ಚಿಕಿತ್ಸೆ ಸಿಗದೇ ಬಲಿಯಾದ ಮಗು ಎದೆಗಪ್ಪಿಕೊಂಡು ಪೋಷಕರ ಆಕ್ರಂದನ!

Published : Jun 30, 2020, 09:46 AM ISTUpdated : Jun 30, 2020, 10:15 AM IST
ಚಿಕಿತ್ಸೆ ಸಿಗದೇ ಬಲಿಯಾದ ಮಗು ಎದೆಗಪ್ಪಿಕೊಂಡು ಪೋಷಕರ ಆಕ್ರಂದನ!

ಸಾರಾಂಶ

ಕುತ್ತಿಗೆ ಊತ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ ಮಗು| ಚಿಕಿತ್ಸೆಗೂ ಮುನ್ನವೇ ಆಸ್ಪತ್ರೆಯಲ್ಲೇ ಸಾವು| ಸಾವಿಗೀಡಾದ ಮಗುವನ್ನೆತ್ತಿ ಪೋಷಕರ ಆಕ್ರಂದನ

ಕನೌಜ್(ಜೂ.30)‌: ಕುತ್ತಿಗೆ ಊತ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ ಮಗು ಚಿಕಿತ್ಸೆಗೂ ಮುನ್ನವೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ ಮನಕಲಕುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಾವಿಗೀಡಾದ ಮಗುವನ್ನು ಪೋಷಕರು ಕಂಕುಳಲ್ಲೇ ಎತ್ತಿಕೊಂಡು ಯಾತನೆ ಪಡುತ್ತಿರುವ ದಂಪತಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

'ಬಾಯ್ ಅಪ್ಪಾ.. ನನಗೆ ಉಸಿರಾಡೋಕಾಗ್ತಿಲ್ಲ, ಅವ್ರು ವೆಂಟಿಲೇಟರ್ ತೆಗೆದಿದ್ದಾರೆ...!'

ಈ ವಿಡಿಯೋವನ್ನು ಕಂಡವರು ಮಗು ಕಳೆದುಕೊಂಡ ಪೋಷಕರ ಕರುಣಾಜನಕ ಸ್ಥಿತಿಗೆ ವ್ಯಥೆ ಪಟ್ಟಿದ್ದಾರೆ. ಹೀಗೆ, ಕಂದಮ್ಮನನ್ನು ಕಳೆದುಕೊಂಡ ಸಂತ್ರಸ್ತರನ್ನು ಪ್ರೇಮ್‌ಚಂದ್‌ ಹಾಗೂ ಆಶಾದೇವಿ ಎಂದು ಗುರುತಿಸಲಾಗಿದೆ.

ಕುತ್ತಿಗೆ ಊತ ಹಾಗೂ ಜ್ವರದಿಂದ ಅಸ್ವಸ್ತವಾಗಿದ್ದ ಮಗುವನ್ನು ಪೋಷಕರು ಕನೌಜ್‌ನ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದೆವು. ಈ ವೇಳೆ ವೈದ್ಯರು ತಮ್ಮ ಮಗುವಿಗೆ ಚಿಕಿತ್ಸೆ ನೀಡುವುದಿರಲಿ, ಮಗುವನ್ನು ಮುಟ್ಟಿಯೂ ನೋಡಲಿಲ್ಲ. ಇದರಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು