ನಿಮಗೆ ವಾರ್ ಮಾಡುವುದು ಹೇಗೆಂದು ಹೇಳಿಕೊಟ್ಟರೆ..ರಾವತ್ ವಿರುದ್ಧ ಚಿದಂಬರಂ ವಾಗ್ದಾಳಿ!

By Suvarna NewsFirst Published Dec 28, 2019, 3:51 PM IST
Highlights

ಭೂಸೇನಾ ಮುಖ್ಯಸ್ಥರ ಹೇಳಿಕೆ ಖಂಡಿಸಿದ ಕಾಂಗ್ರೆಸ್ ನಾಯಕ| ಬಿಪಿನ್ ರಾವತ್ ರಾಜಕೀಯ ಹೇಳಿಕೆ ನೀಡಿದ್ದು ಸರಿಯಲ್ಲ ಎಂದ ಚಿದಂಬರಂ| ರಾಜಕೀಯ ನಾಯಕರಿಗೆ ಸೇನಾ ಮುಖ್ಯಸ್ಥರ ಪಾಠದ ಅಗತ್ಯವಿಲ್ಲ ಎಂದ ಚಿದಂಬರಂ| 'ಸೇನಾ ಮುಖ್ಯಸ್ಥರಿಗೆ ಯುದ್ಧ ಮಾಡುವುದು ಹೇಗೆಂದು ಹೇಳಿಕೊಡಲು ಸಾಧ್ಯವಿಲ್ಲ'| ಸೇನಾ ಮುಖ್ಯಸ್ಥರು ತಮ್ಮ ಕಾರ್ಯವ್ಯಾಪ್ತಿ ಅರಿತು ಮಾತನಾಡಬೇಕು ಎಂದ ಚಿದಂಬರಂ|

ನವದೆಹಲಿ(ಡಿ.28): ಬೆಂಕಿ ಹಚ್ಚಿಸುವವರು ರಾಜಕೀಯ ನಾಯಕರಲ್ಲ ಎಂಬ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆಯನ್ನ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಖಂಡಿಸಿದ್ದಾರೆ.

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಚಿದಂಬರಂ, ಸೇನಾ ಮುಖ್ಯಸ್ಥರು ರಾಜಕೀಯ ಹೇಳಿಕೆ ನೀಡುವ ಸಂಪ್ರದಾಯ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ರಾಜಕೀಯ ನಾಯಕರು ಏನು ಮಾಡಬೇಕು ಏನು ಮಾಡಬಾರದು ಎಂದು ಸೇನಾ ಮುಖ್ಯಸ್ಥರು ಪಾಠ ಮಾಡುವ ಅಗತ್ಯವಿಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

P Chidambaram: DGP&Army General are being asked to support govt, it's a shame. Let me appeal to Genaral Rawat,you head the Army&mind your business. It's not business of Army to tell politicians what we should do, just as it's not our business to tell you how to fight a war pic.twitter.com/MgjkeSPBPn

— ANI (@ANI)

ಸೇನಾ ಮುಖ್ಯಸ್ಥರು ತಮ್ಮ ಕಾರ್ಯವ್ಯಾಪ್ತಿ ಅರಿತು ಮಾತನಾಡಬೇಕು. ಯುದ್ಧ ಹೇಗೆ ಮಾಡಬೇಕು ಎಂಬುದನ್ನು ಸೇನಾ ಮುಖ್ಯಸ್ಥರಿಗೆ ರಾಜಕೀಯ ನಾಯಕರು ಹೇಳಿ ಕೊಡಲು ಸಾಧ್ಯವಿಲ್ಲ. ಅದೇ ರೀತಿ ರಾಜಕೀಯ ನಾಯಕರು ರಾಜಕೀಯ ಹೇಗೆ ಮಾಡಬೇಕು ಎಂದು ಸೇನಾ ಮುಖ್ಯಸ್ಥರು ಸಲಹೆ ನೀಡಬಾರದು ಎಂದು ಚಿದಂಬರಂ ಹೇಳಿದ್ದಾರೆ.

ಬೆಂಕಿ ಹಚ್ಚುವವರು ನಾಯಕರಲ್ಲ ಎಂಬ ಸೇನಾ ಮುಖ್ಯಸ್ಥರ ಹೇಳಿಕೆಗೆ ವಿಪಕ್ಷಗಳ ಆಕ್ಷೇಪ!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟವನ್ನು ಖಂಡಿಸಿದ್ದ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್, ಬೆಂಕಿ ಹಚ್ಚಿಸುವವರು ನಾಯಕರು ಎಂದೆನೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು.

click me!