ಇಂದಿನಿಂದ ಸಂಸತ್‌ ಅಧಿವೇಶನ; ದಿಲ್ಲಿ ಹಿಂಸೆ ಬಿರುಗಾಳಿ ಸಾಧ್ಯತೆ

Srilakshmi kashyap   | Asianet News
Published : Mar 02, 2020, 09:05 AM IST
ಇಂದಿನಿಂದ ಸಂಸತ್‌ ಅಧಿವೇಶನ; ದಿಲ್ಲಿ ಹಿಂಸೆ ಬಿರುಗಾಳಿ ಸಾಧ್ಯತೆ

ಸಾರಾಂಶ

ಸಂಸತ್ತಿನ ಬಜೆಟ್‌ ಅಧಿವೇಶನದ 2 ನೇ ಚರಣ ಸೋಮವಾರದಿಂದ ಆರಂಭವಾಗಲಿದೆ. ಏಪ್ರಿಲ್‌ 3ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದಿಲ್ಲಿಯಲ್ಲಿ ಸಂಭವಿಸಿದ ಕಂಡು ಕೇಳರಿಯದ ಹಿಂಸಾಚಾರದ ಬಗ್ಗೆ ಭಾರೀ ಕೋಲಾಹಲ ಏರ್ಪಡುವ ಸಾಧ್ಯತೆ ಇದೆ.

ನವದೆಹಲಿ (ಮಾ. 02): ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಚರಣ ಸೋಮವಾರದಿಂದ ಆರಂಭವಾಗಲಿದೆ. ಏಪ್ರಿಲ್‌ 3ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದಿಲ್ಲಿಯಲ್ಲಿ ಸಂಭವಿಸಿದ ಕಂಡು ಕೇಳರಿಯದ ಹಿಂಸಾಚಾರದ ಬಗ್ಗೆ ಭಾರೀ ಕೋಲಾಹಲ ಏರ್ಪಡುವ ಸಾಧ್ಯತೆ ಇದೆ.

ಈ ವಿಷಯವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ನಿರ್ಧರಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಸದನದಲ್ಲೇ ಅವು ಆಗ್ರಹಿಸುವ ಸಾಧ್ಯತೆ ಇದೆ. ಹೀಗಾಗಿ ಕಲಾಪ ಕಾವೇರುವ ಅಂದಾಜಿದೆ.

ದಿಲ್ಲಿ ಹಿಂಸೆ: 25000 ಕೋಟಿ ನಷ್ಟ; ಸಾವಿನ ಸಂಖ್ಯೆ 46 ಕ್ಕೆ ಏರಿಕೆ

ಆದರೆ, ‘ಪ್ರತಿಪಕ್ಷಗಳು ಇಂತಹ ಘಟನೆ ಮರುಕಳಿಸಬಾರದು ಎಂಬುದಕ್ಕೆ ಸಲಹೆ ನೀಡಲಿ. ಅದು ಬಿಟ್ಟು ರಾಜಕೀಯ ಮಾಡಬಾರದು’ ಎಂದು ಕೇಂದ್ರ ಸಂಸದೀಯ ಖಾತೆ ರಾಜ್ಯ ಸಚಿವ ಅರ್ಜುನ್‌ ರಾಮ್‌ ಮೇಘ್ವಾಲ್‌ ಆಗ್ರಹಿಸಿದ್ದಾರೆ.

ಸರ್ಕಾರವು ಗರ್ಭಪಾತ ಮಸೂದೆ, ಬಾಡಿಗೆ ತಾಯ್ತನ ಮಸೂದೆ ಸೇರಿ ಹಲವು ಮಹತ್ವದ ವಿಧೇಯಕ ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ. ಬಜೆಟ್‌ ಕೂಡ ಪಾಸು ಮಾಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ