
ನವದೆಹಲಿ: ದೆಹಲಿ ಸೇರಿದಂತೆ ದೇಶ ಹಲವೆಡೆ ವಾಯುಮಾಲಿನ್ಯ ಹೆಚ್ಚಳವಾಗುತ್ತಿದ್ದು, ಇದರ ನಿವಾರಣೆ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿ ವಿಪಕ್ಷ ಸಂಸದರು, ಬುಧವಾರ ಗ್ಯಾಸ್ ಮಾಸ್ಕ್ ಧರಿಸಿ ಸಂಸತ್ಗೆ ಬಂದು ಗಮನ ಸೆಳೆದರು.
ಕಾಂಗ್ರೆಸ್ನ ಹಿರಿಯ ಸಂಸದ ದೀಪೆಂದರ್ ಹೂಡಾ ಸೇರಿದಂತೆ ಕೆಲವರು ಈ ರೀತಿ ಮಾಸ್ಕ್ ಧರಿಸಿ ಬಂದಿದ್ದರು. ಈ ವೇಳೆ ಹೂಡಾ ಮಾತನಾಡಿ , ‘ಕೇಂದ್ರ ಇತರ ರಾಜ್ಯಗಳ ದೂಷಣೆ ನಿಲ್ಲಿಸಿ ವಾಯುಮಾಲಿನ್ಯ ತಡೆಗೆ ತುರ್ತು ಕ್ರಮ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಈ ಬಿಕ್ಕಟ್ಟು ನಿಭಾಯಿಸಲು ಮುಂದಾಳತ್ವ ವಹಿಸಬೇಕು’ ಎಂದರು.
ಇದರ ಜತೆಗೆ ವಾಯುಮಾಲಿನ್ಯ ಎದುರಿಸುತ್ತಿರುವ ದೆಹಲಿ, ಹರ್ಯಾಣ, ಪಂಜಾಬ್ , ಉತ್ತರಪ್ರದೇಶ ಮುಖ್ಯಮಂತ್ರಿಗಳ ಸಮಿತಿ ರಚಿಸಿ ಸಮಸ್ಯೆ ಪರಿಹಾರದ ಬಗ್ಗೆ ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದರು..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ