ಪದ್ಮಶ್ರೀ ಪುರಸ್ಕೃತ ಡಾ.ಆರ್‌ಎನ್ ಸಿಂಗ್ ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷರಾಗಿ ಆಯ್ಕೆ!

Published : Jul 17, 2021, 07:15 PM IST
ಪದ್ಮಶ್ರೀ ಪುರಸ್ಕೃತ ಡಾ.ಆರ್‌ಎನ್ ಸಿಂಗ್ ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷರಾಗಿ ಆಯ್ಕೆ!

ಸಾರಾಂಶ

ಕೇಸರಿ ಪಡೆ ವಿಶ್ವ ಹಿಂದೂ ಪರಿಷತ್‌ಗೆ ನೂತನ ಅಧ್ಯಕ್ಷರ ಆಯ್ಕೆ ಪದ್ಮಶ್ರಿ ಪುರಸ್ಕೃತ, ವೈದ್ಯ ಆರ್‌ಎನ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆ

ರಾಂಚಿ(ಜು.17):  ವಿಶ್ವಹಿಂದೂ ಪರಿಷತ್ ನೂತನ ಅಧ್ಯಕ್ಷರಾಗಿ ಪದ್ಮಶ್ರಿ ಪುರಸ್ಕೃತ, ಮೂಳೆ ಶಸ್ತ್ರಚಿಕಿತ್ಸಕ ವೈದ್ಯ ರಬೀಂದ್ರ ನರೈನ್ ಸಿಂಗ್ ಆಯ್ಕೆಯಾಗಿದ್ದಾರೆ. ಇಂದ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಡಾ.ಆರ್‌ಎನ್ ಸಿಂಗ್ ಅವರನ್ನು ಕೇಸರಿ ಪಡೆಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಪಾಕ್ ಮೀತಿ ಮೀರಿದ್ರೆ ಇಸ್ಲಾಮಾಬಾದ್‌ನಲ್ಲೂ ರಾಮಮಂದಿರ!

ಪದ್ಮಶ್ರೀ ರವೀಂದ್ರ ನರೈನ್ ಸಿಂಗ್ ಅವರನ್ನು ವಿಶ್ವಹಿಂದೂ ಪರಿಷತ್ ಟ್ರಸ್ಟಿ ಮಂಡಳಿ ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ ಎಂದು ವಿಎಚ್‌ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಿಹಾರ ಮೂಲದ ಡಾ.ಆರ್‌ಎನ್ ಸಿಂಗ್ ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 

ದಕ್ಷಿಣ ಕನ್ನಡದ ಪ್ರಸಿದ್ಧ ದೇಗುಲದಲ್ಲಿ ಅಶ್ಲೀಲ ಫೊಟೊಶೂಟ್ : ಮಹತ್ವದ ನಿರ್ಣಯ

2018 ರ ಏಪ್ರಿಲ್‌ನಲ್ಲಿ ವಿಎಚ್‌ಪಿ ಅಧ್ಯಕ್ಷರಾಗಿ ಆಯ್ಕೆಯಾಗಿ ಇದುವರೆಗೆ ಸೇವೆ ಸಲ್ಲಿಸುತ್ತಿದ್ದ ವಿಷ್ಣು ಸದಾಶಿವ್ ಕೊಕ್ಜೆ ಅವರ ಸ್ಥಾನವನ್ನು ನೂತನವಾಗಿ ಆಯ್ಕೆಯಾಗಿರುವ ಸಿಂಗ್ ಅಲಂಕರಿಸಲಿದ್ದಾರೆ.  ಡಾ.ಆರ್‌ಎನ್ ಸಿಂಗ್  ವೈದ್ಯಕ್ಷೀಯ ಕ್ಷೇತ್ರಕ್ಕೆ ನೀಡಿದ್ದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ 2010ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರೀಕ ಗೌರವ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್