ಪೆಹಲ್ಗಾಮ್ ದಾಳಿಯಲ್ಲಿ ಅಪ್ರಾಪ್ತ ಉಗ್ರರು, ಅವರ ಸೆಲ್ಫಿ ಕ್ರೌರ್ಯ ಬಿಚ್ಚಿಟ್ಟ ಕುಟುಂಬ

Published : Apr 25, 2025, 08:21 AM ISTUpdated : Apr 25, 2025, 08:39 AM IST
ಪೆಹಲ್ಗಾಮ್ ದಾಳಿಯಲ್ಲಿ ಅಪ್ರಾಪ್ತ ಉಗ್ರರು, ಅವರ ಸೆಲ್ಫಿ ಕ್ರೌರ್ಯ ಬಿಚ್ಚಿಟ್ಟ ಕುಟುಂಬ

ಸಾರಾಂಶ

ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದ ಉಗ್ರರ ಗುಂಪಿನಲ್ಲಿ ಕೆಲವರು ಅಪ್ರಾಪ್ತರಾಗಿದ್ದರು . ತಲೆ ಮೇಲೆ ಕ್ಯಾಮೆರಾ ಧರಿಸಿಕೊಂಡು ಬಂದು ದಾಳಿ ನಡೆಸಿದ್ದರು. ಈ ಕುರಿತು ಮಾಹಿತಿಯನ್ನು ಬದುಕುಳಿದ ಕುಟುಂಬ ಬಿಚ್ಚಿಟ್ಟಿದೆ.  

ಅನಂತನಾಗ್(ಏ.25)  ಪಹಲ್ಗಾಂ ಉಗ್ರ ದಾಳಿಯಲ್ಲಿ ಕೆಲ ಅಪ್ರಾಪ್ತರೂ ಭಾಗಿಯಾಗಿದ್ದರು ಎಂಬ ಆತಂಕಕಾರಿ ವಿಷಯವನ್ನು ದುರಂತದಲ್ಲಿ ಬದುಕುಳಿದು ಬಂದ ಮಧ್ಯಪ್ರದೇಶದ ಕುಟುಂಬವೊಂದು ಹಂಚಿಕೊಂಡಿದೆ. ದಾಳಿ ವೇಳೆ ಸುಶೀಲಾ ನಥಾನಿಯನ್‌ ಬಲಿಯಾಗಿದ್ದರು. ಆದರೆ ಅವರ ಪತ್ನಿ ಜೆನ್ನಿಫರ್‌ ಮತ್ತು ಪುತ್ರ ಆಸ್ಟಿನ್‌ ಬದುಕುಳಿದುಬಂದಿದ್ದಾರೆ. ಜೆನ್ನಿಫರ್ ಹೇಳಿರುವ ಪ್ರಕಾರ ‘ಉಗ್ರರ ಜತೆಯಲ್ಲಿ ಸುಮಾರು 15 ವರ್ಷದ ಐದಾರು ಬಾಲಕರಿದ್ದರು. ನಮ್ಮ ಮೇಲೆ ದಾಳಿಯಾಗುವಾಗ ಅವರು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ತಲೆಯ ಮೇಲೆ ಕ್ಯಾಮೆರಾ ಧರಿಸಿದ್ದರು. ನನ್ನ ಕಣ್ಣಮುಂದೆಯೇ 6 ಜನರನ್ನು ಗುಂಡಿಕ್ಕಿ ಕೊಂದರು’ ಎಂದು ಹೇಳಿದ್ದಾರೆ.

ಪಹಲ್ಗಾಮ್‌ ನರಮೇಧ ಬೆನ್ನಲ್ಲೇ ಕೇಕ್‌ ಕಟ್‌
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ 26 ಪ್ರವಾಸಿಗರ ನರಮೇಧ ನಡೆದ ಹೊತ್ತಿನಲ್ಲೇ ನವದೆಹಲಿಯಲ್ಲಿನ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೇಕ್‌ ಕತ್ತರಿಸಿದ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಕೇಕ್‌ ಬಾಕ್ಸ್‌ ಹಿಡಿದುಕೊಂಡು ರಾಯಭಾರ ಕಚೇರಿಯೊಳಗೆ ತೆರಳುತ್ತಿದ್ದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಈ ವೇಳೆ ಮಾಧ್ಯಮಗಳು ಕೇಕ್‌ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ನೀವು ರಾಯಭಾರ ಕಚೇರಿಯ ಸಿಬ್ಬಂದಿಯೇ ಎಂದು ಪ್ರಶ್ನಿಸಿದಾಗ ಆತ ಯಾವುದೇ ಉತ್ತರ ನೀಡಿದೇ ತಪ್ಪಿಸಿಕೊಂಡು ಹೋಗಿದ್ದಾನೆ. ಭಾರತದಲ್ಲಿನ ದುರಂತದ ಹೊತ್ತಿನಲ್ಲೂ ಪಾಕ್‌ ಅಧಿಕಾರಿಗಳು ಕೇಕ್‌ ಕತ್ತರಿಸಿ ಸಂಭ್ರಮಿಸಿದ ಬಗ್ಗೆ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿದೆ. ಇದು ಪ್ರವಾಸಿಗರ ಹತ್ಯೆಯನ್ನು ಸಂಭ್ರಮಿಸಲು ಮಾಡಿದ್ದು ಎಂಬ ಟೀಕೆ ವ್ಯಕ್ತವಾಗಿದೆ.

ಕಲ್ಮಾ ಪಠಿಸಿದವರ ಬಿಟ್ಟರು, ಹಿಂದೂಗಳಿಗೆ ಗುಂಡಿಟ್ಟರು: ಮೃತ ಶೈಲೇಶ್‌ ಪ ...

ಗಡಿಯಲ್ಲಿ 42 ಉಗ್ರ ಲಾಂಚ್‌ಪ್ಯಾಡ್‌ ಸಕ್ರಿಯ
ಪಹಲ್ಗಾಂ ಉಗ್ರರ ದಾಳಿ ಬೆನ್ನಲ್ಲೇ ಗಡಿನಿಯಂತ್ರಣ ರೇಖೆ ಬಳಿ ಕಾರ್ಯಾಚರಿಸುತ್ತಿರುವ ಉಗ್ರರ ಅಡಗುತಾಣಗಳ ಪತ್ತೆ ಕಾರ್ಯವನ್ನು ಭಾರತ ಚುರುಕುಗೊಳಿಸಿದ್ದು, ಈ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ 42 ಉಗ್ರರ ಅಡುಗುತಾಣ ಪತ್ತೆಯಾಗಿದೆ. ಅದರಲ್ಲಿ 150-200 ತರಬೇತಿ ಪಡೆದ ಉಗ್ರರು ಭಾರತದೊಳಗೆ ನುಸುಳಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.60ಕ್ಕೂ ಹೆಚ್ಚು ಉಗ್ರರು: ಹಿಜ್ಬುಲ್‌ ಮುಜಾಹಿದೀನ್‌(ಎಚ್‌ಎಂ), ಜೈಶ್‌-ಎ-ಮೊಹಮ್ಮದ್‌(ಜೆಇಎಂ) ಮತ್ತು ಲಷ್ಕರ್‌ ಎ ತೊಯ್ಬಾ(ಎಲ್‌ಇಟಿ)ಗೆ ಸೇರಿದ 60 ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವರ ಜತೆಗೆ 17 ಸ್ಥಳೀಯ ಉಗ್ರರೂ ಹಿಂಸಾಚಾರಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!