ಗಡಿಯಲ್ಲಿ ಪಾಕ್ ಡ್ರೋನ್ ಹಾವಳಿ:: ಭಾರತೀಯ ಸೇನೆಯ ತಿರುಗೇಟಿಗೆ ಬೆದರಿ ಓಡಿದ ಶತ್ರುಗಳು!

Published : Jan 17, 2026, 11:41 PM IST
Pakistani Drone Spotted in Samba India Responds

ಸಾರಾಂಶ

ದೇಶದ ಗಡಿಯಲ್ಲಿ ಪಾಕಿಸ್ತಾನ ತನ್ನ ಕುತಂತ್ರವನ್ನು ಮುಂದುವರಿಸಿದ್ದು, ಅಂತರಾಷ್ಟ್ರೀಯ ಗಡಿಯ ಸಮೀಪವಿರುವ ಸಾಂಬಾ ವಲಯದಲ್ಲಿ ಪಾಕಿಸ್ತಾನದ ಡ್ರೋನ್ ಕಾಣಿಸಿಕೊಂಡಿದೆ. ಸುಮಾರು ಐದು ನಿಮಿಷಗಳ ಕಾಲ ಭಾರತೀಯ ಗಡಿ ಪ್ರದೇಶದಲ್ಲಿ ಹಾರಾಡುತ್ತಿದ್ದ ಈ ಡ್ರೋನ್, ಭದ್ರತಾ ಪಡೆಗಳ ಕಣ್ಗಾವಲಿಗೆ ಸಿಕ್ಕಿಬಿದ್ದಿದೆ.

ದೇಶದ ಗಡಿಯಲ್ಲಿ ಪಾಕಿಸ್ತಾನ ತನ್ನ ಕುತಂತ್ರವನ್ನು ಮುಂದುವರಿಸಿದ್ದು, ಅಂತರಾಷ್ಟ್ರೀಯ ಗಡಿಯ ಸಮೀಪವಿರುವ ಸಾಂಬಾ ವಲಯದಲ್ಲಿ ಪಾಕಿಸ್ತಾನದ ಡ್ರೋನ್ ಕಾಣಿಸಿಕೊಂಡಿದೆ. ಸುಮಾರು ಐದು ನಿಮಿಷಗಳ ಕಾಲ ಭಾರತೀಯ ಗಡಿ ಪ್ರದೇಶದಲ್ಲಿ ಹಾರಾಡುತ್ತಿದ್ದ ಈ ಡ್ರೋನ್, ಭದ್ರತಾ ಪಡೆಗಳ ಕಣ್ಗಾವಲಿಗೆ ಸಿಕ್ಕಿಬಿದ್ದಿದೆ. ತಕ್ಷಣವೇ ಎಚ್ಚೆತ್ತ ಭಾರತೀಯ ಸೈನಿಕರು ಪ್ರತಿ ದಾಳಿ ನಡೆಸಲು ಸಜ್ಜಾಗುತ್ತಿದ್ದಂತೆಯೇ, ಡ್ರೋನ್ ವಾಪಸ್ ಪಾಕಿಸ್ತಾನದ ಕಡೆಗೆ ಹಾರಿದೆ.

ಎರಡು ವಾರದಲ್ಲಿ ಐದನೇ ಬಾರಿ ಅತಿಕ್ರಮಣ

ಗಡಿಯಲ್ಲಿ ಪಾಕಿಸ್ತಾನದ ಪ್ರಚೋದನಾಕಾರಿ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕಳೆದ ಕೇವಲ ಎರಡು ವಾರಗಳಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಭಾರತದ ವಾಯುಪ್ರದೇಶವನ್ನು ಪ್ರವೇಶಿಸುತ್ತಿರುವುದು ಇದು ಐದನೇ ಬಾರಿಯಾಗಿದೆ. ಪದೇ ಪದೇ ಡ್ರೋನ್ ಕಳುಹಿಸುವ ಮೂಲಕ ಗೂಢಚರ್ಯೆ ನಡೆಸಲು ಅಥವಾ ಶಸ್ತ್ರಾಸ್ತ್ರ ಪೂರೈಕೆಗೆ ಪಾಕ್ ಸಂಚು ರೂಪಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

'ಆಪರೇಷನ್ ಸಿಂಧೂರ್' ಮಾದರಿಯ ತಿರುಗೇಟಿನ ಎಚ್ಚರಿಕೆ

ವಾರ್ಷಿಕ ಸೇನಾ ದಿನದ ಮುನ್ನಾದಿನದಂದು ಮಾತನಾಡಿದ್ದ ಭೂಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ್ದಾರೆ. "ಪಾಕಿಸ್ತಾನದ ಯಾವುದೇ ದುಸ್ಸಾಹಸವನ್ನು ಭಾರತ ಬಲವಾಗಿ ಎದುರಿಸಲಿದೆ. 2025ರಲ್ಲಿ ನಾವು ನಡೆಸಿದ 'ಆಪರೇಷನ್ ಸಿಂಧೂರ್' ನಂತಹ ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿಯಲಿವೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಪೋಷಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ," ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಗಡಿ ಗ್ರಾಮಗಳಲ್ಲಿ ತೀವ್ರಗೊಂಡ ಕಣ್ಗಾವಲು

ಡ್ರೋನ್ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಾಶ್ಮೀರದ ಗಡಿ ಗ್ರಾಮಗಳಲ್ಲಿ ಭದ್ರತಾ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಶತ್ರುಗಳ ಯಾವುದೇ ಅತಿಕ್ರಮಣವನ್ನು ತಡೆಯಲು ಬಿಗಿಯಾದ ಕಣ್ಗಾವಲು ವ್ಯವಸ್ಥೆ ಮಾಡಲಾಗಿದ್ದು, ಭದ್ರತಾ ಪಡೆಗಳು ಹಗಲು-ರಾತ್ರಿ ಪಹರೆ ನಡೆಸುತ್ತಿವೆ. ಗಡಿ ನಿವಾಸಿಗಳಿಗೂ ಜಾಗರೂಕರಾಗಿರುವಂತೆ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ನಿಮ್ಮಂತಹ ದ್ವೇಷಿಯನ್ನು ನಾನು ನೋಡಿಲ್ಲ': ಧಾರ್ಮಿಕ ಕಾರಣಕ್ಕಾಗಿ ಬಾಲಿವುಡ್‌ನಲ್ಲಿ ಅವಕಾಶಗಳು ಕಡಿಮೆ ಎಂದ ಎಆರ್ ರೆಹಮಾನ್ ವಿರುದ್ಧ ಕಂಗನಾ ಕಿಡಿ!
ಗೋಲ್ಡನ್ ಟೆಂಪಲ್ ಕೊಳದಲ್ಲಿ ಮುಖ ತೊಳೆದು ಉಗುಳಿದ ಅನ್ಯಕೋಮಿನ ವ್ಯಕ್ತಿ, ಭುಗಿಲೆದ್ದ ಆಕ್ರೋಶ