ಹೆಣ್ಣುಮಕ್ಕಳನ್ನು ಹೊತ್ತೊಯ್ದು..ಗಂಗಾರಾಮ್ ಮಾತಿಗೆ ಕಣ್ಣಂಚು ತೊಯ್ದು!

nikhil vk   | Asianet News
Published : Dec 19, 2019, 02:36 PM ISTUpdated : Dec 19, 2019, 03:29 PM IST
ಹೆಣ್ಣುಮಕ್ಕಳನ್ನು ಹೊತ್ತೊಯ್ದು..ಗಂಗಾರಾಮ್ ಮಾತಿಗೆ ಕಣ್ಣಂಚು ತೊಯ್ದು!

ಸಾರಾಂಶ

ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಕಾಯ್ದೆ| ನೆರೆಯ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೊಳಗಾದ ಧಾರ್ಮಿಕಅಲ್ಪಸಂಖ್ಯಾತರಿಗೆ ನೆರಳಾಗಲಿದೆ ಭಾರತ| ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿರುವ ಅಲ್ಪಸಂಖ್ಯಾತರಿಗೆ ನೆರವು| ನಿರ್ಭಿತ ಹಾಗೂ ಸ್ವಚ್ಛಂದ ಸಮಾಜದಲ್ಲಿ ಸ್ವತಂತ್ರ್ಯವಾಗಿ ಉಸಿರಾಡುವ ಅವಕಾಶ|ಪಾಕಿಸ್ತಾನಿ ಶರಣಾರ್ಥಿಗಳ ಬದುಕು ಬವಣೆಯ ಕುರಿತು ನಿಮ್ಮ ಸುವರ್ಣನ್ಯೂಸ್.ಕಾಂ ವಿಸ್ತೃತ ವರದಿ| ಪಾಕಿಸ್ತಾನಿ ಹಿಂದೂ ಶರಣಾರ್ಥಿ ಗಂಗಾರಾಮ್ ಮನದಾಳದ ಮಾತುಗಳು|

ಬೆಂಗಳೂರು(ಡಿ.19): ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದಲ್ಲಿ ಸಂಚಲನ ಮೂಡಿಸಿದೆ. ದಶಕಗಳಿಂದ ನಮ್ಮ ನೆರೆಯ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೆ ಗುರಿಯಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತ ನೆರಳಾಗುವ ಭರವಸೆ ನೀಡಿದೆ. ಆದರೆ ಈ ಕಾಯ್ದೆ ಭಾರತದಲ್ಲೇ ಧಾರ್ಮಿಕ ಕಂದಕಕ್ಕೆ ಮುನ್ನಡಿ ಬರೆಯಲಿದೆ ಎಂಬ ವಾದವೂ ಮುನ್ನೆಲೆಗೆ ಬಂದಿದೆ.

ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿರುವ ಹಿಂದೂ, ಬೌದ್ಧ, ಕ್ರಿಶ್ಚಿಯನ್ ಹಾಗೂ ಜೋರಾಸ್ಟ್ರಿಯನ್ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವುದು ಪೌರತ್ವ ತಿದ್ದುಪಡಿ ಕಾಯ್ದೆಯ ಸದುದ್ದೇಶ.

ಪೌರತ್ವ ತಿದ್ದುಪಡಿ ಕುರಿತು ಭಾರತದಲ್ಲೇಕೆ ಚರ್ಚೆ ಶುರುವಾಗಿದೆ? ಕೆಲವರಿಗೇಕೆ ಭೀತಿ ಎದುರಾಗಿದೆ? ಅಷ್ಟಕ್ಕೂ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾರೆಂದರೆ ಯಾರು? ಈ ರಾಷ್ಟ್ರಗಳಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟಗಳೇನು? ಈ ಎಲ್ಲವುಗಳ ಕುರಿತು ನಿಮ್ಮ ಸುವರ್ಣನ್ಯೂಸ್.ಕಾಂ ಸರಣಿ ಲೇಖನ ಪ್ರಕಟಿಸಲಿದೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಅದರಲ್ಲೂ ಹಿಂದೂ ಧರ್ಮೀಯರು ಭಯದ ನೆರಳಲ್ಲೇ ಬದುಕುತ್ತಿದ್ದಾರೆ. ಧರ್ಮದ ಅಧಾರದ ಮೇಲೆಯೇ ರಚನೆಯಾಗಿರುವ ಪಾಕಿಸ್ತಾನದಲ್ಲಿ ಅನ್ಯ ಕೋಮಿನ ಜನರಿಗೆ ನೀಡುವ ಕಿರುಕುಳ ಹೇಳ ತೀರದು.

ಈ ಅನ್ಯಾಯವನ್ನು ಸಹಿಸಲಾಗದೇ ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಗಂಗಾರಾಮ್, ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ.

ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳು: ಕಷ್ಟ ಹೇಳುವ ಸರಣಿ ಲೇಖನಗಳು!

ಓವರ್ ಟು ಗಂಗಾರಾಮ್:

ಗಂಗಾರಾಮ್ ಪಾಕಿಸ್ತಾನದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಆದರೆ ಮೂಲಭೂತವಾದಿಗಳ ಹಿಂಸೆ ತಾಳಲಾರದೇ 2011ರಲ್ಲಿ ತಮ್ಮ 16 ಕುಟುಂಬದ ಸಮೇತ ಧಾರ್ಮಿಕ ವೀಸಾ ಪಡೆದು ಭಾರತಕ್ಕೆ ಬಂದು ದೆಹಲಿಯಲ್ಲಿ ಆಶ್ರಯ ಪಡೆದವರು. 

ಇದೀಗ ಪಾಕಿಸ್ತಾನದಿಂದ ಓಡಿ ಬರುವ ಹಿಂದೂ ಪರಿವಾರಗಳಿಗೆ ದೇಶದ ವಿವಿಧ ಭಾಗದಲ್ಲಿರುವ ಶರಣಾರ್ಥಿಗಳ ಕ್ಯಾಂಪ್‌ನಲ್ಲಿ ಆಶ್ರಯ ಕಲ್ಪಿಸುವಲ್ಲಿ ಗಂಗಾರಾಮ್ ನಿರತಾಗಿದ್ದಾರೆ.

ಪಾಕಿಸ್ತಾನದಲ್ಲಿ ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯ ಬಹುತೇಕ ಭಾರತೀಯರಿಗೆ ಗೊತ್ತಿಲ್ಲ. ಹಿಂದೂ ಎಂಬ ಏಕೈಕ ಕಾರಣಕ್ಕೆ ನಮ್ಮ ಮೇಲೆ ಪಾಕಿಸ್ತಾನದಲ್ಲಿ ದೌರ್ಜನ್ಯ ನಡೆಯುತ್ತದೆ.

ಹಿಂದೂ ಹೆಣ್ಣುಮಕ್ಕಳನ್ನು ಅಪ್ರಾಪ್ತರೂ ಎನ್ನದೇ ಹೊತ್ತೊಯ್ದು ಅತ್ಯಾಚಾರ ಮಾಡಲಾಗುತ್ತದೆ. ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಅವರನ್ನು ಸತಾಯಿಸಲಾಗುತ್ತದೆ.

ಅಪ್ರಾಪ್ತ ಗಂಡು-ಹೆಣ್ಣುಮಕ್ಕಳನ್ನು ಹೊತ್ತೊಯ್ದು  ಹಣ ಪಡೆದು ಗಂಡುಮಕ್ಕಳನ್ನು ಬಿಡುಗಡೆ ಮಾಡುತ್ತಾರೆ. ಆದರೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ ಅವರನ್ನು ಒತ್ತಾಯಪೂರ್ವಕವಾಗಿ ಇಸ್ಲಾಂಗೆ ಮತಾಂತರ ಮಾಡಲಾಗುತ್ತದೆ.

ಈ ಅನ್ಯಾಯ-ಅತ್ಯಾಚಾರಗಳನ್ನು ಪ್ರತಿಭಟಿಸಿದರೆ ಸಾವು ಕಟ್ಟಿಟ್ಟ ಬುತ್ತಿ. ವ್ಯವಸ್ಥೆ ಕೂಡ ಮುಸ್ಲಿಂ ಮೂಲಭುತವಾದಿಗಳ ಪರವಾಗಿದ್ದು, ನಮಗೆ ನ್ಯಾಯ ಸಿಗುವ ಭರವಸೆ ಖಂಡಿತ ಇಲ್ಲ. 

ಇದೇ ಕಾರಣಕ್ಕೆ ಕುಟುಂಬ ಸಮೇತರಾಗಿ ಪಾಕಿಸ್ತಾನದಿಂದ ಓಡಿ ಬಂದು ದೆಹಲಿಯಲ್ಲಿ ಆಶ್ರಯ ಪಡೆದಿದ್ದೇವೆ. ಮೋದಿ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ನಮ್ಮ ಬದುಕಿನಲ್ಲಿ ಹೊಸ ಭರವಸೆಯ ಕಿರಣ ಮೂಡಿದ್ದು, ಗೌರವಪೂರ್ಣ ಬದುಕು ನಡೆಸುವ ನಮ್ಮ ಆಸೆ ಈಡೇರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು