ಇಲ್ಲೇ ಸಾಯ್ತಿನಿ, ಆದ್ರೆ ಪಾಕ್ ಎಂಬ ನರಕಕ್ಕೆ ಮತ್ತೆ ಹೋಗುವುದಿಲ್ಲ: ಮಂಗಲ್‌ದಾಸ್!

By nikhil vkFirst Published Dec 20, 2019, 3:27 PM IST
Highlights

ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಕಾಯ್ದೆ| ನೆರೆಯ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೊಳಗಾದ ಧಾರ್ಮಿಕಅಲ್ಪಸಂಖ್ಯಾತರಿಗೆ ನೆರಳಾಗಲಿದೆ ಭಾರತ| ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿರುವ ಅಲ್ಪಸಂಖ್ಯಾತರಿಗೆ ನೆರವು| ನಿರ್ಭಿತ ಹಾಗೂ ಸ್ವಚ್ಛಂದ ಸಮಾಜದಲ್ಲಿ ಸ್ವತಂತ್ರ್ಯವಾಗಿ ಉಸಿರಾಡುವ ಅವಕಾಶ|ಪಾಕಿಸ್ತಾನಿ ಶರಣಾರ್ಥಿಗಳ ಬದುಕು ಬವಣೆಯ ಕುರಿತು ನಿಮ್ಮ ಸುವರ್ಣನ್ಯೂಸ್.ಕಾಂ ವಿಸ್ತೃತ ವರದಿ| ಪಾಕಿಸ್ತಾನಿ ಹಿಂದೂ ಶರಣಾರ್ಥಿ ಮಂಗಲ್‌ದಾಸ್ ಮನದಾಳದ ಮಾತುಗಳು|

ಬೆಂಗಳೂರು(ಡಿ.20):ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದಲ್ಲಿ ಸಂಚಲನ ಮೂಡಿಸಿದೆ. ದಶಕಗಳಿಂದ ನಮ್ಮ ನೆರೆಯ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೆ ಗುರಿಯಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತ ನೆರಳಾಗುವ ಭರವಸೆ ನೀಡಿದೆ. ಆದರೆ ಈ ಕಾಯ್ದೆ ಭಾರತದಲ್ಲೇ ಧಾರ್ಮಿಕ ಕಂದಕಕ್ಕೆ ಮುನ್ನಡಿ ಬರೆಯಲಿದೆ ಎಂಬ ವಾದವೂ ಮುನ್ನೆಲೆಗೆ ಬಂದಿದೆ.

ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿರುವ ಹಿಂದೂ, ಬೌದ್ಧ, ಕ್ರಿಶ್ಚಿಯನ್ ಹಾಗೂ ಜೋರಾಸ್ಟ್ರಿಯನ್ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವುದು ಪೌರತ್ವ ತಿದ್ದುಪಡಿ ಕಾಯ್ದೆಯ ಸದುದ್ದೇಶ.

ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳು: ಕಷ್ಟ ಹೇಳುವ ಸರಣಿ ಲೇಖನಗಳು!


ಪೌರತ್ವ ತಿದ್ದುಪಡಿ ಕುರಿತು ಭಾರತದಲ್ಲೇಕೆ ಚರ್ಚೆ ಶುರುವಾಗಿದೆ? ಕೆಲವರಿಗೇಕೆ ಭೀತಿ ಎದುರಾಗಿದೆ? ಅಷ್ಟಕ್ಕೂ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾರೆಂದರೆ ಯಾರು? ಈ ರಾಷ್ಟ್ರಗಳಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟಗಳೇನು? ಈ ಎಲ್ಲವುಗಳ ಕುರಿತು ನಿಮ್ಮ ಸುವರ್ಣನ್ಯೂಸ್.ಕಾಂ ಸರಣಿ ಲೇಖನ ಪ್ರಕಟಿಸಲಿದೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಅದರಲ್ಲೂ ಹಿಂದೂ ಧರ್ಮೀಯರು ಭಯದ ನೆರಳಲ್ಲೇ ಬದುಕುತ್ತಿದ್ದಾರೆ. ಧರ್ಮದ ಅಧಾರದ ಮೇಲೆಯೇ ರಚನೆಯಾಗಿರುವ ಪಾಕಿಸ್ತಾನದಲ್ಲಿ ಅನ್ಯ ಕೋಮಿನ ಜನರಿಗೆ ನೀಡುವ ಕಿರುಕುಳ ಹೇಳ ತೀರದು.

ಈ ಅನ್ಯಾಯವನ್ನು ಸಹಿಸಲಾಗದೇ ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಮಂಗಲ್‌ದಾಸ್, ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ.

ಹೆಣ್ಣುಮಕ್ಕಳನ್ನು ಹೊತ್ತೊಯ್ದು..ಗಂಗಾರಾಮ್ ಮಾತಿಗೆ ಕಣ್ಣಂಚು ತೊಯ್ದು!

ಓವರ್ ಟು ಮಂಗಲ್‌ದಾಸ್:

ನಾನು ನನ್ನ ಪರಿವಾರ ಸಮೇತವಾಗಿ ಇದೇ ಡಿ.06ರಂದು ಪಾಕಿಸ್ತಾನದಿಂದ ಭಾರತಕ್ಕೆ ಓಡಿ ಬಂದಿದ್ದೇನೆ. ನನಗೆ ಭಾರತದ ಪೌರತ್ವ ಸಿಗದಿದ್ದರೆ ಶರಣಾರ್ಥಿಗಳ ಕ್ಯಾಂಪ್‌ನಲ್ಲೇ ಸಾಯುವೆ, ಆದರೆ ಪಾಕಿಸ್ತಾನ ಎಂಬ ನರಕಕ್ಕೆ ಮಾತ್ರ ಮತ್ತೆ ಮರಳಿ ಹೋಗುವುದಿಲ್ಲ.

ಪಾಕಿಸ್ತಾನದಲ್ಲಿ ನಾವು ಅನುಭಿವಿಸಿದ ಸಂಕಟ, ಯಾತನೆ ಯಾವ ಶತ್ರುವಿಗೂ ಬೇಡ. ಪಾಕಿಸ್ತಾನ ನಮ್ಮಿಂದ ಕೇವಲ ಬದುಕನ್ನಷ್ಟೇ ಅಲ್ಲ, ನಮ್ಮ ಗೌರವವನ್ನೇ ಕಸಿದುಕೊಂಡಿದೆ. ಆತ್ಮ ಗೌರವವಲ್ಲಿದೇ ಬದುಕುವುದು ಅದೆಷ್ಟು ದುಸ್ತರ ಎಂಬುದು ನಮಗೆ ಮಾತ್ರ ಗೊತ್ತು.

ಓಡಿ ಬರುವುದು ಬಿಟ್ಟರೆ ಬೇರೇನು ಮಾರ್ಗ?: ಸೋನ್‌ದಾಸ್ ಪ್ರಕಾರ ಭಾರತವೇ ಸ್ವರ್ಗ!

ಗೂಂಡಾ ಟ್ಯಾಕ್ಸ್ ಹೆಸರಲ್ಲಿ ನಾವು ಕಷ್ಟಪಟ್ಟು ದುಡಿದಿದ್ದನ್ನೆಲ್ಲಾ ಕಸಿದುಕೊಳ್ಳುವ ಮುಸ್ಲಿಂ ಮೂಲಭೂತವಾದಿಗಳು, ತೆರಿಗೆ ಕಟ್ಟಲು ವಿಫಲವಾದರೆ ನಮ್ಮ ಕಣ್ಣ ಮುಂದೆಯೇ ಮನೆಯ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ.

ಈ ಎಲ್ಲಾ ಅನ್ಯಾಯಗಳನ್ನು ಸಹಿಸಿಕೊಂಡು ಬದುಕುವುದು ಅಸಾಧ್ಯವಾಗಿತ್ತು. ಈ ಕಾರಣಕ್ಕೆ ಧಾರ್ಮಿಕ ವೀಸಾ ಸಿಕ್ಕಿದ್ದೇ ತಡ, ಕುಟುಂಬ ಸಮೇತರಾಗಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿದ್ದೇವೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ನಮಗೆ ಹೊಸ ಬದುಕು ಕಟ್ಟಿಕೊಳ್ಳುವ ಅವಕಾಶ ಸಿಕ್ಕಿದೆ.

ನಮ್ಮದೇ ಜಮೀನಲ್ಲಿ ನಾವು ಜೀತದಾಳು: ಧರ್ಮವೀರ್ ಸಂಕಟ ತರಿಸಿದ ಅಳು!

ಇದು ಸಾಧ್ಯವಾಗದಿದ್ದರೆ ನಾನು ಮತ್ತು ನನ್ನ ಕುಟುಂಬ ಶರಣಾರ್ಥಿಗಳ ಕ್ಯಾಂಪ್‌ನಲ್ಲೇ ಸಾಯಲು ಸಿದ್ಧ. ಆದರೆ ಯಾವುದೇ ಕಾರಣಕ್ಕೂ ಪಾಕಿಸ್ತಾನ ಎಂಬ ನರಕಕ್ಕೆ ಮತ್ತೆ ಹೋಗುವುದಿಲ್ಲ ಎಂದು ಮಂಗಲ್‌ದಾಸ್ ಹೇಳುತ್ತಾರೆ.

ಡಿಸೆಂಬರ್ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!