ಪಾಕ್‌ ದಾಳಿಯಲ್ಲಿ ಕರ್ನಾಟಕದ ಯೋಧನಿಗೆ ತೀವ್ರ ಗಾಯ: ಸತತ 7 ತಾಸು ಅಪ್ರಚೋದಿತ ದಾಳಿ ನಡೆಸಿದ ಪಾಕ್‌ ಸೇನೆ

Published : Oct 28, 2023, 11:35 AM IST
ಪಾಕ್‌ ದಾಳಿಯಲ್ಲಿ ಕರ್ನಾಟಕದ ಯೋಧನಿಗೆ ತೀವ್ರ ಗಾಯ: ಸತತ 7 ತಾಸು ಅಪ್ರಚೋದಿತ ದಾಳಿ ನಡೆಸಿದ ಪಾಕ್‌ ಸೇನೆ

ಸಾರಾಂಶ

ರಾತ್ರಿ 10.40ರ ವೇಳೆಗೆ ಪಾಕ್ ಪಡೆಗಳು ಮಷಿನ್‌ ಗನ್‌ ಬಳಸಿ ಭಾರತದ ಪಡೆಗಳತ್ತ ಸತತವಾಗಿ ದಾಳಿ ನಡೆಸಿವೆ. ಈ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಕೂಡಾ ತಿರುಗೇಟು ನೀಡಿದ ಪರಿಣಾಮ ರಾತ್ರಿ 2.45ರ ವೇಳೆಗೆ ಪಾಕ್‌ ಪಡೆಗಳು ತಮ್ಮ ದಾಳಿಯನ್ನು ಸ್ಥಗಿತಗೊಳಿಸಿದವು.

ನವದೆಹಲಿ (ಅಕ್ಟೋಬರ್ 28, 2023): ಬಹಳ ದಿನಗಳ ಬಳಿಕ ಮತ್ತೆ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯ ಬಳಿ ಕ್ಯಾತೆ ತೆಗೆದಿರುವ ಪಾಕಿಸ್ತಾನ ಸೇನಾ ಪಡೆಗಳು, ಗುರುವಾರ ರಾತ್ರಿ ಸತತ 7 ಗಂಟೆಗಳ ಕಾಲ ಶೆಲ್ ಮತ್ತು ಗುಂಡಿನ ದಾಳಿ ನಡೆಸಿವೆ. ಈ ದಾಳಿಯಲ್ಲಿ ಕರ್ನಾಟಕ ಮೂಲದ ಯೋಧ ಬಸವರಾಜ್‌ ಸೇರಿದಂತೆ ಇಬ್ಬರು ಬಿಎಸ್‌ಎಫ್‌ ಯೋಧರು ಮತ್ತು ರಜನಿ ದೇವಿ ಎಂಬ ಓರ್ವ ಮಹಿಳೆಗೆ ಗಾಯಗಳಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಸೇನೆ, ‘ಗುರುವಾರ ರಾತ್ರಿ 9.15ರ ವೇಳೆಗೆ ಪಾಕ್‌ ರೇಂಜರ್ಸ್‌ಗಳು ಭಾರತದ ಅರ್ನಿರ್ಯಾ ಪ್ರದೇಶಕ್ಕೆ ಹೊಂದಿಕೊಂಡ ಅಂತಾರಾಷ್ಟ್ರೀಯ ಗಡಿ ಪ್ರದೇಶದ ಸೇನಾ ಪೋಸ್ಟ್‌ಗಳನ್ನು ಗುರಿಯಾಗಿಸಿ ಶೆಲ್‌ ದಾಳಿ ನಡೆಸಿದರು. ಈ ವೇಳೆ ಕೆಲವು ಶೆಲ್‌ಗಳು ಜನವಸತಿ ಪ್ರದೇಶಗಳಿಗೂ ತಲುಪಿ ರಜನಿ ದೇವಿ ಎಂಬ ಮಹಿಳೆ ಗಾಯಗೊಂಡಿದ್ದಾಳೆ.

ಇದನ್ನು ಓದಿ: ವಿದ್ಯುತ್‌ ಬಿಲ್‌ ಪಾವತಿ ಮಾಡಲ್ಲ ಅಂತ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ನಿವಾಸಿಗಳು: ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಇನ್ನು ರಾತ್ರಿ 10.40ರ ವೇಳೆಗೆ ಪಾಕ್ ಪಡೆಗಳು ಮಷಿನ್‌ ಗನ್‌ ಬಳಸಿ ಭಾರತದ ಪಡೆಗಳತ್ತ ಸತತವಾಗಿ ದಾಳಿ ನಡೆಸಿವೆ. ಈ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಕೂಡಾ ತಿರುಗೇಟು ನೀಡಿದ ಪರಿಣಾಮ ರಾತ್ರಿ 2.45ರ ವೇಳೆಗೆ ಪಾಕ್‌ ಪಡೆಗಳು ತಮ್ಮ ದಾಳಿಯನ್ನು ಸ್ಥಗಿತಗೊಳಿಸಿದವು. ಆದರೆ ಈ ದಾಳಿಯ ವೇಳೆ ಬಸವರಾಜ್‌ ಎಂಬ ಯೋಧನ ಕೈಗೆ ಗಾಯಗಳಾಗಿವೆ. ಜೊತೆಗೆ ಶೇರ್‌ಸಿಂಗ್‌ ಎಂಬ ಇನ್ನೊಬ್ಬ ಯೋಧ ಕೂಡಾ ಗಾಯಗೊಂಡಿದ್ದಾನೆ. ಆದರೆ ಮೂವರಿಗೂ ಮಾರಣಾಂತಿಕ ಗಾಯಗಳಾಗಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಡ್ರೋನ್‌ ಮೂಲಕ ಉಗ್ರರನ್ನು ಸಾಗಿಸಲು ಲಷ್ಕರ್‌ ಪ್ರಯತ್ನ: ಪಂಜಾಬ್‌ನಲ್ಲಿ ಉಗ್ರನ ಇಳಿಸಿರೋ ದೃಶ್ಯ ಸೆರೆ!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?