ಎಣ್ಮೆ ಬಾಟಲಿಗೆ 10 ರೂ. ಅಧಿಕ ದರ ವಿಧಿಸಿದ್ದಕ್ಕೆ ಜೈಲು, ಮಾಲೀಕನಿಗೆ 75 ಸಾವಿರ ದಂಡ!

Published : Mar 23, 2023, 11:11 AM ISTUpdated : Mar 23, 2023, 11:15 AM IST
ಎಣ್ಮೆ ಬಾಟಲಿಗೆ 10 ರೂ. ಅಧಿಕ ದರ ವಿಧಿಸಿದ್ದಕ್ಕೆ ಜೈಲು, ಮಾಲೀಕನಿಗೆ 75 ಸಾವಿರ ದಂಡ!

ಸಾರಾಂಶ

 ಬಿಯರ್ ಬಾಟಲಿಗೆ ಗ್ರಾಹಕರಿಂದ 10 ರೂ.ಗಳನ್ನು ಅಧಿಕವಾಗಿ ತೆಗೆದುಕೊಂಡ ಮದ್ಯ ಮಾರಾಟಗಾರನನ್ನು  ಬಂಧಿಸಲಾಗಿದೆ. ಮಾತ್ರವಲ್ಲ ಮಳಿಗೆಯ ಮಾಲೀಕರಿಗೆ 75,000 ರೂಪಾಯಿ ದಂಡವನ್ನೂ ವಿಧಿಸಲಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಉತ್ತರ ಪ್ರದೇಶ (ಮಾ.23): ನೋಯ್ಡಾದಲ್ಲಿ ಬಿಯರ್ ಬಾಟಲಿಗೆ ಗ್ರಾಹಕರಿಂದ 10 ರೂ.ಗಳನ್ನು ಅಧಿಕವಾಗಿ ತೆಗೆದುಕೊಂಡ ಮದ್ಯ ಮಾರಾಟಗಾರನನ್ನು ಬುಧವಾರ ಬಂಧಿಸಲಾಗಿದೆ. ಮಾತ್ರವಲ್ಲ ಮಳಿಗೆಯ ಮಾಲೀಕರಿಗೆ 75,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳ ಪ್ರಕಾರ, ಬಿಸ್ರಾಖ್‌ನ ರೋಜಾ ಜಲಾಲ್‌ಪುರ್ ಪ್ರದೇಶದಲ್ಲಿರುವ ಮದ್ಯದ ಅಂಗಡಿಯಲ್ಲಿ ಈ ಘಟನೆ ನಡೆದಿದೆ.

500 ಎಂಎಲ್‌ನ ಕಿಂಗ್‌ಫಿಶರ್ ಸ್ಟ್ರಾಂಗ್ ಬಿಯರ್ ಗೆ 120 ರೂ. ಬೆಲೆ ಇದ್ದು  ಅಅನ್ನು ಗ್ರಾಹಕರಿಗೆ 130 ರೂ.ಗೆ ಮಾರಾಟ ಮಾಡಲಾಗಿದೆ. ಹೀಗಾಗಿ ಮಾರಾಟಗಾರರು ಹೆಚ್ಚುವರಿಯಾಗಿ 10 ಅಥವಾ 20 ರೂ.ಗಳನ್ನು ವಸೂಲಿ ಮಾಡುತ್ತಿರುವ ಬಗ್ಗೆ ನಮಗೆ ಹಲವು ಜನರಿಂದ ದೂರುಗಳು ಬಂದಿದ್ದವು. ಖರ್ಚ ಪಾನಿ ಎಂದು ಅಬಕಾರಿ ನಿರೀಕ್ಷಕ ಅಭಿನವ್ ಶಾಹಿ ಮಾಧ್ಯಮಕ್ಕೆ ತಿಳಿಸಿದ್ದಾರೆ. 

ದೂರುಗಳನ್ನು ಸ್ವೀಕರಿಸಿದ ಅಬಕಾರಿ ಇಲಾಖೆ ಮದ್ಯದಂಗಡಿಗೆ ಮಫ್ತಿಯಲ್ಲಿ ಬಂದು ಪರಿಶೀಲನೆ ನಡೆಸಿದೆ. ಸಾಕ್ಷ್ಯಾಧಾರಗಳ ಆಧಾರದ ಮೇಲೆ, ಮದ್ಯ ಮಾರಾಟಗಾರ ರವಿ ಸಿಂಗ್ ವಿರುದ್ಧ ಅಬಕಾರಿ ಕಾಯ್ದೆಯ ಸೆಕ್ಷನ್ 64 (ಅತಿಯಾದ ಮೌಲ್ಯ ವಿಧಿಸಿದ್ದಕ್ಕೆ ) ಮತ್ತು IPC 408 (ಗುಮಾಸ್ತ ಅಥವಾ ಸೇವಕನಿಂದ ನಂಬಿಕೆಯ ಉಲ್ಲಂಘನೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ, ನಂತರ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಶಾಹಿ ಮಾಹಿತಿ ನೀಡಿದ್ದಾರೆ.

ಕೊಡಗು: ನಕಲಿ ಮದ್ಯ ಸೇವಿಸಿ ಐವರ ಸಾವು

ನಿಯಮಗಳ ಉಲ್ಲಂಘನೆಗಾಗಿ ಮದ್ಯದಂಗಡಿಯ ಪರವಾನಗಿದಾರ ಸುರೇಂದರ್ ಸಿಂಗ್  ಎಂಬಾತನಿಗೆ 75,000 ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ಅಧಿಕಾರಿ ರಾಕೇಶ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಕಾರವಾರ: ಅರಣ್ಯದಲ್ಲಿ ಅಡಗಿಟಿಸಿದ್ದ ಅಕ್ರಮ ಗೋವಾ ಮದ್ಯ ಪತ್ತೆ, ಮೂವರ ಬಂಧನ

ಪರವಾನಗಿ ಹೊಂದಿರುವ ಮಳಿಗೆಗಳಲ್ಲಿ ಮದ್ಯದ ದರವನ್ನು ಹೆಚ್ಚಿಸಿದರೆ, ಮೊದಲ ಬಾರಿಗೆ ದಂಡ 75,000 ರೂ., ಎರಡನೇ ಬಾರಿ ದಂಡ 1.50 ಲಕ್ಷ ರೂ. ಮತ್ತು ಮೂರನೇ ಬಾರಿಗೆ ಸಂಭವಿಸಿದಲ್ಲಿ, ಅಬಕಾರಿ ಇಲಾಖೆಯು ಮದ್ಯ ಮಾರಾಟದ ಪರವಾನಗಿಯನ್ನು ರದ್ದುಗೊಳಿಸಬಹುದು,  ಎಂದು ರಾಕೇಶ್ ಬಹದ್ದೂರ್ ಸಿಂಗ್  ಮಾಹಿತಿ ನೀಡಿದ್ದಾರೆ. ಗ್ರಾಹಕರಿಂದ ಹೆಚ್ಚು ಶುಲ್ಕ ವಿಧಿಸುವ ಮಾರಾಟಗಾರರ ವಿರುದ್ಧ ಕಠಿಣ ಕ್ರಮವನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು: ಮೃತದೇಹವಿಟ್ಟು ಸರ್ಕಾರದ ವಿರುದ್ಧ ಪ್ರತಿಭಟನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..