ಆಪರೇಷನ್‌ ಸಿಂದೂರ ಅಪ್ರಯೋಜಕ : ಫಾರೂಕ್‌ ಅಬ್ದುಲ್ಲಾ ವಿವಾದ

Kannadaprabha News   | Kannada Prabha
Published : Nov 17, 2025, 04:36 AM IST
Farooq Abdullah

ಸಾರಾಂಶ

ಆಪರೇಷನ್‌ ಸಿಂದೂರದಿಂದ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ 18 ಜನ ಸತ್ತರು. ಗಡಿಗಳು ರಾಜಿಯಾದವು. ಮತ್ತೆ ಅಂತಹ ಸಂಘರ್ಷ ಸಂಭವಿಸುವುದು ಬೇಡ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ರೀನಗರ: ಆಪರೇಷನ್‌ ಸಿಂದೂರದಿಂದ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ 18 ಜನ ಸತ್ತರು. ಗಡಿಗಳು ರಾಜಿಯಾದವು. ಮತ್ತೆ ಅಂತಹ ಸಂಘರ್ಷ ಸಂಭವಿಸುವುದು ಬೇಡ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯಾವುದೇ ಲಾಭವಾಗಲಿಲ್ಲ

ಉಗ್ರರಿಂದ ಜಪ್ತಿ ಮಾಡಲಾಗಿದ್ದ ಸ್ಫೋಟಕಗಳ ಪರಿಶೀಲನೆ ವೇಳೆ ಕಾಶ್ಮೀರದ 9 ಮಂದಿ ಸಾವನ್ನಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಆಪರೇಷನ್ ಸಿಂದೂರದಿಂದ ಯಾವುದೇ ಲಾಭವಾಗಲಿಲ್ಲ. ನಮ್ಮ 18 ಜನ ಸತ್ತರು. ಗಡಿಗಳು ರಾಜಿಯಾದವು. ಎರಡೂ ರಾಷ್ಟ್ರಗಳು ತಮ್ಮ ಸಂಬಂಧಗಳನ್ನು ಸುಧಾರಿಸಿಕೊಳ್ಳಬೇಕು. ದೆಹಲಿ ಸ್ಫೋಟದಿಂದ ನಾವು ಇನ್ನೂ ಹೊರಬಂದಿಲ್ಲ. ಆದರೆ ಪ್ರತಿಯೊಬ್ಬ ಕಾಶ್ಮೀರಿಯ ಕಡೆಗೆ ಬೆರಳು ತೋರಿಸಲಾಗುತ್ತಿದೆ. ನಾವು ಸಹ ಭಾರತೀಯರು ಎಂದು ಅವರು ಒಪ್ಪಿಕೊಳ್ಳುವುದು ಯಾವಾಗ?’ ಎಂದು ಪ್ರಶ್ನಿಸಿದರು.

ಇದೇ ವೇಳೆ, ‘ದೆಹಲಿಯಲ್ಲಿ ಬಾಂಬ್ ಸ್ಫೋಟಿಸಿದ ವೈದ್ಯರು ಉಗ್ರಮಾರ್ಗವನ್ನು ಏಕೆ ಆರಿಸಬೇಕಾಯಿತು? ಅದಕ್ಕೆ ಕಾರಣವೇನು ಎಂಬುದನ್ನು ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಿಳಿಸಬೇಕು’ ಎಂದು ಒತ್ತಾಯಿಸಿದರು.

ಉಗ್ರರಿಗಾಗಿ ಕಣ್ಣೀರು-ಬಿಜೆಪಿ ಕಿಡಿ:

ಅಬ್ದುಲ್ಲಾ ಹೇಳಿಕೆಗೆ ಕಿಡಿ ಕಾರಿರುವ ಬಿಜೆಪಿ ನಾಯಕ ತರುಣ್‌ ಚುಗ್‌, ‘ಉಗ್ರರಿಗಾಗಿ ಕಣ್ಣೀರು ಸುರಿಸುವುದು ಫಾರೂಕ್‌ ಅಬ್ದುಲ್ಲಾ ಅವರ ಹಳೆಯ ಅಭ್ಯಾಸ. ಅದನ್ನು ಅವರು ನಿಲ್ಲಿಸಬೇಕು’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ