ

Published : Jun 08, 2021, 04:31 PM IST
ಭಾರತದಲ್ಲಿ ಕೊರೋನಾ ಓಡ್ಸೋಕೆ ನಾನೇ ಸಾಕು: ನಿತ್ಯಾನ ಹೊಸ ವಿಡಿಯೋ

ಸಾರಾಂಶ

* ಭಾರತದಲ್ಲಿ ಅತ್ಯಾಚಾರದ ಆರೋಪ ಎದುರಿಸುತ್ತಿರುವ ನಿತ್ಯಾನಂದ * ಭಾರತದಲ್ಲಿ ಅತ್ಯಾಚಾರದ ಆರೋಪ ಎದುರಿಸುತ್ತಿರುವ * ದಕ್ಷಿಣ ಅಮೆರಿಕದ ಈಕ್ವೆಡಾರ್‌ನಿಂದ ಖಾಸಗಿ ದ್ವೀಪವೊಂದನ್ನು ಖರೀದಿಸಿ ಅದನ್ನು ಸ್ವಾಯತ್ತ ದೇಶ ಘೋಷಿಸಿಕೊಂಡಿರುವ ನಿತ್ಯಾ

ನವದೆಹಲಿ(ಜೂ.08): ಭಾರತದಲ್ಲಿ ಅತ್ಯಾಚಾರದ ಆರೋಪ ಎದುರಿಸುತ್ತಿರುವ, 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಆಗಾಗ ತನ್ನ ಹೇಳಿಕೆಗಳಿಂದ ಸದ್ದು ಮಾಡುತ್ತಲೇ ಇರುತ್ತಾರೆ. ಸದ್ಯ ಭಾರತದಲ್ಲಿ ಕೊರೋನಾ ಹಾವಳಿ ಕೊನೆಯಾಗಬೇಕಾದರೆ, ಅದಕ್ಕೆ ನಾನೊಬ್ಬನೇ ಪರಿಹಾರ ಎಂದು ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ. 

ನಿತ್ಯಾನಂದ ತನ್ನ ಹೊಸ ವಿಡಿಯೋದಲ್ಲಿ, ತಾನು ಭಾರತಕ್ಕೆ ಕಾಲಿಡುವ ದಿನ, ಕೊರೋನಾ ಕೊನೆಯಾಗಲಿದೆ ಎಂದು ಹೇಳಿದ್ದಾನೆ. 

ಕೋವಿಡ್ ಹೆಚ್ಚಳ: ನಿತ್ಯಾನಂದ ಕೈಲಾಶಕ್ಕೆ ಭಾರತೀಯರಿಗಿಲ್ಲ ಪ್ರವೇಶ

ಎಲ್ಲಿದ್ದಾನೆ ನಿತ್ಯಾನಂದ?

 ದಕ್ಷಿಣ ಅಮೆರಿಕದ ಈಕ್ವೆಡಾರ್‌ನಿಂದ ಖಾಸಗಿ ದ್ವೀಪವೊಂದನ್ನು ಖರೀದಿಸಿ ಅದನ್ನು ಸ್ವಾಯತ್ತ ದೇಶ ಎಂಬುದಾಗಿ ಘೋಷಿಸಿಕೊಂಡಿದ್ದಾನೆ. ತನ್ನ ದೇಶಕ್ಕೆ ಕೈಲಾಸ ಎಂಬುದಾಗಿಯೂ ನಿತ್ಯಾನಂದ ಹೆಸರನ್ನು ಇಟ್ಟಿದ್ದಾನೆ. ಕೈಲಾಸ ದ್ವೀಪದಲ್ಲಿ ನಿತ್ಯಾನಂದನ ಸಾವಿರ ಭಕ್ತರು ತಂಗಿದ್ದಾರೆ ಎನ್ನಲಾಗಿದೆ. 

ಕೈಲಾಸ ದೇಶದಲ್ಲಿ 1 ಲಕ್ಷ ಜನರಿಗೆ ವಾಸಕ್ಕೆ ಅವಕಾಶ!

ತನ್ನ ದ್ವೀಪಕ್ಕೆ ಸ್ವತಂತ್ರ ದೇಶದ ಸ್ಥಾನಮಾನ ನೀಡುವಂತೆ ವಿಶ್ವಸಂಸ್ಥೆಗೂ ಪತ್ರ ಬರೆದು ನಿತ್ಯಾನಂದ ಸುದ್ದಿಯಾಗಿದ್ದ. ಆದರೆ, ಕೈಲಾಸಕ್ಕೆ ಇನ್ನೂ ದೇಶದ ಸ್ಥಾನಮಾನ ಲಭ್ಯವಾಗಿಲ್ಲ. ಅದು ಇನ್ನೂ ಈಕ್ವೆಡಾರ್‌ ಸ್ವಾಧೀನದಲ್ಲೇ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌