
ಬೆಳಗಾವಿ (ಡಿ.16): ನವದೆಹಲಿಯಲ್ಲಿ ಹವಾಮಾನ ವೈಪ್ಯರೀತ್ಯದಿಂದ ದಟ್ಟ ಹೊಗೆ ಆವರಿಸಿ ವಿಮಾನಗಳ ಹಾರಾಟಕ್ಕೆ ಅವಕಾಶ ಸಿಗದ್ದರಿಂದ ಸೋಮವಾರ ಇಂಡಿಗೋ ವಿಮಾನದಲ್ಲಿ ಆಗಮಿಸಿ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳಬೇಕಿದ್ದ ಕೆಲ ಸಚಿವರು, ಶಾಸಕರು ತಡವಾಗಿ ಬೆಳಗಾವಿ ಬಂದರು.
ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರು ಸೋಮವಾರ ಬೆಳಗ್ಗೆ 5.30ಕ್ಕೆ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಹೊರಟು, 8.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರಬೇಕಿತ್ತು.
ದೆಹಲಿಯಿಂದ ನೇರವಾಗಿ ಬೆಳಗಾವಿಗೆ ವಿಮಾನ ಇರುವ ಕಾರಣ, ಅಧಿವೇಶನದ ಸಮಯಕ್ಕೂ ಮುಂಚೆ ಬಂದಿಳಿದು, ಸದನದಲ್ಲಿ ಪಾಲ್ಗೊಂಡು, ಬಳಿಕ ದಾವಣಗೆರೆಗೆ ಶಾಮನೂರರ ಅಂತಿಮ ದರ್ಶನಕ್ಕೆ ಹೋಗಲು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ, ವಿಮಾನ ತಡವಾಗಿ ಟೇಕ್ಆಪ್ ಆದ ಕಾರಣ, ಮಧ್ಯಾಹ್ನ 12.15ಕ್ಕೆ ಸಾಂಬ್ರಾ ನಿಲ್ದಾಣಕ್ಕೆ ಬಂದಿಳಿದರು.
ವಿಮಾನದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಲಕ್ಷ್ಮೀ ಹೆಬ್ಬಾಳ್ಕರ್, ಶರಣ ಪ್ರಕಾಶ ಪಾಟೀಲ, ಶಾಸಕರಾದ ಎನ್.ಎಚ್.ಕೋನರಡ್ಡಿ, ರಾಘವೇಂದ್ರ ಇಟ್ನಾಳ, ಪರಿಷತ್ ಸದಸ್ಯ ಸಲೀಂ ಅಹ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಜನಪ್ರತಿನಿಧಿಗಳು, ಮಾಜಿ ಶಾಸಕರು, ಹಲವು ಮುಖಂಡರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ