ಆಪರೇಷನ್‌ ಸಿಂದೂರ ಹೆಮ್ಮೆಯ ಕ್ಷಣ: ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

Published : May 08, 2025, 08:12 AM IST
ಆಪರೇಷನ್‌ ಸಿಂದೂರ ಹೆಮ್ಮೆಯ ಕ್ಷಣ: ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ಸಾರಾಂಶ

ಪಹಲ್ಗಾಂ ದಾಳಿಗೆ ಪ್ರತಿಯಾಗಿ ಗಡಿಯಾಚೆಗಿನ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತವು ನಡೆಸಿದ ದಾಳಿಯನ್ನು ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. 

ನವದೆಹಲಿ (ಮೇ.08): ಪಹಲ್ಗಾಂ ದಾಳಿಗೆ ಪ್ರತಿಯಾಗಿ ಗಡಿಯಾಚೆಗಿನ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತವು ನಡೆಸಿದ ದಾಳಿಯನ್ನು ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಪಾಕಿಸ್ತಾನದ ಮೇಲಿನ ಸೇನಾ ದಾಳಿಯ ಬಳಿಕ ಬುಧವಾರ ಕರೆಯಲಾಗಿದ್ದ ಕ್ಯಾಬಿನೆಟ್‌ ಸಭೆಯಲ್ಲಿ ಮಾತನಾಡಿದ ಅವರು, ಯೋಜಿತ ರೀತಿಯಲ್ಲಿ ಈ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಲಾಯಿತು. ಯಾವುದೇ ತಪ್ಪುಗಳಿಲ್ಲದೆ, ಯಶಸ್ವಿಯಾಗಿ ಕಾರ್ಯಾಚರಣೆ ಪೂರ್ಣಗೊಳಿಸಲಾಯಿತು. ವಿಸ್ತೃತ ಹಾಗೂ ಸಾಕಷ್ಟು ಪೂರ್ವ ತಯಾರಿ ಬಳಿಕವೇ ಈ ದಾಳಿ ನಡೆಸಲಾಗಿದೆ ಎಂದು ಮೋದಿ ಕ್ಯಾಬಿನೆಟ್‌ ಗಮನಕ್ಕೆ ತಂದರು.

ಯಾವುದೇ ತಪ್ಪಿಲ್ಲದೆ ಆಪರೇಷನ್‌ ಸಿಂದೂರ ಕಾರ್ಯಾಚರಣೆಯನ್ನು ಸೇನೆಯು ಕಾರ್ಯರೂಪಕ್ಕಿಳಿಸಿದೆ. ಈ ಮೂಲಕ ಶ್ಲಾಘನೀಯ ಕಾರ್ಯ ಮಾಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ ಅ‍ವರು, ಇಡೀ ದೇಶ ನಮ್ಮತ್ತ ತಿರುಗಿ ನೋಡುತ್ತಿದೆ, ನಾವು ಸೇನೆಯ ಕುರಿತು ಹೆಮ್ಮೆ ಪಡುತ್ತೇವೆ ಎಂದು ಹೇಳಿದರು ಎಂದು ಮೂಲಗಳು ಹೇಳಿವೆ. ಇದೇ ವೇಳೆ ಸಭೆಯಲ್ಲಿ ಸಚಿವರು ಪ್ರಧಾನಿ ಮೋದಿ ಅವರ ನಾಯಕತ್ವದ ಮೇಲೆ ಸಂಪೂರ್ಣ ಭರವಸೆ ವ್ಯಕ್ತಪಡಿಸಿದ್ದು, ಟೇಬಲ್ ಕುಟ್ಟುವ ಮೂಲಕ ಸರ್ಕಾರದ ಕ್ರಮವನ್ನು ಸ್ವಾಗತಿಸಿದರು. ಈ ಮೂಲಕ ಭಯೋತ್ಪಾದನೆ ವಿರುದ್ಧದ ದಾಳಿಯಲ್ಲಿ ನಾವು ಪ್ರಧಾನಿ ಮತ್ತು ಸೇನಾಪಡೆಗಳ ಜತೆಗಿದ್ದೇವೆ ಎಂದು ಇಡೀ ದೇಶಕ್ಕೆ ಸಂದೇಶ ರವಾನಿಸಿದರು.

ಆಪರೇಷನ್‌ಗೆ ‘ಸಿಂದೂರ’ ಹೆಸರು ಕೊಟ್ಟಿದ್ದೇ ಪ್ರಧಾನಿ ಮೋದಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಭಯೋತ್ಪಾದಕರ ನೆಲೆಗಳನ್ನು ಭಾರತೀಯ ಸಶಸ್ತ್ರ ಪಡೆಗಳು ನಾಶ ಮಾಡಿದ ಕಾರ್ಯಾಚರಣೆಗೆ ಭಾರತ ಆಪರೇಷನ್ ಸಿಂದೂರ ಎಂದು ಹೆಸರಿಟ್ಟಿದೆ. ಗಮನಿಸಬೇಕಾದ ಅಂಶವೆಂದರೆ ಆ ಹೆಸರು ನೀಡಿದ್ದೇ ಪ್ರಧಾನಿ ನರೇಂದ್ರ ಮೋದಿ ಎಂದು ಮೂಲಗಳು ಹೇಳಿವೆ.

Operation Sindoor: ನಮ್ಮವರ ಹಂತಕರಷ್ಟೇ ಹತ್ಯೆ: ಕೆಂದ್ರ ಸಚಿವ ರಾಜನಾಥ್‌ ಸಿಂಗ್‌

ಪಹಲ್ಗಾಂ ದಾಳಿಯಲ್ಲಿ 26 ನಾಗರಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ದುರಂತದಲ್ಲಿ 25 ಮಹಿಳೆಯರು ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಇದಕ್ಕೆ ಪ್ರತೀಕಾರದ ಭಾಗವಾಗಿ ಈ ಕಾರ್ಯಾಚರಣೆಗೆ ಮದುವೆಯಾದ ಹೆಣ್ಣುಮಕ್ಕಳು ಹಣೆ ಹಾಗೂ ಬೈತಲೆಗೆ ಹೆಚ್ಚಿಕೊಳ್ಳುವ ‘ಸಿಂಧೂರ’ ಎನ್ನುವ ಹೆಸರಿಡುವುದೇ ಸೂಕ್ತ ಎಂಬ ತೀರ್ಮಾನ ಮಾಡಲಾಯಿತು. ಕಾರಣಕ್ಕೆ ಅದೇ ಹೆಸರನ್ನು ಇಡಲಾಯಿತು ಎಂದು ಗೊತ್ತಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ