ಇಂಡಿಯಾ ಕೂಟದಿಂದ ನಾಳೆ, ನಾಡಿದ್ದು ಹಿಂಸಾಪೀಡಿತ ಮಣಿಪುರಕ್ಕೆ ಭೇಟಿ

Published : Jul 28, 2023, 09:06 AM ISTUpdated : Jul 28, 2023, 09:07 AM IST
ಇಂಡಿಯಾ ಕೂಟದಿಂದ ನಾಳೆ, ನಾಡಿದ್ದು ಹಿಂಸಾಪೀಡಿತ ಮಣಿಪುರಕ್ಕೆ ಭೇಟಿ

ಸಾರಾಂಶ

ಸುಮಾರು 3 ತಿಂಗಳಿನಿಂದ ಜನಾಂಗೀಯ ದ್ವೇಷಕ್ಕೆ ತುತ್ತಾಗಿ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ‘ಇಂಡಿಯಾ’ ಮೈತ್ರಿಕೂಟದ 20ಕ್ಕೂ ಹೆಚ್ಚು ಸಂಸದರು 2 ದಿನಗಳ ಕಾಲ ಭೇಟಿ ನೀಡಲಿದ್ದಾರೆ.

ನವದೆಹಲಿ: ಸುಮಾರು 3 ತಿಂಗಳಿನಿಂದ ಜನಾಂಗೀಯ ದ್ವೇಷಕ್ಕೆ ತುತ್ತಾಗಿ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ‘ಇಂಡಿಯಾ’ ಮೈತ್ರಿಕೂಟದ 20ಕ್ಕೂ ಹೆಚ್ಚು ಸಂಸದರು 2 ದಿನಗಳ ಕಾಲ ಭೇಟಿ ನೀಡಲಿದ್ದಾರೆ. ಜು.29 ಮತ್ತು 30 ರಂದು ವಿಪಕ್ಷ ಸಂಸದರ ನಿಯೋಗವು ಮಣಿಪುರಕ್ಕೆ ಭೇಟಿ ನೀಡಲಿದ್ದು ರಾಜ್ಯದ ಪರಿಸ್ಥಿತಿಯನ್ನು ಖುದ್ದು ಅವಲೋಕನ ನಡೆಸಲಿದೆ ಎಂದು ಕಾಂಗ್ರೆಸ್‌ ನಾಯಕ ಮಾಣಿಕ್ಯಂ ಟ್ಯಾಗೋರ್‌ ತಿಳಿಸಿದ್ದಾರೆ. ಈ ಹಿಂದೆಯೂ ವಿಪಕ್ಷ ನಾಯಕರು ಮಣಿಪುರಕ್ಕೆ ಭೇಟಿ ನೀಡಲು ಪ್ರಯತ್ನಿಸಿದರಾದರೂ ಅಲ್ಲಿನ ಪರಿಸ್ಥಿತಿಯ ಕಾರಣದಿಂದ ಅನುಮತಿ ನಿರಾಕರಿಸಲಾಗಿತ್ತು. ಈ ಹಿಂದೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ್ದರು.

ಮೋದಿ ಸಿದ್ಧಾಂತದಿಂದ ಮಣಿಪುರಕ್ಕೆ ಬೆಂಕಿ: ರಾಹುಲ್‌ ಕಿಡಿ

ನವದೆಹಲಿ: ಪ್ರಧಾನಿ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಿದ್ದಾಂತದಿಂದ ಮಣಿಪುರ ಸುಟ್ಟುಹೋಗುತ್ತಿದೆ ಎಂದು ಕಾಂಗ್ರೆಸ್‌ ಮಾಜಿ ಸಂಸದ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಟ್ವೀಟ್‌ ಮಾಡಿರುವ ರಾಹುಲ್‌ಪ್ರಧಾನಿ ಮೋದಿ ಅವರು ಮಣಿಪುರದ ಬಗ್ಗೆ ಏಕೆ ಮಾತನಾಡುತ್ತಿಲ್ಲ ? ಏಕೆಂದರೆ ಮಣಿಪುರದ ವಿಚಾರದಲ್ಲಿ ಮಾಡಲು ಪ್ರಧಾನಿ ಮೋದಿ ಅವರಿಗೆ ಬೇರೇನೂ ಉಳಿದಿಲ್ಲ. ಅವರ ಸಿದ್ಧಾಂತ ಮಣಿಪುರವನ್ನು ಸುಟ್ಟು ಹಾಕಿದೆ ಎಂದು ಅವರಿಗೆ ತಿಳಿದಿದೆ. ಬಿಜೆಪಿ-ಆರ್‌ಎಸ್‌ಎಸ್‌ ಅಧಿಕಾರ ಪಡೆಯಲು ಏನು ಬೇಕಾದರೂ ಮಾಡುತ್ತಾರೆ. ಹಾಗಾಗಿ ಮಣಿಪುರದಲ್ಲಿ ಇಂಥಹ ಸ್ಥಿತಿ ನಿರ್ಮಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಣಿಪುರ ಹಿಂಸೆಗೆ ಮತ್ತೆ ಕಲಾಪ ಭಂಗ: ಚರ್ಚೆಗೆ ಸಿದ್ಧ ಎಂಬ ಶಾ ಮನವಿಗೂ ಓಗೊಡದ ವಿಪಕ್ಷ

Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್‌ ಕೇಸ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!
ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!