ಆಪರೇಷನ್ ಸಿಂದೂರ ವೇಳೆ ಭಾರತದ ರಕ್ಷಣಾ ವ್ಯವಸ್ಥೆಯ ಗುಪ್ತ ಮಾಹಿತಿ ಚೀನಾ ನೀಡಿತ್ತೆಂದು ಒಪ್ಪಿಕೊಂಡ ಪಾಕ್

Published : Jun 27, 2025, 06:18 PM IST
Khawaja Asif

ಸಾರಾಂಶ

ಭಾರತದೊಂದಿಗಿನ ಮಿಲಿಟರಿ ಉದ್ವಿಗ್ನತೆಯ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಭಾರತದ ವಾಯು ರಕ್ಷಣಾ ವ್ಯವಸ್ಥೆಗಳ ಕುರಿತು ಗುಪ್ತಚರ ಮಾಹಿತಿ ಒದಗಿಸಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ.  

ಇಸ್ಲಾಮಾಬಾದ್: ಭಾರತದೊಂದಿಗೆ ಮಿಲಿಟರಿ ಮಾತುಕತೆಗಳ ನಡುವೆ, ಚೀನಾ ಇಸ್ಲಾಮಾಬಾದ್‌ಗೆ ಪ್ರಮುಖ ಗುಪ್ತಚರ ಮಾಹಿತಿ ಒದಗಿಸಿತ್ತು ಎಂಬುದನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. ಈ ಮಾಹಿತಿಯಲ್ಲಿ ಭಾರತದ ವಾಯು ರಕ್ಷಣಾ ವ್ಯವಸ್ಥೆಗಳ ಕುರಿತು ವಿವರಗಳು ಇದ್ದವು ಎಂದು ವರದಿಯಾಗಿದೆ, ಇದರಿಂದ ಪಾಕಿಸ್ತಾನ ಹೆಚ್ಚಿದ ಉದ್ವಿಗ್ನತೆ ನಡುವೆ ತನ್ನ ಕಾರ್ಯತಂತ್ರದ ಸಿದ್ಧತೆಯನ್ನು ಬಲಪಡಿಸಲು ಸಾಧ್ಯವಾಯ್ತು ಎನ್ನಲಾಗಿದೆ.

ಇತ್ತೀಚಿನ ಸಂದರ್ಶನದಲ್ಲಿ ಖವಾಜಾ ಆಸಿಫ್ ಮಾತನಾಡಿ, ಭಾರತದೊಂದಿಗೆ ಅಲ್ಪಾವಧಿಯ ಸಂಘರ್ಷದ ಸಮಯದದಲ್ಲಿ ಪಾಕಿಸ್ತಾನ ಹೆಚ್ಚಿನ ಎಚ್ಚರಿಕೆಯಿಂದ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ, ಭಾರತದ ರಕ್ಷಣಾ ಸಾಮರ್ಥ್ಯಗಳಿಗೆ ಸಂಬಂಧಿಸಿದ ಗುಪ್ತಚರ ಮಾಹಿತಿ ಹಂಚಿಕೆ ಮೂಲಕ ಬೀಜಿಂಗ್ ಪಾಕಿಸ್ತಾನಕ್ಕೆ ನೆರವಾಗಿ ಸಹಾಯ ಮಾಡಿದೆ ಎಂದು ಅವರು ಒತ್ತಿ ಹೇಳಿದರು. ಭಾರತದೊಂದಿಗೆ ನಡೆದ ಅಲ್ಪಾವಧಿಯ ಸಂಘರ್ಷದ ನಂತರ ಪಾಕಿಸ್ತಾನ ಎಚ್ಚರಿಕೆಯಿಂದ ಇರಲು ಚೀನಾ ನೀಡಿದ ಮಾಹಿತಿಯಿಂದಲೇ ಸಾಧ್ಯವಾಯ್ತು. ಸಂಘರ್ಷ ನಡೆದು ಒಂದೂವರೆ ತಿಂಗಳಿಗಿಂತ ಹೆಚ್ಚು ಕಾಲ ಕಳೆದಿದೆ ಆದರೂ ನಾವು ನಮ್ಮ ಭದ್ರತೆಯನ್ನು ಕಡಿಮೆ ಮಾಡಿಲ್ಲ ಎಂದು ಆಸಿಫ್ ಹೇಳಿದ್ದಾರೆ. ಕಾರ್ಯತಂತ್ರದ ದೃಷ್ಟಿಯಿಂದ ಮಿತ್ರ ರಾಷ್ಟ್ರಗಳು ಪರಸ್ಪರ ಗುಪ್ತಚರ ಮಾಹಿತಿ ಹಂಚಿಕೊಳ್ಳುತ್ತವೆ. ನಾವು ಚೀನಾದೊಂದಿಗೆ ಸಹ ಇದೇ ರೀತಿಯ ಸಹಕಾರ ನಡೆಸುತ್ತಿದ್ದೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಮಿತ್ರ ರಾಷ್ಟ್ರಗಳ ನಡುವಿನ ಗುಪ್ತಚರ ಸಹಕಾರ

ಉಪಗ್ರಹ ಚಿತ್ರಣಗಳು, ಬೆದರಿಕೆ ಮೌಲ್ಯಮಾಪನ ಸೇರಿದಂತೆ ಸೂಕ್ಷ್ಮ ಮಾಹಿತಿಗಳ ವಿನಿಮಯವು ಕಾರ್ಯತಂತ್ರದ ಹಿತಾಸಕ್ತಿಗಳನ್ನು ಹಂಚಿಕೊಳ್ಳುವ ರಾಷ್ಟ್ರಗಳ ನಡುವೆ ಸಾಮಾನ್ಯ ವಿಷಯವೆಂದು ಆಸಿಫ್ ವಿವರಿಸಿದರು. ಪಾಕಿಸ್ತಾನದಂತೆಯೇ, ಚೀನಾಕ್ಕೂ ಸಹ ಭಾರತದ ಕುರಿತು ತನ್ನದೇ ಆದ ಭದ್ರತಾ ಚಿಂತೆಗಳನ್ನು ಹೊಂದಿದ್ದು, ಇದುವರೆಗೂ ನಿಕಟ ಗುಪ್ತಚರ ಸಹಕಾರಕ್ಕೆ ಆಧಾರವಾಗಿದೆ ಎಂದು ಅವರು ಸೂಚಿಸಿದರು.

ವಿಶೇಷವಾಗಿ ಬೆದರಿಕೆಗಳು ಒಂದಕ್ಕೊಂದು ಸಂಬಂಧ ಹೊಂದಿರುವಾಗ ದೇಶಗಳು ತಮಗೆ ಗೊತ್ತಿರುವ ಮಾಹಿತಿಗಳನ್ನು ಪರಸ್ಪರ ಹಂಚಿಕೊಳ್ಳುವುದು ಸಾಮಾನ್ಯವಾಗಿದೆ. ಚೀನಾ ಕೂಡ, ಪಾಕಿಸ್ತಾನದಂತೆ, ಭಾರತದಿಂದ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಉಪಗ್ರಹ ಆಧಾರಿತ ಗುಪ್ತಚರ ಮಾಹಿತಿ ಮತ್ತು ಕಣ್ಗಾವಲು ವಿವರಗಳನ್ನು ಹಂಚಿಕೊಳ್ಳುವುದು ನಮ್ಮ ನಿರಂತರ ಕಾರ್ಯತಂತ್ರದ ಸಹಕಾರದ ಭಾಗವಾಗಿದೆ ಎಂದು ಆಸಿಫ್ ಹೇಳಿದರು.

ಆಪರೇಶನ್ ಸಿಂದೂರ ಮತ್ತು ಗಡಿ ಉದ್ವಿಗ್ನತೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಕಾರ್ಯಾಚರಣೆಗಳು ತೀವ್ರಗೊಂಡಿತ್ತು. ಇದಾಗಿ ಹಲವು ದಿನಗಳ ಬಳಿಕ ಈಗ ಆಸಿಫ್ ಅವರ ಈ ಹೇಳಿಕೆ ಗಮನ ಸೆಳೆದಿದೆ. ಪ್ರತೀಕಾರದವಾಗಿ, ಭಾರತೀಯ ಸಶಸ್ತ್ರ ಪಡೆಗಳು ಗಡಿಯಾಚೆಯ ಭಯೋತ್ಪಾದಕ ಶಿಬಿರಗಳ ಮೇಲೆ ‘ಆಪರೇಶನ್ ಸಿಂದೂರ’ ವನ್ನು ಆರಂಭಿಸಿದವು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಗಡಿಯಾಚೆಯಿಂದ ಭಾರೀ ಶೆಲ್ ದಾಳಿಗಳನ್ನು ನಡೆಸಿದ್ದು, ನಿಯಂತ್ರಣ ರೇಖೆ (LoC) ಉದ್ದಕ್ಕೂ ನಾಗರಿಕ ಪ್ರದೇಶಗಳಿಗೆ ಹಾನಿ ಉಂಟುಮಾಡಿತು. ಇದಕ್ಕೆ ಉತ್ತರವಾಗಿ, ಭಾರತೀಯ ಸೇನೆ ತೀವ್ರ ಪ್ರತಿದಾಳಿ ನಡೆಸಿತು. ವರದಿಯಂತೆ ಭಾರತೀಯ ಕ್ಷಿಪಣಿಗಳ ದಾಳಿಯಲ್ಲಿ ಪಾಕಿಸ್ತಾನದ 11 ವಾಯು ನೆಲೆಗಳು ನಾಶಗೊಂಡಿದ್ದು, ಇದರಿಂದ ಇಸ್ಲಾಮಾಬಾದ್ ಮತ್ತಷ್ಟು ಉದ್ವಿಗ್ನತೆಯಿಂದ ಹಿಂದೆ ಸರಿಯಬೇಕಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ಉರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್‌ಗೆ ಇಡಿ ಶಾಕ್, ₹7.9ಕೋಟಿ ಆಸ್ತಿ ಮುಟ್ಟುಗೋಲು