ರೈತ ಹಿಂಸಾ ಸ್ಥಳ ಪ್ರವೇ​ಶಕ್ಕೆ ವಿಪ​ಕ್ಷ​ಗ​ಳಿಗೆ ತಡೆ!

Published : Oct 05, 2021, 07:56 AM IST
ರೈತ ಹಿಂಸಾ ಸ್ಥಳ ಪ್ರವೇ​ಶಕ್ಕೆ ವಿಪ​ಕ್ಷ​ಗ​ಳಿಗೆ ತಡೆ!

ಸಾರಾಂಶ

* ಪ್ರಿಯಾಂಕಾ, ಪಂಜಾಬ್‌ ಡಿಸಿಎಂ ವಶ​ಕ್ಕೆ *ಅಖಿಲೇಶ್‌, ಬಾಘೇಲ್‌, ಚನ್ನಿಗೆ ಅನು​ಮತಿ ನಕಾ​ರ * ರೈತ ಹಿಂಸಾ ಸ್ಥಳ ಪ್ರವೇ​ಶಕ್ಕೆ ವಿಪ​ಕ್ಷ​ಗ​ಳಿಗೆ ತಡೆ

ಲಖೀಂಪುರ ಖೇರಿ(ಅ.05): ರೈತರು ಹಾಗೂ ಬಿಜೆಪಿ(BJP) ಕಾರ್ಯಕರ್ತರ ನಡುವೆ ಉತ್ತರ ಪ್ರದೇಶದ(Uttar Pradesh) ಲಖೀಂಪುರ ಖೇರಿ(Lakhimpur Kheri) ಜಿಲ್ಲೆಯ ಟಿಕೋನಿಯಾ ಗ್ರಾಮದಲ್ಲಿ ನಡೆದ ದಂಗೆಯಲ್ಲಿ ಎಂಟು ಮಂದಿ ಮೃತಪಟ್ಟಘಟನೆಗೆ ಸಂಬಂಧಿಸಿದಂತೆ ತೀವ್ರ ರಾಜಕೀಯ ಸಮರ ಆರಂಭವಾಗಿದೆ. ವಿವಿಧ ವಿಪಕ್ಷ ನಾಯ​ಕ​ರಿಗೆ ಘಟನಾ ಸ್ಥಳಕ್ಕೆ ತೆರ​ಳ​ದಂತೆ ನಿರ್ಬಂಧಿ​ಸ​ಲಾ​ಗಿ​ದೆ.

ಘಟನೆಯ ಬೆನ್ನಲ್ಲೇ ಕಾಂಗ್ರೆಸ್‌ ನಾಯಕಿ(Congress Leader) ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಲಖೀಂಪುರಕ್ಕೆ ತೆರಳಲು ಮುಂದಾದಾಗ ಅವರನ್ನು ಭಾನುವಾರವೇ ಲಖನೌನಲ್ಲಿ ಪೊಲೀಸರು ಗೃಹ ಬಂಧನಕ್ಕೆ ಒಳಪಡಿಸಿದ್ದರು. ಸೋಮವಾರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌(Akhilesh yadav), ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ ಬಾಘೇಲ್‌, ಪಂಜಾಬ್‌ ಮುಖ್ಯ​ಮಂತ್ರಿ ಚರ​ಣ್‌​ಜಿತ್‌ ಸಿಂಗ್‌ ಚನ್ನಿ, ಬಿಎಸ್‌ಪಿ ನಾಯಕ ಎಸ್‌.ಸಿ.ಮಿಶ್ರಾ, ಆಪ್‌ನ ಸಂಜಯ್‌ ಸಿಂಗ್‌ ಮುಂತಾದವರಿಗೆ ಲಖೀಂಪುರ ಭೇಟಿಗೆ ಅನು​ಮತಿ ನಿರಾ​ಖ​ರಿ​ಸಿ​ದ​ರು.

ಪಂಜಾಬ್‌ ಉಪ​ಮು​ಖ್ಯ​ಮಂತ್ರಿ ಸುಖ​ಜಿಂದರ್‌ ಸಿಂಗ್‌ ರಂಧಾವಾ ಅವ​ರನ್ನು ಸಹಾರನ್‌ಪು​ರ​ದಲ್ಲಿ ವಶಕ್ಕೆ ಪಡೆ​ಯ​ಲಾ​ಯಿ​ತು. ಸದ್ಯ ಘಟನಾ ಸ್ಥಳಕ್ಕೆ ರಾಜಕಾರಣಿಗಳು, ಪತ್ರಕರ್ತರು ಸೇರಿದಂತೆ ಎಲ್ಲರ ಪ್ರವೇಶ ನಿರ್ಬಂಧಿಸಲಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಈ ಘಟನೆಗೆ ಸಂಬಂಧಿಸಿದಂತೆ ತೀವ್ರ ವಾಗ್ದಾಳಿ ನಡೆಸಿದ್ದು, ರಾಜಕೀಯ ರಣರಂಗ ಏರ್ಪಟ್ಟಿದೆ.

ಪ್ರಿಯಾಂಕಾ, ನೀನು ಹಿಮ್ಮೆಟ್ಟುವುದಿಲ್ಲ ಎಂದು ನನಗೆ ಗೊತ್ತು. ಅವರು ಧೈರ್ಯವಂತರನ್ನು ಕಂಡರೆ ಹೆದರುತ್ತಾರೆ. ದೇಶದ ಅನ್ನದಾತರು ನ್ಯಾಯಕ್ಕಾಗಿ ನಡೆಸುತ್ತಿರುವ ಈ ಅಹಿಂಸಾ ಯುದ್ಧದಲ್ಲಿ ಗೆಲ್ಲುವಂತೆ ನಾವು ಮಾಡೋಣ.

- ರಾಹುಲ್‌ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?