ಪನ್ನೀರಸೆಲ್ವಂಗೆ ಅಣ್ಣಾಡಿಎಂಕೆ ಬಾಗಿಲು ತೆರೆದಿದೆ, ಆದರೆ ಬಹುದೊಡ್ಡ ಆಫರ್‌ ಇಟ್ಟ ಮಾಜಿ ಸಿಎಂ!

Published : Feb 16, 2025, 08:21 AM ISTUpdated : Feb 16, 2025, 08:28 AM IST
ಪನ್ನೀರಸೆಲ್ವಂಗೆ ಅಣ್ಣಾಡಿಎಂಕೆ ಬಾಗಿಲು ತೆರೆದಿದೆ, ಆದರೆ ಬಹುದೊಡ್ಡ ಆಫರ್‌ ಇಟ್ಟ ಮಾಜಿ ಸಿಎಂ!

ಸಾರಾಂಶ

ಉಚ್ಚಾಟಿತ ನಾಯಕ ಒ.ಪನ್ನೀರಸೆಲ್ವಂ, ಶಶಿಕಲಾ ಮತ್ತು ಟಿಟಿವಿ ದಿನಕರನ್ ಅಣ್ಣಾಡಿಎಂಕೆಗೆ ಮರಳಲು ಆಸಕ್ತಿ ತೋರಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕಾರ್ಯಕರ್ತರಿಂದ ಚುನಾವಣೆ ನಡೆದರೆ ಮಾತ್ರ ಮರಳುವುದಾಗಿ ಷರತ್ತು ವಿಧಿಸಿದ್ದಾರೆ. ಏಕಪಕ್ಷೀಯ ನೇಮಕಾತಿಯನ್ನು ವಿರೋಧಿಸಿದ್ದಕ್ಕೆ ಪನ್ನೀರಸೆಲ್ವಂರನ್ನು ಈ ಹಿಂದೆ ಪಕ್ಷದಿಂದ ಹೊರಹಾಕಲಾಗಿತ್ತು. ಆದರೆ, ನ್ಯಾಯಾಲಯದಲ್ಲಿರುವ ವಿಚಾರಗಳನ್ನು ಹಿಂಪಡೆದು, ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸದಿದ್ದರೆ ಮಾತ್ರ ಪಕ್ಷಕ್ಕೆ ಮರಳಲು ಅವಕಾಶ ಎಂದು ಅಣ್ಣಾಡಿಎಂಕೆ ತಿಳಿಸಿದೆ.

ಚೆನ್ನೈ: ಅಣ್ಣಾ ಡಿಎಂಕೆಯಿಂದ ಉಚ್ಚಾಟನೆಗೊಂಡಿದ್ದ ತಮಿಳುನಾಡು ಮಾಜಿ ಸಿಎಂ ಒ. ಪನ್ನೀರಸೆಲ್ವಂ, ಪಕ್ಷಕ್ಕೆ ಮರಳುವ ಇರಾದೆ ವ್ಯಕ್ತಪಡಿಸಿದ್ದಾರೆ. ತಾವಲ್ಲದೆ ಪಕ್ಷದ ದಿವಂಗತ ನಾಯಕಿ ಜಯಲಲಿತಾರ ಆಪ್ತ ಗೆಳತಿ ವಿ.ಕೆ. ಶಶಿಕಲಾ ಹಾಗೂ ಮುಖಂಡ ಟಿಟಿವಿ ದಿನಕರನ್‌ ಕೂಡ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ ಎಂದಿದ್ದಾರೆ.

ಆದರೆ ಅದಕ್ಕೆ ಅವರು ಷರತ್ತು ವಿಧಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ (ಅಧ್ಯಕ್ಷ ಹುದ್ದೆಗೆ ಸಮನಾದ ಪದವಿ) ಹುದ್ದೆಗೆ ಕಾರ್ಯಕರ್ತರಿಂದ ಚುನಾವಣೆ ನಡೆಯಬೇಕು. ಏಕಪಕ್ಷೀಯ ಆಯ್ಕೆ ನಡೆಯಕೂಡದು. ಆಗ ತಾವು ಪಕ್ಷಕ್ಕೆ ಮರಳುತ್ತೇವೆ ಎಂದಿದ್ದಾರೆ.

ಅಣ್ಣಾ ಡಿಎಂಕೆಗೆ ಎಡಪ್ಪಾಡಿ ಪಳನಿಸ್ವಾಮಿಯೇ ಬಾಸ್‌, ಒಪಿಎಸ್‌ಗೆ ಭಾರಿ ಹಿನ್ನಡೆ

2022ರಲ್ಲಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಪಕ್ಷದ ಸಂವಿಧಾನ ಬದಲಿಸಿ ಏಕಪಕ್ಷೀಯವಾಗಿ ಪ್ರಧಾನ ಕಾರ್ಯದರ್ಶಿ ಮಾಡಿದ್ದನ್ನು ಪನ್ನೀರಸೆಲ್ವಂ ವಿರೋಧಿಸಿದ್ದರು. ಆಗ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಅಣ್ಣಾಡಿಎಂಕೆಗೆ ಶೀಘ್ರ ಏಕನಾಯಕತ್ವ: ಈ ನಿರ್ಧಾರದ ಹಿಂದಿದೆ ಶಶಿಕಲಾ ಷಡ್ಯಂತ್ರ!

ಸುಮ್ಮನೇ ಕರೆದುಕೊಳ್ಳಲ್ಲ- ಅಣ್ಣಾಡಿಎಂಕೆ: ಈ ನಡುವೆ, ಪನ್ನೀರಸೆಲ್ವಂ ಆಫರ್‌ಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ ಡಿಎಂಕೆ ನಾಯಕ ವಿ.ವಿ. ರಾಜನ್‌ ಚೆಲ್ಲಪ್ಪ, ‘ಪಕ್ಷದ ವಿದ್ಯಮಾನಗಳ ವಿರುದ್ಧ ಪನ್ನೀರಸೆಲ್ವಂ ಈಗಾಗಲೇ ಕೋರ್ಟಿಗೆ ಹೋಗಿದ್ದಾರೆ. ಇನ್ನು ಮುಂದೆ ಅವರು ಕೋರ್ಟಿಗೆ ಹೋಗುವುದನ್ನು ನಿಲ್ಲಿಸಬೇಕು ಹಾಗೂ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತಾಡಕೂಡದು. ಆಗ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಪರೇಷನ್ ಸಿಂದೂರ್ ವೇಳೆ ಯೋಧರಿಗೆ ನೆರವಾದ ಬಾಲಕನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2026
ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ