ಉಗ್ರರ ನೆಲೆ ಮೇಲೆ ದಾಳಿಯಾಗಿದೆ ಎಂದು ಬಂದು ತೋರ್ಸಿ ನೋಡೋಣ; ಪಾಕ್ ಸವಾಲ್

By Kannadaprabha NewsFirst Published Oct 22, 2019, 8:37 AM IST
Highlights

ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ ವಿರುದ್ಧ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ. 3 ಉಗ್ರಗಾಮಿ ಶಿಬಿರಗಳು ನಾಶವಾಗಿವೆ. ಒಂದು ಶಿಬಿರಕ್ಕೆ ತೀವ್ರ ರೀತಿಯ ಹಾನಿಯಾಗಿದೆ. 6ರಿಂದ 10 ಪಾಕಿಸ್ತಾನಿ ಯೋಧರು ಹತರಾಗಿದ್ದಾರೆ. 

ನವದೆಹಲಿ (ಅ.22): ಪಾಕ್‌ ಆಕ್ರಮಿತ ಕಾಶ್ಮೀರದ 3 ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದ್ದೇವೆ ಎಂಬ ಭಾರತೀಯ ಸೇನೆಯ ಹೇಳಿಕೆ ಸುಳ್ಳು ಎಂದು ಪ್ರತಿಪಾದಿಸಿರುವ ಪಾಕಿಸ್ತಾನ, ಯಾವುದೇ ವಿದೇಶಿ ರಾಯಭಾರಿ ಅಥವಾ ಮಾಧ್ಯಮಗಳನ್ನು ದಾಳಿ ನಡೆದ ಸ್ಥಳಕ್ಕೆ ಕರೆತಂದು ತನ್ನ ವಾದವನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ.

ಭಾರತೀಯ ಸೇನಾ ಮುಖ್ಯಸ್ಥರು 3 ಶಿಬಿರಗಳನ್ನು ನಾಶ ಮಾಡಿರುವುದಾಗಿ ಹೇಳಿದ್ದಾರೆ. ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರ ಹೇಳಿಕೆಯಿಂದ ಬೇಸರವಾಗಿದೆ. ದಾಳಿ ಮಾಡಲು ಅಲ್ಲಿ ಶಿಬಿರಗಳೇ ಇಲ್ಲ. ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಯಾವುದೇ ವಿದೇಶಿ ರಾಜತಾಂತ್ರಿಕ/ಮಾಧ್ಯಮದವರನ್ನು ಕರೆತಂದು ತಮ್ಮ ವಾದವನ್ನು ಸಾಬೀತುಪಡಿಸಲಿ ಎಂದು ಪಾಕಿಸ್ತಾನದ ಸೇನಾ ವಕ್ತಾರ ಮೇಜರ್‌ ಜನರಲ್‌ ಆಸಿಫ್‌ ಗಫರ್‌ ಅವರು ಟ್ವೀಟ್‌ ಮಾಡಿದ್ದಾರೆ.

 

The propensity of false claims by senior Indian military leadership especially since Pulwama incident is detrimental to peace in the region. Such false claims by Indian Army are being made to suit vested domestic interests. This is against professional military ethos.2/2.

— DG ISPR (@OfficialDGISPR)

Indian COAS’ statement claiming destruction of 3 alleged camps in AJK is disappointing as he holds a very responsible appointment. There are no camps let alone targeting those. Indian Embassy in Pakistan is welcome to take any foreign diplomat / media to ‘prove’ it on ground.1/2.

— DG ISPR (@OfficialDGISPR)

ಪುಲ್ವಾಮಾ ದಾಳಿ ಬಳಿಕ ಭಾರತೀಯ ಸೇನಾ ನಾಯಕತ್ವದ ಸುಳ್ಳು ಹೇಳಿಕೆ ನೀಡುವ ಪ್ರವೃತ್ತಿ ಈ ಭಾಗದ ಶಾಂತಿಗೆ ತೊಡಕಾಗಿದೆ. ಇದು ವೃತ್ತಿಪರ ಮಿಲಿಟರಿ ನೈತಿಕತೆಗೆ ವಿರುದ್ಧವಾದುದು ಎಂದು ಹೇಳಿದ್ದಾರೆ.

ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ ವಿರುದ್ಧ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ. 3 ಉಗ್ರಗಾಮಿ ಶಿಬಿರಗಳು ನಾಶವಾಗಿವೆ. ಒಂದು ಶಿಬಿರಕ್ಕೆ ತೀವ್ರ ರೀತಿಯ ಹಾನಿಯಾಗಿದೆ. 6ರಿಂದ 10 ಪಾಕಿಸ್ತಾನಿ ಯೋಧರು ಹತರಾಗಿದ್ದಾರೆ.

ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಉಗ್ರರು ಸಾವಿಗೀಡಾಗಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿಕೆ ನೀಡಿದ್ದರು. ಕನಿಷ್ಠ 35 ಉಗ್ರರು ಈ ದಾಳಿ ವೇಳೆ ಹತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಕೆಲ ಮಾಧ್ಯಮಗಳು ಹಾಗೂ ಸುದ್ದಿಸಂಸ್ಥೆಗಳು ವರದಿ ಮಾಡಿದ್ದವು. ಆದರೆ ನಾಗರಿಕ ಪ್ರದೇಶಗಳ ಮೇಲೆ ಭಾರತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ದೂಷಿಸಿತ್ತು.

click me!