
ರಾಂಚಿ(ಜು.17): ವಿಶ್ವಹಿಂದೂ ಪರಿಷತ್ ನೂತನ ಅಧ್ಯಕ್ಷರಾಗಿ ಪದ್ಮಶ್ರಿ ಪುರಸ್ಕೃತ, ಮೂಳೆ ಶಸ್ತ್ರಚಿಕಿತ್ಸಕ ವೈದ್ಯ ರಬೀಂದ್ರ ನರೈನ್ ಸಿಂಗ್ ಆಯ್ಕೆಯಾಗಿದ್ದಾರೆ. ಇಂದ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಡಾ.ಆರ್ಎನ್ ಸಿಂಗ್ ಅವರನ್ನು ಕೇಸರಿ ಪಡೆಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಪದ್ಮಶ್ರೀ ರವೀಂದ್ರ ನರೈನ್ ಸಿಂಗ್ ಅವರನ್ನು ವಿಶ್ವಹಿಂದೂ ಪರಿಷತ್ ಟ್ರಸ್ಟಿ ಮಂಡಳಿ ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ ಎಂದು ವಿಎಚ್ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಿಹಾರ ಮೂಲದ ಡಾ.ಆರ್ಎನ್ ಸಿಂಗ್ ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
2018 ರ ಏಪ್ರಿಲ್ನಲ್ಲಿ ವಿಎಚ್ಪಿ ಅಧ್ಯಕ್ಷರಾಗಿ ಆಯ್ಕೆಯಾಗಿ ಇದುವರೆಗೆ ಸೇವೆ ಸಲ್ಲಿಸುತ್ತಿದ್ದ ವಿಷ್ಣು ಸದಾಶಿವ್ ಕೊಕ್ಜೆ ಅವರ ಸ್ಥಾನವನ್ನು ನೂತನವಾಗಿ ಆಯ್ಕೆಯಾಗಿರುವ ಸಿಂಗ್ ಅಲಂಕರಿಸಲಿದ್ದಾರೆ. ಡಾ.ಆರ್ಎನ್ ಸಿಂಗ್ ವೈದ್ಯಕ್ಷೀಯ ಕ್ಷೇತ್ರಕ್ಕೆ ನೀಡಿದ್ದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ 2010ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರೀಕ ಗೌರವ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ