ಕ್ಷಿಪಣಿಗೆ ಅಂಜಿ ಅಭಿನಂದನ್‌ ಬಿಟ್ಟಿದ್ದ ಪಾಕ್‌: ಮಾಜಿ ರಾಯಭಾರಿ ಅಜಯ್‌ ಬಿಸಾರಿಯಾ ಪುಸ್ತಕದಲ್ಲಿ ಕುತೂಹಲದ ಅಂಶ

Published : Jan 09, 2024, 09:07 AM ISTUpdated : Jan 09, 2024, 09:10 AM IST
ಕ್ಷಿಪಣಿಗೆ ಅಂಜಿ ಅಭಿನಂದನ್‌ ಬಿಟ್ಟಿದ್ದ ಪಾಕ್‌: ಮಾಜಿ ರಾಯಭಾರಿ ಅಜಯ್‌ ಬಿಸಾರಿಯಾ ಪುಸ್ತಕದಲ್ಲಿ ಕುತೂಹಲದ ಅಂಶ

ಸಾರಾಂಶ

ಭಾರತದ ವಿಂಗ್ ಕಮಾಂಡರ್‌ ಅಭಿನಂದನ್ ವರ್ತಮಾನ್‌ 2019ರಲ್ಲಿ ಪಾಕಿಸ್ತಾನದಲ್ಲಿ ಸೆರೆಯಾಗಿದ್ದ ಸಮಯದಲ್ಲಿ, ಪಾಕ್‌ ಮೇಲೆ ಹಾರಿಸಲು ಭಾರತ 9 ಕ್ಷಿಪಣಿಗಳನ್ನು ಸಿದ್ಧವಾಗಿಟ್ಟುಕೊಂಡಿತ್ತು. ಈ ವಿಷಯ ಕೇಳಿ ಬೆಚ್ಚಿದ ಪಾಕಿಸ್ತಾನ ಅಭಿನಂದನ್‌ರನ್ನು ಬಂಧಮುಕ್ತಗೊಳಿಸಿತು ಎಂಬ ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ.

ನವದೆಹಲಿ: ಭಾರತದ ವಿಂಗ್ ಕಮಾಂಡರ್‌ ಅಭಿನಂದನ್ ವರ್ತಮಾನ್‌ 2019ರಲ್ಲಿ ಪಾಕಿಸ್ತಾನದಲ್ಲಿ ಸೆರೆಯಾಗಿದ್ದ ಸಮಯದಲ್ಲಿ, ಪಾಕ್‌ ಮೇಲೆ ಹಾರಿಸಲು ಭಾರತ 9 ಕ್ಷಿಪಣಿಗಳನ್ನು ಸಿದ್ಧವಾಗಿಟ್ಟುಕೊಂಡಿತ್ತು. ಈ ವಿಷಯ ಕೇಳಿ ಬೆಚ್ಚಿದ ಪಾಕಿಸ್ತಾನ ಅಭಿನಂದನ್‌ರನ್ನು ಬಂಧಮುಕ್ತಗೊಳಿಸಿತು ಎಂಬ ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ.
ಪಾಕಿಸ್ತಾನದ ಮಾಜಿ ಭಾರತೀಯ ರಾಯಭಾರಿ ಅಜಯ್‌ ಬಿಸಾರಿಯಾ, ‘ಆ್ಯಂಗರ್‌ ಮ್ಯಾನೇಜ್‌ಮೆಂಟ್‌: ದ ಟ್ರಬಲ್ಡ್‌ ಡಿಪ್ಲೋಮ್ಯಾಟಿಕ್‌ ರಿಲೇಶನ್‌ಶಿಪ್‌ ಬಿಟ್‌ವೀನ್ ಇಂಡಿಯಾ ಅಂಡ್‌ ಪಾಕಿಸ್ತಾನ್‌’ ಎಂಬ ಪುಸ್ತಕ ಬರೆದಿದ್ದು, ಅದರಲ್ಲಿ ಈ ಮಾಹಿತಿ ಇದೆ.

MIG 21 Fighter Jet: ಅಭಿನಂದನ್‌ ವರ್ಧಮಾನ್‌ ಸಾಹಸಕ್ಕೆ ಕಾರಣವಾಗಿದ್ದ ಯುದ್ಧವಿಮಾನದ ಬಗ್ಗೆ IAF ದೊಡ್ಡ ನಿರ್ಧಾರ!

ಬಾಲಾಕೋಟ್‌ ಏರ್‌ಸ್ಟ್ರೈಕ್ ಬಳಿಕ ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರನ್ನು ಪಾಕಿಸ್ತಾನ ಸೇನೆ ಬಂಧಿಸಿತ್ತು. ಈ ವೇಳೆ ಉಭಯ ದೇಶಗಳ ನಡುವೆ ಹಲವು ರಾಜತಾಂತ್ರಿಕ ಮಾತುಕತೆಗಳು ನಡೆದರೂ, ಪಾಕಿಸ್ತಾನದ ಮೇಲೆ ಹಾರಿಸಲು ಭಾರತ 9 ಕ್ಷಿಪಣಿಗಳನ್ನು ಸಿದ್ಧವಾಗಿಟ್ಟುಕೊಂಡಿತ್ತು. ಇದಕ್ಕೆ ಹೆದರಿಕೊಂಡ ಪಾಕಿಸ್ತಾನ, ರಾಯಭಾರಿಯಾದ ನನ್ನ ಜೊತೆ ಮಾತನಾಡಿ ಅಭಿನಂದನ್‌ ಬಿಡುಗಡೆಗೆ ತೀರ್ಮಾನಿಸಿರುವ ವಿಷಯವನ್ನು ತಿಳಿಸಿತು’ ಎಂದು ಅವರು ಹೇಳಿದ್ದಾರೆ.

ಖತಲ್‌ ಕೀ ರಾತ್ ಎಂದಿದ್ದ ಮೋದಿ:

ಇದೇ ವೇಳೆ ಅಭಿನಂದನ್‌ರನ್ನು ಪಾಕ್‌ ಸೆರೆ ಹಿಡಿದ 2019ರ ಫೇ.27ರ ರಾತ್ರಿಯನ್ನು ಪ್ರಧಾನಿ ನರೇಂದ್ರ ಮೋದಿ ‘ಖತಲ್‌ ಕೀ ರಾತ್‌’ (ರಕ್ತದೋಕುಳಿಯ ರಾತ್ರಿ) ಎಂದು ಸಂಬೋಧಿಸಿದ್ದರೂ ಎಂದು ಪುಸ್ತಕ ಹೇಳಿದೆ.

ಅಭಿನಂದನ್, ಭಾರತ ಗೇಲಿ ಮಾಡಿದ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ, ಚಹಾ ತಂದಿಟ್ಟ ತಲೆನೋವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್