ಗಡಿ ಪುಂಡಾಟಿಕೆಗೆ ದೊಡ್ಡ ಅಸ್ತ್ರ ಬಳಸಿದ್ದ ಪಾಕಿಸ್ತಾನ!

Published : Nov 16, 2020, 03:43 PM IST
ಗಡಿ ಪುಂಡಾಟಿಕೆಗೆ ದೊಡ್ಡ ಅಸ್ತ್ರ ಬಳಸಿದ್ದ ಪಾಕಿಸ್ತಾನ!

ಸಾರಾಂಶ

ನ.13ರಂದು ಕದನ ವಿರಾಮ ಉಲ್ಲಂಘಿಸಿ ಭಾರತದ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನ | ಗಡಿ ಪುಂಡಾಟಿಕೆಗೆ ದೊಡ್ಡ ಅಸ್ತ್ರ ಬಳಸಿದ್ದ ಪಾಕಿಸ್ತಾನ| ಹೀಗಾಗೇ ಸಾವು ಹೆಚ್ಚಾಯ್ತು: ಬಿಎಸ್‌ಎಫ್‌

ಶ್ರೀನಗರ: ನ.13ರಂದು ಕದನ ವಿರಾಮ ಉಲ್ಲಂಘಿಸಿ ಭಾರತದ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನ ದೊಡ್ಡ ಮಟ್ಟದ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಿತ್ತು. ಈ ವೇಳೆ ಪಾಕ್‌ ಸೇನೆಯ ನೆರವು ಪಡೆದು ಉಗ್ರರು ಒಳನುಸುಳಿದ್ದರು. ಇದರಿಂದಾಗಿ ಭಾರತದ ಕಡೆಯಲ್ಲಿ ಹೆಚ್ಚಿನ ಸಾವು-ನೋವು ಸಂಭವಿಸಿದೆ ಎಂದು ಬಿಎಸ್‌ಎಫ್‌ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದ ಐವರು ಯೋಧರಿಗೆ ಬಿಎಸ್‌ಎಫ್‌ ವತಿಯಿಂದ ಭಾನುವಾರ ಅಂತಿಮ ನಮನ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಐಜಿಪಿ ರಾಜೇಶ್‌ ಮಿಶ್ರಾ, 2003ರಲ್ಲಿ ಮಾಡಿಕೊಂಡ ಕದನವಿರಾಮ ಒಪ್ಪಂದದ ಪ್ರಕಾರ ಪಾಕಿಸ್ತಾನ ಅಥವಾ ಭಾರತ ಗಡಿಯಲ್ಲಿ ದೊಡ್ಡ ಮಟ್ಟದ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವಂತೆ ಇಲ್ಲ ಎಂದರು.

ಆದರೆ, ಭಾರತದ ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲದೇ ಇದ್ದರೂ ಪಾಕಿಸ್ತಾನ ಪಡೆಗಳು ಉರಿ, ನಾಗೌನ್‌, ಕೆರನ್‌ ಮತ್ತು ಗುರೇಜ್‌ ಸೆಕ್ಟರ್‌ಗಳಲ್ಲಿ ದೊಡ್ಡ ಮಟ್ಟದ ಫಿರಂಗಿ, ಮೊರ್ಟರ್‌ ಹಾಗೂ ಇತರ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸಿದೆ. ಪಾಕಿಸ್ತಾನದ ದಾಳಿಯಿಂದ ನಾಗರಿಕ ಪ್ರದೇಶಗಳ ಮೇಲೆ ಭಾರೀ ಪ್ರಮಾಣ ಹಾನಿ ಸಂಭವಿಸಿದೆ. ಆರು ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಪಾಕ್‌ ದಾಳಿಗೆ ಭಾರತ ಕೂಡ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?