ನಿಮಗೆ ವಾರ್ ಮಾಡುವುದು ಹೇಗೆಂದು ಹೇಳಿಕೊಟ್ಟರೆ..ರಾವತ್ ವಿರುದ್ಧ ಚಿದಂಬರಂ ವಾಗ್ದಾಳಿ!

Suvarna News   | Asianet News
Published : Dec 28, 2019, 03:51 PM IST
ನಿಮಗೆ ವಾರ್ ಮಾಡುವುದು ಹೇಗೆಂದು ಹೇಳಿಕೊಟ್ಟರೆ..ರಾವತ್ ವಿರುದ್ಧ ಚಿದಂಬರಂ ವಾಗ್ದಾಳಿ!

ಸಾರಾಂಶ

ಭೂಸೇನಾ ಮುಖ್ಯಸ್ಥರ ಹೇಳಿಕೆ ಖಂಡಿಸಿದ ಕಾಂಗ್ರೆಸ್ ನಾಯಕ| ಬಿಪಿನ್ ರಾವತ್ ರಾಜಕೀಯ ಹೇಳಿಕೆ ನೀಡಿದ್ದು ಸರಿಯಲ್ಲ ಎಂದ ಚಿದಂಬರಂ| ರಾಜಕೀಯ ನಾಯಕರಿಗೆ ಸೇನಾ ಮುಖ್ಯಸ್ಥರ ಪಾಠದ ಅಗತ್ಯವಿಲ್ಲ ಎಂದ ಚಿದಂಬರಂ| 'ಸೇನಾ ಮುಖ್ಯಸ್ಥರಿಗೆ ಯುದ್ಧ ಮಾಡುವುದು ಹೇಗೆಂದು ಹೇಳಿಕೊಡಲು ಸಾಧ್ಯವಿಲ್ಲ'| ಸೇನಾ ಮುಖ್ಯಸ್ಥರು ತಮ್ಮ ಕಾರ್ಯವ್ಯಾಪ್ತಿ ಅರಿತು ಮಾತನಾಡಬೇಕು ಎಂದ ಚಿದಂಬರಂ|

ನವದೆಹಲಿ(ಡಿ.28): ಬೆಂಕಿ ಹಚ್ಚಿಸುವವರು ರಾಜಕೀಯ ನಾಯಕರಲ್ಲ ಎಂಬ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆಯನ್ನ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಖಂಡಿಸಿದ್ದಾರೆ.

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಚಿದಂಬರಂ, ಸೇನಾ ಮುಖ್ಯಸ್ಥರು ರಾಜಕೀಯ ಹೇಳಿಕೆ ನೀಡುವ ಸಂಪ್ರದಾಯ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ರಾಜಕೀಯ ನಾಯಕರು ಏನು ಮಾಡಬೇಕು ಏನು ಮಾಡಬಾರದು ಎಂದು ಸೇನಾ ಮುಖ್ಯಸ್ಥರು ಪಾಠ ಮಾಡುವ ಅಗತ್ಯವಿಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ಸೇನಾ ಮುಖ್ಯಸ್ಥರು ತಮ್ಮ ಕಾರ್ಯವ್ಯಾಪ್ತಿ ಅರಿತು ಮಾತನಾಡಬೇಕು. ಯುದ್ಧ ಹೇಗೆ ಮಾಡಬೇಕು ಎಂಬುದನ್ನು ಸೇನಾ ಮುಖ್ಯಸ್ಥರಿಗೆ ರಾಜಕೀಯ ನಾಯಕರು ಹೇಳಿ ಕೊಡಲು ಸಾಧ್ಯವಿಲ್ಲ. ಅದೇ ರೀತಿ ರಾಜಕೀಯ ನಾಯಕರು ರಾಜಕೀಯ ಹೇಗೆ ಮಾಡಬೇಕು ಎಂದು ಸೇನಾ ಮುಖ್ಯಸ್ಥರು ಸಲಹೆ ನೀಡಬಾರದು ಎಂದು ಚಿದಂಬರಂ ಹೇಳಿದ್ದಾರೆ.

ಬೆಂಕಿ ಹಚ್ಚುವವರು ನಾಯಕರಲ್ಲ ಎಂಬ ಸೇನಾ ಮುಖ್ಯಸ್ಥರ ಹೇಳಿಕೆಗೆ ವಿಪಕ್ಷಗಳ ಆಕ್ಷೇಪ!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟವನ್ನು ಖಂಡಿಸಿದ್ದ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್, ಬೆಂಕಿ ಹಚ್ಚಿಸುವವರು ನಾಯಕರು ಎಂದೆನೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಹುಲ್ ಗಾಂಧಿ ಹಾಗೂ ಸರ್ಕಾರದ ಮಧ್ಯೆ ಗಲಾಟೆಗೆ ಕಾರಣವಾದ ಸೇನಾ ಮುಖ್ಯಸ್ಥರ ಪ್ರಕಟವಾಗದ ಪುಸ್ತಕ: ದೆಹಲಿ ಪೊಲೀಸರಿಂದ FIR
ಮಗಳಿಗಾಗಿ ಆಟೋದಲ್ಲೇ 'ಅಮ್ಮನ ಮಡಿಲು' ಸೃಷ್ಟಿಸಿದ ಅಪ್ಪ; ಆಟೋ ಡ್ರೈವರ್ ನಗುಮುಖದ ಹಿಂದಿದೆ ಕಣ್ಣೀರ ಕಥೆ!